AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bribe and Honesty: ಹಾಸನದಲ್ಲಿ ಹೀಗೊಬ್ಬ ಅಧಿಕಾರಿ -ನಾನು ಭ್ರಷ್ಟನಲ್ಲ, ಲಂಚ ಸ್ವೀಕರಿಸುವುದಿಲ್ಲ‌ ಎಂದು ಬೋರ್ಡ್ ಹಾಕಿಕೊಂಡಿದ್ದಾರೆ!

Hasan BEO Superintendent: ಈ ಲಂಚಾಸುರಗಳ ಹಾವಳಿಯ ಮಧ್ಯೆ ಹಾಸನದ ಬಿಇಒ ಕಛೇರಿಯ ಅಧೀಕ್ಷಕ ಡಿಎಸ್ ಲೋಕೇಶ್ ಅವರು ತಮ್ಮ ಟೇಬಲ್ ಮೇಲೆ ನಾನು ಭ್ರಷ್ಟನಲ್ಲ‌, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿಕೊಳ್ಳುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Bribe and Honesty: ಹಾಸನದಲ್ಲಿ ಹೀಗೊಬ್ಬ ಅಧಿಕಾರಿ -ನಾನು ಭ್ರಷ್ಟನಲ್ಲ, ಲಂಚ ಸ್ವೀಕರಿಸುವುದಿಲ್ಲ‌ ಎಂದು ಬೋರ್ಡ್ ಹಾಕಿಕೊಂಡಿದ್ದಾರೆ!
ನಾನು ಭ್ರಷ್ಟನಲ್ಲ, ಲಂಚ ಸ್ವೀಕರಿಸುವುದಿಲ್ಲ‌ ಎಂದು ಬೋರ್ಡ್ ಹಾಕಿಕೊಂಡಿದ್ದಾರೆ!
ಮಂಜುನಾಥ ಕೆಬಿ
| Edited By: ಸಾಧು ಶ್ರೀನಾಥ್​|

Updated on:Nov 07, 2023 | 4:45 PM

Share

ಹಾಸನ, ನವೆಂಬರ್ 7: ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ‌ ಎಂದು ಬೋರ್ಡ್ ಹಾಕಿಕೊಂಡ ಸರ್ಕಾರಿ ಅಧಿಕಾರಿಯೊಬ್ಬರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಎಲ್ಲೆಡೆ ಲಂಚ, 30 %, 40 % , 45 % ಲಂಚ, ಕಮೀಷನ್ (Corruption)​​​ ಎಂಬ ಆರೋಪ-ಪ್ರತ್ಯಾರೋಪಗಳೇ ಕೇಳಿಬರುತ್ತಿರುವ ಈ ಸಂದರ್ಭದಲ್ಲಿ ಮತ್ತು ಅನಾದಿ ಕಾಲದಿಂದಲೂ ಸರ್ಕಾರಿ ಕಛೇರಿಗಳಲ್ಲಿ ಲಂಚ (Bribe) ಇಲ್ಲದೆ ಏನೂ ಕೆಲಸ ಆಗಲ್ಲ, ಒಂದೇ ಒಂದು ಕಡತ ಅಲುಗಾಡಲ್ಲ ಎನ್ನೋ ನೋವು ಜನರಲ್ಲಿ ಬೇರೂರಿದೆ.

ಈ ಲಂಚಾಸುರಗಳ ಹಾವಳಿಯ ಮಧ್ಯೆ ಹಾಸನದ ಬಿಇಒ ಕಛೇರಿಯ ಅಧೀಕ್ಷಕ ಡಿಎಸ್ ಲೋಕೇಶ್ (Hasan BEO Superintendent) ಅವರು ತಮ್ಮ ಟೇಬಲ್ ಮೇಲೆ ನಾನು ಭ್ರಷ್ಟನಲ್ಲ‌, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿಕೊಳ್ಳುವ ಮೂಲಕ ಪ್ರಾಮಾಣಿಕತೆ (Honesty) ಮೆರೆಯುತ್ತಿದ್ದಾರೆ.

also read:  ಮಾರುವೇಷದಲ್ಲಿ ಬೈಕ್ ಮೇಲೆ RTO ಕಚೇರಿಗೆ ಬಂದ ಶಾಸಕ, ಓಡಿ ಹೋದ ಬ್ರೋಕರುಗಳು, ಚುನಾವಣೆ ಸ್ಪರ್ಧೆಗೆ ಯತ್ನಿಸಿದ್ದ ಇನ್ಸ್​ಪೆಕ್ಟರ್​​ಗೆ ವಾರ್ನಿಂಗ್!

ಎಲ್ಲೆಡೆ ಲಂಚಾವತಾರವೇ ತಾಂಡವವಾಡುತ್ತಿರುವಾಗ ಲೋಕೇಶ್ ಅವರ ಈ ಎದೆಗಾರಿಕೆಯ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಈ ಹಿಂದೆ ಮಾಜಿ ಪ್ರಧಾನಿ ಅವರ ಆಪ್ತ ಕಾರ್ಯದರ್ಶಿ ಆಗಿ ಕೆಲಸ ಮಾಡಿದ್ದ ಲೋಕೇಶ್ ಅವರು ತಮ್ಮ ಜನಸ್ನೇಹಿ ಕೆಲಸದಿಂದ‌ ಮೆಚ್ಚುಗೆ ಗಳಿಸಿದ್ದರು. ಇದೀಗ ಪ್ರಮೋಷನ್ ಪಡೆದು ಬಿಇಓ ಕಛೇರಿಯ ಅಧೀಕ್ಷರಾಗಿದ್ದು ಅವರು ಕರ್ತವ್ಯ ಆರಂಭಿಸಿದ ದಿನದಿಂದ ಹೀಗೊಂದು ಬೋರ್ಡ್ ಹಾಕಿಕೊಂಡು ಕೆಲಸ ಮಾಡುತ್ತಿರುವುದು ಎಲ್ಲರ ಗಮನ ಸೆಳೆದಿದೆ. ಇಂತಹ ಪ್ರಾಮಾಣಿಕ ಅಧಿಕಾರಿಗಳ ಸಂಖ್ಯೆ ಹೆಚ್ಚಾಗಲಿ ಎಂಬುದೊಂದೇ ಬಡಬೋರೇಗೌಡನ ಆಶಯವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:41 pm, Tue, 7 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ