Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 7 ದಿನಗಳಲ್ಲಿ ಹಾಸನಾಂಬೆಗೆ ಕೋಟಿ ಕೋಟಿ ಆದಾಯ: ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹೆಚ್ಚು ಹಣ ಸಂಗ್ರಹ

Hasanamba temple Records In Income: ಈ ಬಾರಿ ಹಾಸನದ ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಹೀಗಾಗಿ ಕೇವಲ ಒಂದೇ ವಾರದಲ್ಲಿ ಅಂದರೆ 7 ದಿನಗಳಲ್ಲೇ ಕೋಟಿ ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ಇದು ಹಾಸನಾಂಬೆ ದರ್ಶನೋತ್ಸದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಆದಾಯ ಸಂಗ್ರಹವಾಗಿದೆ. ಹಾಗಾದ್ರೆ, ಈ ಬಾರಿ ಬಂದ ಆದಾಯ ಎಷ್ಟು? ಯಾವುದರಿಂದ ಎಷ್ಟೆಷ್ಟು ಹಣ ಸಂಗ್ರಹವಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಕೇವಲ 7 ದಿನಗಳಲ್ಲಿ ಹಾಸನಾಂಬೆಗೆ ಕೋಟಿ ಕೋಟಿ ಆದಾಯ: ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹೆಚ್ಚು ಹಣ ಸಂಗ್ರಹ
ಹಾಸನಾಂಬೆ
Follow us
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ

Updated on:Nov 10, 2023 | 11:59 AM

ಹಾಸನ, (ನವೆಂಬರ್ 10):  ಹಾಸನದ (Hassan) ಪ್ರಸಿದ್ಧ ಹಾಸನಾಂಬೆ (Hassanamba) ಆಶೀರ್ವಾದಕ್ಕೆ ಜನ ಸಾಗರವೇ ಹರಿದುಬರುತ್ತಿದೆ. ನವೆಂಬರ್ 3ರಿಂದಲೇ 12 ದಿನ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನೋತ್ಸವ ಶುರುವಾಗಲಿದ್ದು, ಹಾಸನಾಂಬೆ ಜಾತ್ರೆಯ ಸಂಭ್ರಮ ಕಳೆಗಟ್ಟಿದೆ. ಇನ್ನು ಏಳು ದಿನಗಳ ದರ್ಶನದ ಅಂತ್ಯಕ್ಕೆ ಹಾಸನಾಂಬೆ ದೇಗುಲಕ್ಕೆ ಒಟ್ಟು 3 ಕೋಟಿ 18ಲಕ್ಷದ 30 ಸಾವಿರ ರೂ. ಆದಾಯ ಹರಿದುಬಂದಿದೆ. ಇದು ಕೇವಲ ನವೆಂಬರ್ 3ರಿಂದ ನವೆಂಬರ್ 10ರ ವರೆಗೆ ಅಂದರೆ ಏಳೇ ದಿನಗಳಲ್ಲಿ ಸಂಗ್ರಹವಾದ ಹಣ. ಇನ್ನೂ ನಾಲ್ಕು ದಿನ ಬಾಕಿ ಇರುವಾಗಲೇ ಕೋಟಿ ಕೋಟಿ ರೂ. ಆದಾಯ ಸಂಗ್ರಹವಾಗಿರುವುದು ದಾಖಲೆಯಾಗಿದೆ. ಇನ್ನು ಹಾಸನಾಂಬೆ ದರ್ಶನೋತ್ಸವದ ಇತಿಹಾಸದಲ್ಲೇ ಈ ಬಾರಿ ಅತಿ ಹೆಚ್ಚಿನ ಆದಾಯ ಸಂಗ್ರಹವಾಗಿದೆ. ಎಂದು ದೇವಸ್ಥಾನ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಯಾವುದರಿಂದ ಎಷ್ಟು ಹಣ ಸಂಗ್ರಹ?

ವಿಶೇಷ ದರ್ಶನದ ಪಾಸ್, ಲಡ್ಡು ಮಾರಾಟದಿಂದ ಆದಾಯಲ್ಲಿ ಹೆಚ್ಚಳವಾಗಿದೆ.  1 ಸಾವಿರ ರೂಪಾಯಿ ಮೌಲ್ಯದ ಟಿಕೆಟ್​ ಮಾರಾಟದಿಂದ 1ಕೋಟಿ 35 ಲಕ್ಷದ 81 ಸಾವಿರ ರೂಪಾಯಿ ಜಮೆಯಾಗಿದ್ದರೆ, 300 ರೂ.ಟಿಕೆಟ್ ಮಾರಾಟದಿಂದ 1 ಕೋಟಿ 43ಲಕ್ಷದ 33 ಸಾವಿರ ರೂ. ಸಂಗ್ರಹವಾಗಿದೆ. ಇನ್ನು ಲಡ್ಡು ಪ್ರಸಾದ ಮಾರಾಟದಿಂದ 39 ಲಕ್ಷದ 16 ಸಾವಿರ ರೂ. ಹಣ ಸಂಗ್ರಹವಾಗಿದೆ. ಇದರೊಂದಿಗೆ ನವೆಂಬರ್ 3ರಿಂದ ನವೆಂಬರ್ 10ರ ವರೆಗೆ 3,18,30,320 ರೂ.(3 ಕೋಟಿ 18 ಲಕ್ಷದ 30 ಸಾವಿರ ರೂ.) ಆದಾಯ ಸಂಗ್ರಹವಾಗಿದೆ. ಹಾಸನಾಂಬೆ ದರ್ಶನೋತ್ಸವದ ಇತಿಹಾಸದಲ್ಲೇ ಇದೇ ಮೊಟ್ಟ ಮೊದಲ ಬಾರಿಗೆ ಇಷ್ಟೊಂದು ಆದಾಯ ಹರಿಬಂದಿದೆ.

ಇದನ್ನೂ ಓದಿ: 12 ದಿನ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನೋತ್ಸವ

ಈಗಾಗಲೇ ಹಾಲಿ ಮುಖ್ಯಂಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಸೇರಿದಂತೆ ಹಲವು ರಾಜಕೀಯ ಮುಖಂಡರು, ಗಣ್ಯರು ಹಾಸನಾಂಬೆಯ ದರ್ಶನ ಪಡೆದುಕೊಂಡಿದ್ದಾರೆ.

ಇನ್ನೂ ನಾಲ್ಕು ದಿನ ಸಾರ್ವಜನಿಕರ ದರ್ಶನಕ್ಕೆ ಅವಾಶಕ ಇದ್ದು, ಇನ್ನಷ್ಟು ಭಕ್ತು ಅಮ್ಮನ ದರ್ಶನಕ್ಕೆ ಬರಲಿದ್ದಾರೆ. ಹೀಗಾಗಿ ಆದಾಯದಲ್ಲೂ ಸಹ ಇನ್ನಷ್ಟು ಹೆಚ್ಚಳವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Fri, 10 November 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​