AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಲಾನುಭವಿಗಳಿಗೆ ಇನ್ನೂ ಯಾಕೆ ಗೃಹಲಕ್ಷ್ಮಿ ಹಣ ತಲುಪಿಲ್ಲ? ಹಾಸನದಲ್ಲಿ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಜಿಲ್ಲೆಯಲ್ಲಿ 44 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪಿಲ್ಲ. ಈ ಬಗ್ಗೆ ಡಿಸಿ, ಜಿ.ಪಂ. ಸಿಇಒ ಪರಿಶೀಲನೆ ಮಾಡಬೇಕು. ಸರ್ಕಾರ ಹಣ ಕೊಡಲು ತಯಾರಿರುವಾಗ ನೀವು ಅದನ್ನು ಗಮನಿಸಬೇಕು ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಹೇಳಿದರು.

ಫಲಾನುಭವಿಗಳಿಗೆ ಇನ್ನೂ ಯಾಕೆ ಗೃಹಲಕ್ಷ್ಮಿ ಹಣ ತಲುಪಿಲ್ಲ? ಹಾಸನದಲ್ಲಿ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ
ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ
ಮಂಜುನಾಥ ಕೆಬಿ
| Edited By: |

Updated on: Nov 07, 2023 | 5:52 PM

Share

ಹಾಸನ, ನವೆಂಬರ್ 7: ಕಾಂಗ್ರೆಸ್ ಸರ್ಕಾರದ ಮಹತ್ವದ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣ ಹಲವೆಡೆ ಇನ್ನೂ ಫಲಾನುಭವಿಗಳಿಗೆ ತಲುಪಿಲ್ಲ ಎಂಬ ಆರೋಪಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳನ್ನು ವಿಚಾರಿಸಿದರು. ಹಾಸನ ಪ್ರವಾಸದಲ್ಲಿರುವ ಅವರು ಹಾಸನ (Hassan) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದರು. ಎಲ್ಲ ಫಲಾನುಭವಿಗಳಿಗೆ ಇನ್ನೂ ಯಾಕೆ ‘ಗೃಹಲಕ್ಷ್ಮಿ’ ಹಣ ತಲುಪಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲೆಯ ಮೂರು ತಾಲೂಕುಗಳಲ್ಲಿ ಶೇ 90ಕ್ಕಿಂತ ಕಡಿಮೆ ಯಾಕಾಗಿದೆ? ಡಿಸಿ, ಸಿಇಒ‌ ಜೊತೆ ಮಾತಾಡಿ ಎಲ್ಲರ ಖಾತೆಗೆ ಹಣ ಹೋಗುವಂತೆ ಮಾಡಿ‌ ಎಂದು ಪ್ರಗತಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಜಿಲ್ಲೆಯಲ್ಲಿ 44 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪಿಲ್ಲ. ಈ ಬಗ್ಗೆ ಡಿಸಿ, ಜಿ.ಪಂ. ಸಿಇಒ ಪರಿಶೀಲನೆ ಮಾಡಬೇಕು. ಸರ್ಕಾರ ಹಣ ಕೊಡಲು ತಯಾರಿರುವಾಗ ನೀವು ಅದನ್ನು ಗಮನಿಸಬೇಕು ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಹೇಳಿದರು.

ಗೃಹಜ್ಯೋತಿ ಯೋಜನೆಗೂ 63 ಸಾವಿರ ಗ್ರಾಹಕರ ನೋಂದಣಿ ಆಗಬೇಕು. ಎಲ್ಲವನ್ನೂ ಗಮನಿಸಿ ಅವರು ಅರ್ಹರಿದ್ದರೆ ಮಾಡಿ, ಇಲ್ಲವಾದರೆ ಕೈಬಿಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಒಂದೇ ದಿನ ಹಾಸನಾಂಬೆ ದರ್ಶನ ಪಡೆದ ಸಿದ್ದರಾಮಯ್ಯ-ಕುಮಾರಸ್ವಾಮಿ ಹೇಳಿದ್ದೇನು?

ನಾನು ಮಟ್ಕಾ ನಿಲ್ಲಿಸಿ ಎಂದು ಹೇಳಿದ್ದೇನೆ. ಜಿಲ್ಲೆಯಲ್ಲಿ ಮಟ್ಕ ನಿಂತಿದೆಯಾ? ಧೈರ್ಯವಾಗಿ ಎದೆತಟ್ಟಿ ಹೇಳಮ್ಮ ಎಂದು ಸಿದ್ದರಾಮಯ್ಯ ಸೂಚಿಸಿದರು. ಇದೇ ವೇಳೆ, ನಿರಂತರವಾಗಿ ಕ್ರಮ ಕೈಗೊಳ್ಳುತ್ತಾ ಇದ್ದೇವೆ ಎಂದು ಎಸ್​ಪಿ ತಿಳಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅದು ಬೇರೆ ವಿಚಾರ. ಮಟ್ಕಾ ನಿಂತಿದೆಯಾ ಹೇಳಿ. ಮಟ್ಕಾ ನಿಲ್ಲಬೇಕು, ಡ್ರಗ್ಸ್ ನಿಲ್ಲಬೇಕು, ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಕಡಿವಾಣ ಹಾಕಲೇಬೇಕು. ನಿಮ್ಮ ಇನ್ಸ್​​​ಪೆಕ್ಟರ್ ಜನಪರವಾಗಿ ಇದ್ದರೆ ಸಹಜವಾಗಿ ಅಪರಾದ ಕಡಿಮೆ ಆಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ನೀವು ಕೆಲಸ ಮಾಡೋದಷ್ಟೇ ಅಲ್ಲ, ನಿಮ್ಮ ಕೈ ಕೆಳಗಿನ ಅಧಿಕಾರಿಗಳು ಕೆಲಸ ಮಾಡಬೇಕು. ಅಧಿಕಾರಿಗಳು ಜನಪರವಾಗಿ ಇದ್ದರೆ ಜನರು ನಮ್ಮ ಬಳಿ ಬರೋದಿಲ್ಲ ಎಂದು ಒಂದೊಂದೇ ಇಲಾಖೆ ಅದಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಟಿ ಬೀಸಿರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್