AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hasanamba 2023: ಮುಂದಿನ ವರ್ಷಕ್ಕೆ ಹಾಸನಾಂಬೆ ದರ್ಶನ ದಿನಾಂಕ ನಿಗದಿಯಾಯ್ತು

Hasanamba darshan: ಮುಂದಿನ ವರ್ಷ 14 ದಿನ ಹಾಸನಾಂಬೆ ಗರ್ಭಗುಡಿ ಬಾಗಿಲು ಓಪನ್ ಆಗಿರುತ್ತದೆ.

Hasanamba 2023: ಮುಂದಿನ ವರ್ಷಕ್ಕೆ ಹಾಸನಾಂಬೆ ದರ್ಶನ ದಿನಾಂಕ ನಿಗದಿಯಾಯ್ತು
ಮುಂದಿನ ವರ್ಷಕ್ಕೆ ಹಾಸನಾಂಬೆ ದರ್ಶನ ದಿನಾಂಕ ಫಿಕ್ಸ್​
TV9 Web
| Edited By: ಸಾಧು ಶ್ರೀನಾಥ್​|

Updated on:Oct 27, 2022 | 4:58 PM

Share

ಹಾಸನ: ಮುಂದಿನ ವರ್ಷ 2023ನೇ ಸಾಲಿಗೆ ಜಗನ್ಮಾತೆ ಹಾಸನಾಂಬೆಯ (Hasanamba 2023) ದರ್ಶನಕ್ಕೆ ದಿನಾಂಕ ನಿಗದಿಯಾಗಿದೆ. 2023ರ ನವೆಂಬರ್ 2 ರಿಂದ 15ರವರೆಗೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಏರ್ಪಟ್ಟಿದೆ. ಮುಂದಿನ ವರ್ಷ 14 ದಿನ ಹಾಸನಾಂಬೆ ಗರ್ಭಗುಡಿ ಬಾಗಿಲು ಓಪನ್ ಆಗಿರುತ್ತದೆ. ಗಮನಾರ್ಹವೆಂದರೆ, ಈ ವರ್ಷ 15 ದಿನಗಳ ಕಾಲ ಹಾಸನಾಂಬೆ ದರ್ಶನಕ್ಕೆ ಅವಕಾಶ ನಿಡಲಾಗಿತ್ತು ಎಂದುಮುಂದಿನ ವರ್ಷದ ಪಂಚಾಂಗದ ಪ್ರಕಾರ ಹಾಸನಾಂಬೆ ದರ್ಶನದ ಬಗ್ಗೆ ಅರ್ಚಕರ ತಂಡದಿಂದ ಮಾಹಿತಿ ಮಾಹಿತಿ ಲಭ್ಯವಾಗಿದೆ (hassan).

ಹದಿನೈದು ದಿನಗಳ ಹಾಸನಾಂಬೆ ಉತ್ಸವಕ್ಕೆ ಇಂದೇ ಕೊನೆ:

ಪ್ರಸಕ್ತ ಸಾಲಿನಲ್ಲಿ 15 ದಿನಗಳ ಹಾಸನಾಂಬೆ ಉತ್ಸವಕ್ಕೆ ಇಂದೇ ಕೊನೆ ಬಿದ್ದಿದೆ. ಇಂದು ಮಧ್ಯಾಹ್ನ 12 ಗಂಟೆ 47 ನಿಮಿಷಕ್ಕೆ ಗರ್ಭಗುಡಿ ಬಾಗಿಲು ಬಂದ್ ಆಗಿದೆ. ಉಸ್ತುವಾರಿ ಸಚಿವ ಗೋಪಾಲಯ್ಯ, ಎಸ್​ಪಿ ಹರಿರಾಮ್​ ಶಂಕರ್​, ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಅರ್ಚಕರು ಗರ್ಭಗುಡಿ ಬಾಗಿಲು ಮುಚ್ಚಿದರು. ಅಕ್ಟೋಬರ್​ 13ರಂದು ದೇವಸ್ಥಾನದ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು.

ಹಾಸನಾಂಬೆ ಸನ್ನಿಧಿಯಲ್ಲಿ ಪೂಜಾ ವಿಧಿ ವಿಧಾನಗಳು ಇಂದು ಬೆಳಗ್ಗೆ ನೆರವೇರಿತು. ಕೊನೆ ಗಳಿಗೆಯಲ್ಲೂ ಸಾವಿರಾರು ಭಕ್ತರು ದರ್ಶನ ಪಡೆದರು. ಕೊನೆಯ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲದಿದ್ದರೂ ಭಕ್ತರು ದೇಗುಲಕ್ಕೆ ಆಗಮಿಸಿ, ದರ್ಶನ ಪಡೆದರು. ಕೊನೆಯ ‌ದಿನ ದರ್ಶನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಆಗಮಿಸಿದ್ದರು. ದೇಗುಲದ ಆವರಣದಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು.

Published On - 4:47 pm, Thu, 27 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ