AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hasanamba Darshan: ಇಂದು ಹಾಸನಾಂಬ ದೇಗುಲ ಬಾಗಿಲು ಓಪನ್​: 9 ದಿನ ದರ್ಶನಕ್ಕೆ ಅವಕಾಶ, ಆನ್​​ಲೈನ್​ ಬುಕ್ಕಿಂಗ್​ ಲಭ್ಯ

ಹಾಸನಾಂಬ ದೇವಿ ಜಾತ್ರಾ ಮಹೋತ್ಸವ 2024: ಹಾಸನದ ಅಧಿದೇವತೆ ನಾಡಿನ ಶಕ್ತಿದೇವತೆ ಹಾಸನಾಂಬೆಯ ದರ್ಶನೋತ್ಸವಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನಾಂಬೆಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಕಾಯುತ್ತಿದ್ದಾರೆ. ಹಾಸನಾಂಬ ದೇಗುಲ ಬಾಗಿಲು ತೆರಯುವ ದಿನಾಂಕ, ದರ್ಶನ ಅವಕಾಶಕ್ಕೆ ಇರುವ ದಿನಗಳು ಮತ್ತು ಇತರ ಮಾಹಿತಿ ಇಲ್ಲಿದೆ.

Hasanamba Darshan: ಇಂದು ಹಾಸನಾಂಬ ದೇಗುಲ ಬಾಗಿಲು ಓಪನ್​: 9 ದಿನ ದರ್ಶನಕ್ಕೆ ಅವಕಾಶ, ಆನ್​​ಲೈನ್​ ಬುಕ್ಕಿಂಗ್​ ಲಭ್ಯ
ಹಾಸನಾಂಬ ದೇಗುಲ
ಮಂಜುನಾಥ ಕೆಬಿ
| Updated By: Digi Tech Desk|

Updated on:Oct 24, 2024 | 9:28 AM

Share

ಹಾಸನ, ಅಕ್ಟೋಬರ್​ 23: ಹಾಸನಾಂಬ (Hasanamba) ದೇಗುಲದ ಬಾಗಿಲನ್ನು ಗುರುವಾರ (ಅಕ್ಟೋಬರ್ 24) ರಂದು ತೆರೆಯಲಾಗುತ್ತದೆ. ನವೆಂಬರ್ 3ರವರೆಗು ಮಾತ್ರ ದೇಗುಲದ ಬಾಗಿಲು ತೆರೆದಿರುತ್ತದೆ. ವರ್ಷದಿಂದ ವರ್ಷಕ್ಕೆ ಹಲವು ಆಕರ್ಷಣೆಗಳೊಂದಿಗೆ ಗಮನ ಸೆಳೆಯುತ್ತಿರುವ ಹಾಸನಾಂಬೆ ಉತ್ಸವದಲ್ಲಿ ಈ ವರ್ಷ ದಸರಾ ಮಾದರಿಯ ದೀಪಾಲಂಕಾರ, ಇದೇ ಮೊದಲಬಾರಿಗೆ ಫಲಪುಷ್ಪ ಪ್ರದರ್ಶನ, ಹಾಟ್ ಏರ್ ಬಲೂನ್, ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಅಕ್ಟೋಬರ್ 24ರ ಗುರುವಾರ ಮದ್ಯಾಹ್ನ 12 ಗಂಟೆಗೆ ದೇಗುಲದ ಗರ್ಭಗುಡಿ ಬಾಗಿಲು ತೆರೆಯುತ್ತದೆ. ಕಳೆದ ಬಾರಿ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಭಕ್ತರು ಬರುವ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದ್ದು, ಇದಕ್ಕಾಗಿ ಭರ್ಜರಿ ತಯಾರಿ ನಡೆಸಿದೆ. ದೇಗುಲವನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿದ್ದು ದೇಗುಲದ ಆವರಣದಲ್ಲಿ ಭಕ್ತರ ದರ್ಶನಕ್ಕಾಗಿ ಸರತಿ ಸಾಲುಗಳ ಬ್ಯಾರಿಕೇಡ್, ಸಾಂಪ್ರದಾಯಿಕ ಮಾದರಿಯ ಮಾಡೆಲ್​ಗಳು, ಮಳೆ, ಬಿಸಿಲಿನಿಂದ ರಕ್ಷಣೆಗಾಗಿ ಜ್ಮನ್ ಟೆಂಟ್ ಮತ್ತು ದೊನ್ನೆ ಪ್ರಸಾದ ವಿತರಣೆಗೂ ವ್ಯವಸ್ಥೆ ಮಾಡಲಾಗಿದೆ.

ವರ್ಷದಿಂದ ವರ್ಷಕ್ಕೆ ಹಲವು ವಿಶೇಷತೆಗಳನ್ನು ಒಳಗೊಂಡು ನಡೆಯುತ್ತಿರುವ ಹಾಸನಾಂಬೆ ದೇವಿ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾಮಹೋತ್ಸವದಲ್ಲಿ ಈ ಬಾರಿ ನಗರದಲ್ಲಿ ಮೈಸೂರು ದಸರಾ ಮಾದರಿಯ ಚಿತ್ತಾಕರ್ಷಕ ಲೈಟಿಂಗ್ ಮಾಡಲಾಗಿದೆ. ಲೈಟಿಂಗ್ ವೀಕ್ಷಣೆಗೆ ಡಬಲ್ ಡೆಕ್ಕರ್ ಬಸ್ ಇರಲಿದೆ.

“ಬರುವ ಭಕ್ತರ ಗಮನ ಸೆಳೆಯಲು ಹಾಟ್ ಏರ್ ಬಲೂನ್ ಸಂಚಾರ, ಪ್ಯಾರಾ ಗ್ಲೈಡಿಂಗ್, ರಾಜ್ಯಮಟ್ಟದ ಸಮೂಹ ನೃತ್ಯ ಸ್ಪರ್ಧೆ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಳೆದ ವರ್ಷ ಆದ ಕೆಲ ಲೋಪಗಳನ್ನು ಸರಿಪಡಿಸಿಕೊಂಡು, ಈ ವರ್ಷ ಅದ್ಧೂರಿ ಹಬ್ಬ ಆಚರಣೆಗೆ ತಯಾರಿ ಮಾಡಿಕೊಂಡಿದ್ದೇವೆ. ಹಾಸನಾಂಬ ಆ್ಯಪ್​, ದರ್ಶನಕ್ಕೆ ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ ಸೇರಿ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಒಟ್ಟಿನಲ್ಲಿ ನಾಡಿನ ಮೂಲೆ ಮೂಲೆಯಿಂದ ಬರುವ ಭಕ್ತರಿಗಾಗಿ ಸಕಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ” ಎಂದು ಜಿಲ್ಲಾದಿಕಾರಿ ಸಿ ಸತ್ಯಭಾಮ ಹೇಳಿದರು.

ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?

ಹಾಸನದಲ್ಲಿ ಹುತ್ತದ ರೂಪದಲ್ಲಿ ನೆಲೆಸಿರುವ ಶಕ್ತಿದೇವತೆ ಹಾಸನಾಂಬೆ ದೇಗುಲದಲ್ಲಿ ದೇವಿ ದರ್ಶನ ಸಿಗುವುದು ವರ್ಷಕ್ಕೆ ಒಮ್ಮೆ ಮಾತ್ರ. ಪ್ರತೀ ವರ್ಷ ಅಶ್ವಯುಜ ಮಾಸದ ಅಷ್ಟಮಿಯ ಗುರುವಾರ ದೇಗುಲದ ಬಾಗಿಲು ತೆರೆಯಲಾಗುತ್ತೆ. ಈ ವರ್ಷ ಅಕ್ಟೋಬರ್ 24ರ ಮದ್ಯಾಹ್ನ ದೇಗುಲದ ಬಾಗಿಲು ತೆರೆದರೆ ನವೆಂಬರ್ 3ಕ್ಕೆ ಮದ್ಯಾಹ್ನ 12ಕ್ಕೆ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತೆ.

ಒಟ್ಟು 11 ದಿನ ದೇಗುಲದ ಬಾಗಿಲು ತೆರೆದಿರಲಿದೆ. ಆದರೆ 9 ದಿನಗಳು ಮಾತ್ರ ಭಕ್ತರ ದರ್ಶನಕ್ಕೆ ಅವಕಾಶ ಸಿಗಲಿದೆ. ದಿನದ 24 ಗಂಟೆಗಳೂ ಕೂಡ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಕ್ತರಿಗೆ ದರ್ಶನಕ್ಕೆ ಬೇಕಾದ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ನೇರ ದರ್ಶನ ಪಡೆಯ ಬಯಸುವ ಭಕ್ತರಿಗೆ 1000 ರೂ. ಟಿಕೆಟ್ 300 ರೂ. ಟಿಕೆಟ್ ಹಾಗೂ ವಿಶೇಷ ಗಣ್ಯರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಹಾಗೂ ಸಾಮಾನ್ಯ ಭಕ್ತರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

“ಈ ವರ್ಷ ಮೊದಲದಿನ ಬಾಗಿಲು ತೆರೆದ ನಂತರ ದೇಗುಲ ಶುದ್ದಿ ಮಾಡಲಾಗುತ್ತೆ. ಮರುದಿನ ಬೆಳಿಗ್ಗೆಯಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುತ್ತೆ. ದೇವಿಗೆ ಒಟ್ಟು ನಾಲ್ಕು ಬಾರಿ ಬೇರೆ ಬೇರೆ ರೀತಿಯ ವಿಶಿಷ್ಟ ಅಲಂಕಾರ, ವಸ್ತ್ರಧಾರಣೆ ಮಾಡಲಾಗುತ್ತದೆ. ಈ ನಡುವೆ ನೈವೇದ್ಯದ ಸಂದರ್ಭ ಹೊರತು ಪಡಿಸಿ ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶವಿರುತ್ತದೆ” ಎಂದು ದೇಗುಲದ ಪ್ರಧಾನ ಅರ್ಚಕರು ಮಾಹಿತಿ ನೀಡಿದರು.

ವರ್ಷದಿಂದ ವರ್ಷಕ್ಕೆ ಹಾಸನಾಂಬ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಏರುತ್ತಲೇ ಇದೆ. ಹಾಸನಾಂಬೆ ದೇಗುಲಕ್ಕೆ ಈ ವರ್ಷ ಬರೊಬ್ಬರಿ 20 ರಿಂದ 25 ಲಕ್ಷ ಸಂಖ್ಯೆ ಭಕ್ತರು ಬರುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:19 am, Wed, 23 October 24

ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?