AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಿಯ ದರ್ಶನಕ್ಕೆ ತೆರೆ

Hassan News: ಮುಂದಿನ 1 ವರ್ಷದವರೆಗೆ ಹಾಸನಾಂಬೆ ದೇಗುಲದ ಬಾಗಿಲು ಮುಚ್ಚಿರಲಿದೆ. ಕಳೆದ 10 ದಿನಗಳಿಂದ ಲಕ್ಷಾಂತರ ಭಕ್ತರಿಂದ ಹಾಸನಾಂಬೆ ದರ್ಶನ ಪಡೆಯಲಾಗಿತ್ತು. 10ನೇ ದಿನವಾದ ಇಂದು ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ.

ಹಾಸನ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಿಯ ದರ್ಶನಕ್ಕೆ ತೆರೆ
ಹಾಸನಾಂಬೆ ದೇವಸ್ಥಾನ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 06, 2021 | 1:18 PM

Share

ಹಾಸನ: ಇಲ್ಲಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು (ನವೆಂಬರ್ 6) 1 ಗಂಟೆ 4 ನಿಮಿಷಕ್ಕೆ ತೆರೆಬಿದ್ದಿದೆ. ಮಧ್ಯಾಹ್ನ ಗರ್ಭಗುಡಿಯ ಬಾಗಿಲು ಮುಚ್ಚಲಾಗಿದೆ. ಹಾಸನಾಂಬೆ ದೇಗುಲದ ಒಳಗೆ ಪೂಜಾ ಕೈಂಕರ್ಯ ನಡೆಸಲಾಗಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವರು, ಹಾಸನದ ಜಿಲ್ಲಾಧಿಕಾರಿ, ಎಸ್​ಪಿ, ಆಡಳಿತಾಧಿಕಾರಿ ಸಮ್ಮುಖದಲ್ಲಿ ದೇಗುಲ ಮುಚ್ಚಲಾಗಿದೆ. ಮುಂದಿನ 1 ವರ್ಷದವರೆಗೆ ಹಾಸನಾಂಬೆ ದೇಗುಲದ ಬಾಗಿಲು ಮುಚ್ಚಿರಲಿದೆ. ಕಳೆದ 10 ದಿನಗಳಿಂದ ಲಕ್ಷಾಂತರ ಭಕ್ತರಿಂದ ಹಾಸನಾಂಬೆ ದರ್ಶನ ಪಡೆಯಲಾಗಿತ್ತು. 10ನೇ ದಿನವಾದ ಇಂದು ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ.

ಶನಿವಾರ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸಹಿತ ಹಲವು ಪ್ರಮುಖರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ದೇವರ ದರ್ಶನ ಪಡೆದ ಬಳಿಕ ಪ್ರವೀಣ್ ಸೂದ್ ಹೇಳಿಕೆ ನೀಡಿದ್ದಾರೆ. ಕಾನೂನುಬಾಹಿರ ಚಟುವಟಿಕೆ ಕಂಡುಬಂದ್ರೆ ಮಾಹಿತಿ ನೀಡಿ. ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಜನರು ಕಾನೂನು ಕೈಗೆತ್ತಿಕೊಳ್ಳಬಾರದು, ಅದು ತಪ್ಪಾಗುತ್ತೆ ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.

ಹಾಸನಾಂಬೆ ದೇಗುಲಕ್ಕೆ‌ಬೇಟಿ ನೀಡಬೇಕು ಎನ್ನೋದು ಬಹಳ ದಿನದಿಂದ ಮನಸ್ಸಿನಲ್ಲಿ ಇತ್ತು. ಇಂದು ಪತ್ನಿ ಜೊತೆಗೆ ಬಂದು ಮುಖ್ಯವಾದ ದಿನ ದರ್ಶನ ಮಾಡಿಧ್ದು ಖುಷಿಯಾಗಿದೆ. ಹಾಸನಾಂಬೆ ಎಲ್ಲರಿಗೂ ಶುಭವ ತರಲಿ ಎಂದು ಹಾರೈಸುತ್ತೇನೆ. ಕಳೆದ ಹತ್ತು ದಿನಗಳಿಂದ ಹಾಸನಾಂಬೆ ಉತ್ಸವ ಚನ್ವಾಗಿ ಆಗಿದೆ. ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಎಲ್ಲರಿಗೂ ಒಳಿತಾಗಲಿ ಎಂದು ಹಾಸನಾಂಬೆ ದರ್ಶನದ ಬಳಿಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿಕೆ ನೀಡಿದ್ದಾರೆ.

ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ಹಾಸನಾಂಬೆ ದೇಗುಲ ಮುಚ್ಚಲಾಗಿದೆ. ಹಾಸನಾಂಬೆ ದರ್ಶನ ಪಡೆಯಲು ಇಂದು ಅವಕಾಶ ಇರುವುದಿಲ್ಲ. ಧಾರ್ಮಿಕ ವಿಧಿ ವಿಧಾನಗಳ ಮೂಲಕ ಪೂಜೆ ಸಲ್ಲಿಕೆ ಮಾಡಿದ ಬಳಿಕ ಸಿಬ್ಬಂದಿ ದೇಗುಲದ ಬಾಗಿಲು ಮುಚ್ಚಿದ್ದಾರೆ. ಉಸ್ತುವಾರಿ ಸಚಿವ‌ ಕೆ.ಗೋಪಾಲಯ್ಯ,‌ ‌ಜಿಲ್ಲಾಧಿಕಾರಿ ಮತ್ತು ಗಣ್ಯರ‌ ಸಮ್ಮುಖ‌ದಲ್ಲಿ ದೇಗುಲ ಬಾಗಿಲು ಮುಚ್ಚಲಾಗಿದೆ. ಪ್ರಸಕ್ತ ವರ್ಷ ಅಕ್ಟೋಬರ್ 28 ರಂದು ದೇವಾಲಯ ತೆರೆಯಲಾಗಿತ್ತು. ಅಕ್ಟೋಬರ್ 28 ರಿಂದ ಈವರೆಗೆ ಲಕ್ಷಾಂತರ ಭಕ್ತರಿಂದ ದೇವಿ ದರ್ಶನ ಮಾಡಲಾಗಿದೆ.

ಇದನ್ನೂ ಓದಿ: ಪ್ರಸಿದ್ಧ ಹಾಸನಾಂಬ ದೇವಿ ದರ್ಶನ ಪಡೆದ ಸಾಲುಮರದ ತಿಮ್ಮಕ್ಕ, ಹೆಚ್​ಡಿ ರೇವಣ್ಣ ದಂಪತಿ; ಗರ್ಭಗುಡಿಯಲ್ಲಿ ಕುಳಿತು ಧ್ಯಾನ

ಇದನ್ನೂ ಓದಿ: ಹಾಸನಾಂಬೆಯ ಮೊದಲ‌ ದಿನದ ದರ್ಶನೋತ್ಸವ ಆರಂಭ; ಬೆಳಿಗ್ಗೆಯೇ ದೇವಾಲಯ ದತ್ತ ಲಗ್ಗೆಯಿಟ್ಟ ಸಹಸ್ರಾರು ಭಕ್ತರು

Published On - 1:16 pm, Sat, 6 November 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ