AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ದೇಗುಲ: ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರದ ಬಗ್ಗೆ ಅರ್ಚಕರು, ಸಂಬಂಧಪಟ್ಟವರ ಜೊತೆ ಸಭೆ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಈ ವರ್ಷ ಹೊಸ ರೀತಿಯಲ್ಲಿ ಕಳಸ ಪ್ರತಿಷ್ಠಾಪಿಸಿ ಪೂಜೆ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೊಸ ರೀತಿಯ ಪೂಜೆಗೆ ಕೆಲ ಭಕ್ತರು ಆಕ್ಷೇಪಿಸಿದ್ದರು.

ಹಾಸನಾಂಬೆ ದೇಗುಲ: ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರದ ಬಗ್ಗೆ ಅರ್ಚಕರು, ಸಂಬಂಧಪಟ್ಟವರ ಜೊತೆ ಸಭೆ
ಹಾಸನಾಂಬೆ ಕಳಸ ರೂಪದಲ್ಲಿ ಪ್ರತಿಷ್ಠಾಪನೆ
TV9 Web
| Edited By: |

Updated on: Jan 30, 2022 | 3:33 PM

Share

ಹಾಸನ: ಇಲ್ಲಿನ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರವಾಗಿ ನಾಳೆ ಅರ್ಚಕರು, ಸಂಬಂಧಪಟ್ಟವರ ಜೊತೆ ಸಭೆ ನಡೆಸುತ್ತೇನೆ. ಪೂಜೆಯ ಹಿನ್ನೆಲೆ, ಅವಶ್ಯಕತೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹಾಸನಾಂಬೆ ದೇಗುಲದ ಆಡಳಿತಾಧಿಕಾರಿ ಜಗದೀಶ್ ಭಾನುವಾರ ಹೇಳಿಕೆ ನೀಡಿದ್ದಾರೆ. ಹಣದ ಆಸೆಗೆ ಸಾರ್ವಜನಿಕರಿಗೆ ನಿತ್ಯ ಹಾಸನಾಂಬೆ ದರ್ಶನ ನೀಡಲಾಗುತ್ತಿದೆಯಾ ಎಂಬ ಬಗ್ಗೆ ಪ್ರಶ್ನೆಗಳು ಮೂಡಿದ್ದವು. ಹಾಸನಾಂಬೆ ಗರ್ಭಗುಡಿ ಬಾಗಿಲಿಗೆ ನಿತ್ಯ ಅಲಂಕಾರ ಪೂಜೆ ಮಾಡಲಾಗುತ್ತಿದೆ ಎನ್ನಲಾಗಿತ್ತು.

ಈ ಬಗ್ಗೆ ದೇಗುಲಕ್ಕೆ ಭೇಟಿ ನೀಡಿದ ಹಾಸನಾಂಬೆ ದೇಗುಲದ ಆಡಳಿತಾಧಿಕಾರಿ ಜಗದೀಶ್​ ದೇಗುಲದ ಅರ್ಚಕರಿಂದ ಮಾಹಿತಿ ಪಡೆದಿದ್ದಾರೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಈ ವರ್ಷ ಹೊಸ ರೀತಿಯಲ್ಲಿ ಕಳಸ ಪ್ರತಿಷ್ಠಾಪಿಸಿ ಪೂಜೆ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೊಸ ರೀತಿಯ ಪೂಜೆಗೆ ಕೆಲ ಭಕ್ತರು ಆಕ್ಷೇಪಿಸಿದ್ದರು.

ಹಾಸನಾಂಬೆ ದೇಗುಲದ ದ್ವಾರಕ್ಕೆ ಪೂಜೆ ಮಾಡುತ್ತಿದ್ದೇವೆ. ವಂಶ ಪಾರಂಪರ್ಯವಾಗಿ ಪೂಜೆ ನಡೆದುಕೊಂಡು ಬಂದಿದೆ. ಆದರೆ ಈ ಮೊದಲು ಅಲಂಕಾರವನ್ನು ಮಾಡುತ್ತಿರಲಿಲ್ಲ. ಇದೀಗ ಚೆನ್ನಾಗಿ ಕಾಣಲಿ ಎಂದು ಅಲಂಕಾರ ಮಾಡುತ್ತಿದ್ದೇವೆ. ದೇವಾಲಯ ಬೆಳಗ್ಗೆಯಿಂದ ಸಂಜೆವರೆಗೆ ಓಪನ್ ಇರಲ್ಲ ಎಂದು ಹಾಸನಾಂಬೆ ದೇಗುಲದ ಅರ್ಚಕ ನಾಗರಾಜ್ ಹೇಳಿಕೆ ನೀಡಿದ್ದಾರೆ. ದೇಗುಲದ ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರವಾಗಿ ಸ್ಪಷ್ಟನೆ ನೀಡಲಾಗಿದೆ.

ಇದನ್ನೂ ಓದಿ: ಹಾಸನಾಂಬೆ ದೇಗುಲದ ಗರ್ಭಗುಡಿಯ ಮುಂದೆ ಪ್ರತಿರೂಪವಿಟ್ಟು ಪೂಜೆ; ಅರ್ಚಕರ ನಡೆಗೆ ಭಕ್ತರ ಅಸಮಾಧಾನ

ಇದನ್ನೂ ಓದಿ: ಹಾಸನದಲ್ಲಿ ವೈದ್ಯ ವಿದ್ಯಾರ್ಥಿನಿ ಹಣೆ, ಕುತ್ತಿಗೆಗೆ ಮುತ್ತಿಟ್ಟು ಲೈಂಗಿಕ ದೌರ್ಜನ್ಯ ಎಸಗಿದ ಅಸೋಸಿಯೇಟ್ ಪ್ರೊಫೆಸರ್ ಸಸ್ಪೆಂಡ್

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು