AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ದೇಗುಲ: ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರದ ಬಗ್ಗೆ ಅರ್ಚಕರು, ಸಂಬಂಧಪಟ್ಟವರ ಜೊತೆ ಸಭೆ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಈ ವರ್ಷ ಹೊಸ ರೀತಿಯಲ್ಲಿ ಕಳಸ ಪ್ರತಿಷ್ಠಾಪಿಸಿ ಪೂಜೆ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೊಸ ರೀತಿಯ ಪೂಜೆಗೆ ಕೆಲ ಭಕ್ತರು ಆಕ್ಷೇಪಿಸಿದ್ದರು.

ಹಾಸನಾಂಬೆ ದೇಗುಲ: ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರದ ಬಗ್ಗೆ ಅರ್ಚಕರು, ಸಂಬಂಧಪಟ್ಟವರ ಜೊತೆ ಸಭೆ
ಹಾಸನಾಂಬೆ ಕಳಸ ರೂಪದಲ್ಲಿ ಪ್ರತಿಷ್ಠಾಪನೆ
TV9 Web
| Updated By: ganapathi bhat|

Updated on: Jan 30, 2022 | 3:33 PM

Share

ಹಾಸನ: ಇಲ್ಲಿನ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರವಾಗಿ ನಾಳೆ ಅರ್ಚಕರು, ಸಂಬಂಧಪಟ್ಟವರ ಜೊತೆ ಸಭೆ ನಡೆಸುತ್ತೇನೆ. ಪೂಜೆಯ ಹಿನ್ನೆಲೆ, ಅವಶ್ಯಕತೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹಾಸನಾಂಬೆ ದೇಗುಲದ ಆಡಳಿತಾಧಿಕಾರಿ ಜಗದೀಶ್ ಭಾನುವಾರ ಹೇಳಿಕೆ ನೀಡಿದ್ದಾರೆ. ಹಣದ ಆಸೆಗೆ ಸಾರ್ವಜನಿಕರಿಗೆ ನಿತ್ಯ ಹಾಸನಾಂಬೆ ದರ್ಶನ ನೀಡಲಾಗುತ್ತಿದೆಯಾ ಎಂಬ ಬಗ್ಗೆ ಪ್ರಶ್ನೆಗಳು ಮೂಡಿದ್ದವು. ಹಾಸನಾಂಬೆ ಗರ್ಭಗುಡಿ ಬಾಗಿಲಿಗೆ ನಿತ್ಯ ಅಲಂಕಾರ ಪೂಜೆ ಮಾಡಲಾಗುತ್ತಿದೆ ಎನ್ನಲಾಗಿತ್ತು.

ಈ ಬಗ್ಗೆ ದೇಗುಲಕ್ಕೆ ಭೇಟಿ ನೀಡಿದ ಹಾಸನಾಂಬೆ ದೇಗುಲದ ಆಡಳಿತಾಧಿಕಾರಿ ಜಗದೀಶ್​ ದೇಗುಲದ ಅರ್ಚಕರಿಂದ ಮಾಹಿತಿ ಪಡೆದಿದ್ದಾರೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಈ ವರ್ಷ ಹೊಸ ರೀತಿಯಲ್ಲಿ ಕಳಸ ಪ್ರತಿಷ್ಠಾಪಿಸಿ ಪೂಜೆ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೊಸ ರೀತಿಯ ಪೂಜೆಗೆ ಕೆಲ ಭಕ್ತರು ಆಕ್ಷೇಪಿಸಿದ್ದರು.

ಹಾಸನಾಂಬೆ ದೇಗುಲದ ದ್ವಾರಕ್ಕೆ ಪೂಜೆ ಮಾಡುತ್ತಿದ್ದೇವೆ. ವಂಶ ಪಾರಂಪರ್ಯವಾಗಿ ಪೂಜೆ ನಡೆದುಕೊಂಡು ಬಂದಿದೆ. ಆದರೆ ಈ ಮೊದಲು ಅಲಂಕಾರವನ್ನು ಮಾಡುತ್ತಿರಲಿಲ್ಲ. ಇದೀಗ ಚೆನ್ನಾಗಿ ಕಾಣಲಿ ಎಂದು ಅಲಂಕಾರ ಮಾಡುತ್ತಿದ್ದೇವೆ. ದೇವಾಲಯ ಬೆಳಗ್ಗೆಯಿಂದ ಸಂಜೆವರೆಗೆ ಓಪನ್ ಇರಲ್ಲ ಎಂದು ಹಾಸನಾಂಬೆ ದೇಗುಲದ ಅರ್ಚಕ ನಾಗರಾಜ್ ಹೇಳಿಕೆ ನೀಡಿದ್ದಾರೆ. ದೇಗುಲದ ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರವಾಗಿ ಸ್ಪಷ್ಟನೆ ನೀಡಲಾಗಿದೆ.

ಇದನ್ನೂ ಓದಿ: ಹಾಸನಾಂಬೆ ದೇಗುಲದ ಗರ್ಭಗುಡಿಯ ಮುಂದೆ ಪ್ರತಿರೂಪವಿಟ್ಟು ಪೂಜೆ; ಅರ್ಚಕರ ನಡೆಗೆ ಭಕ್ತರ ಅಸಮಾಧಾನ

ಇದನ್ನೂ ಓದಿ: ಹಾಸನದಲ್ಲಿ ವೈದ್ಯ ವಿದ್ಯಾರ್ಥಿನಿ ಹಣೆ, ಕುತ್ತಿಗೆಗೆ ಮುತ್ತಿಟ್ಟು ಲೈಂಗಿಕ ದೌರ್ಜನ್ಯ ಎಸಗಿದ ಅಸೋಸಿಯೇಟ್ ಪ್ರೊಫೆಸರ್ ಸಸ್ಪೆಂಡ್

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ