AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿದೇವಿ ನೋಡಲು ಮುಗಿಬಿದ್ದ ಭಕ್ತರು; ಹಾಸನಾಂಬೆ ದರ್ಶನಕ್ಕೆ ಇನ್ನು ಐದು ದಿನಗಳು ಮಾತ್ರ ಬಾಕಿ

ಪ್ರತಿ ವರ್ಷ ಅಶ್ವಯುಜ ಮಾಸದ ಹುಣ್ಣಿಮೆಯ ನಂತರ ಬರುವ ಗುರುವಾರದಂದು ದೇವಿಯ ಗರ್ಭಗುಡಿ ಬಾಗಿಲು ತೆರೆದರೆ ಬಲಿಪಾಡ್ಯಮಿಯ ಮಾರನೇ ದಿನ ಬಾಗಲು ಮುಚ್ಚಲಾಗುತ್ತದೆ. ಬಳಿಕ ವರ್ಷದ ನಂತರವೇ ಹಾಸನಾಂಬೆಯನ್ನು ನೇರವಾಗಿ ದರ್ಶನ ಮಾಡುವುದಕ್ಕೆ ಅವಕಾಶ ಸಿಗುವುದು.

ಶಕ್ತಿದೇವಿ ನೋಡಲು ಮುಗಿಬಿದ್ದ ಭಕ್ತರು; ಹಾಸನಾಂಬೆ ದರ್ಶನಕ್ಕೆ ಇನ್ನು ಐದು ದಿನಗಳು ಮಾತ್ರ ಬಾಕಿ
ಪ್ರಸಿದ್ಧ ಹಾಸನಾಂಬ ದೇವಿ
TV9 Web
| Updated By: preethi shettigar|

Updated on: Nov 01, 2021 | 12:12 PM

Share

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ನೋಡಲು ಇನ್ನು 5 ದಿನಗಳು ಮಾತ್ರ ಉಳಿದಿದೆ. ಈ ವರ್ಷ 10 ದಿನಗಳು ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮೊದಲ ಮೂರು ದಿನಗಳ ಕಾಲ ಕಡಿಮೆ ಸಂಖ್ಯೆಯಲ್ಲಿ ಭಕ್ತರು ದೇವಿ ದರ್ಶನಕ್ಕೆ ಆಗಮಿಸಿದ್ದರು. ನಟ ಪುನೀತ್ ರಾಜ್ಕುಮಾರ್ ವಿಧಿವಶರಾದಾಗ ಅಭಿಮಾನಿಗಳು ದುಃಖತಪ್ತರಾಗಿ ದೇವಸ್ಥಾನದ ಕಡೆಗೆ ಹೆಜ್ಜೆ ಹಾಕಿಲಿಲ್ಲ ಎಂಬುದು ಕೂಡ ಒಂದು ಕಾರಣವಾಗಿತ್ತು. ಆದರೆ ಇಂದು (ನವೆಂಬರ್ 1) ಭಾರೀ ಸಂಖ್ಯೆಯಲ್ಲಿ ದೇಗುಲದತ್ತ ಭಕ್ತರು ಆಗಮಿಸಿದ್ದಾರೆ.

ಬೆಳಿಗ್ಗೆಯಿಂದಲೂ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ದೇವಿ ಭಕ್ತರು ಸರತಿ ಸಾಲಿನಲ್ಲಿ ನಿಂತು ಶಕ್ತಿದೇವತೆಯ ಆಶೀರ್ವಾದ ಪಡೆದರು. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಜೊತೆಗೆ ಹೊರ ರಾಜ್ಯಗಳಿಂದಲೂ ಆಗಮಿಸಿದ್ದ ಅಪಾರ ಭಕ್ತರು ಕೊವಿಡ್ ಆತಂಕದ ಕಾರಣ ಎರಡು ವರ್ಷಗಳಿಂದ ಹಾಸನಾಂಬೆ ನೋಡದೆ ಆಗಿದ್ದ ನಿರಾಸೆ ನೀಗಿಸಿಕೊಂಡು ಇಷ್ಠಾರ್ಥ ಸಿದ್ದಿಸುವ ದೇವಿಗೆ ನಮಿಸಿದರು. ಒಂದೆಡೆ ಭಕ್ತರು ದಂಡು ಆಗಮಿಸಿದರೆ ಇನ್ನೊಂದೆಡೆ ಗೃಹ ಸಚಿವ ಆರಗ ಜ್ಞಾನೇಂದ್ರ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಸೇರಿ ಹಲವರು ದೇವಿ ದರ್ಶನ ಮಾಡಿ ಪುನೀತರಾದರು.

ಹಾಸನದ ಅಧಿ ದೇವತೆ ರಾಜ್ಯದ ಶಕ್ತಿದೇವತೆಗಳಲ್ಲಿ ಒಬ್ಬಳಾದ ಹಾಸನಾಂಬೆ ದರ್ಶನೋತ್ಸವದ ಐದನೇ ದಿನ ಇಡೀ ಹಾಸನ ನಗರ ಕಳೆಗಟ್ಟಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಹಾಸನಾಂಬೆ ದರ್ಶನ ಮಾಡಿ ಪುನೀತರಾದರು. ಕಳೆದ ವರ್ಷ ಕೊವಿಡ್ ಆತಂಕದಿಂದ ಹಾಸನಾಂಬೆ ನೇರ ದರ್ಶನಕ್ಕೆ ಅವಕಾಶ ಸಿಕ್ಕಿರಲಿಲ್ಲ. ಆದರೆ ಎರಡು ವರ್ಷಗಳ ಬಳಿಕ ಸಿಕ್ಕ ಅವಕಾಶದಿಂದಾಗಿ ಇಂದು ಭಾರೀ ಸಂಖ್ಯೆಯಲ್ಲಿ ಭಕ್ತರು ದೇವಿ ದರ್ಶನಪಡೆದರು.

ಬೆಳಿಗ್ಗೆಯಿಂದಲೂ ಕೂಡ ಸರತಿ ಸಾಲುಗಳು ತುಂಬಿ ತುಳುಕುತ್ತಿದ್ದು, ಶಿಸ್ತಿನಿಂದ ಸರತಿ ಸಾಲುಗಳಲ್ಲಿ ನಿಂತು ದೇವಿ ದರ್ಶನ ಪಡೆದರು. ಇನ್ನು ಸಾಮಾನ್ಯ ಭಕ್ತರ ಜೊತೆಗೆ ರಾಜಕೀಯ ನಾಯಕರು ಕೂಡ ಇಂದು ಹಾಸನಾಂಬೆಯ ದರ್ಶನ ಪಡೆದರು.

ಬಾಗಿಲು ಮುಚ್ಚೋವೇಳೆ ಹಚ್ಚಿಟ್ಟ ದೀಪ ಆರುವುದಿಲ್ಲ. ಹೂ ಬಾಡೋದಿಲ್ಲ ಎಂಬ ನಂಬಿಕೆ ಇಲ್ಲಿನ ಭಕ್ತರದ್ದು. ಈ ವರ್ಷ ಭಕ್ತರ ಒತ್ತಡಕ್ಕೆ ಮಣಿದ ಜಿಲ್ಲಾಡಳಿತ ದೇವಿಗೆ ದರ್ಶನಕ್ಕೆ ಅವಕಾಶ ನೀಡಿದ್ದು, ಈ ವರ್ಷ ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಒಟ್ಟಿನಲ್ಲಿ ಶಕ್ತಿದೇವತೆ, ಅಧಿ ದೇವತೆ ಹಾಸನಾಂಬೆ ಮಹಿಮೆ ಮೇಲೆ ನಂಬಿಕೆಯಿಂದಲೇ ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.

ವರದಿ: ಮಂಜುನಾಥ್.ಕೆ.ಬಿ.

ಇದನ್ನೂ ಓದಿ: ಹಾಸನಾಂಬೆಯ ಮೊದಲ‌ ದಿನದ ದರ್ಶನೋತ್ಸವ ಆರಂಭ; ಬೆಳಿಗ್ಗೆಯೇ ದೇವಾಲಯ ದತ್ತ ಲಗ್ಗೆಯಿಟ್ಟ ಸಹಸ್ರಾರು ಭಕ್ತರು

ನಿಮ್ಮೆಲ್ಲ ಕೆಲಸಗಳನ್ನು ಬದಿಗಿರಿಸಿ ಹಾಸನಕ್ಕೆ ಹೊರಡಿ, ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದೆ!

ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ