Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಗೋಡನಹಳ್ಳಿಯಲ್ಲಿ 126 ಮರ ಕಡಿದ ಕೇಸ್​: ಅರಣ್ಯ ಇಲಾಖೆಯ 4 ಅಧಿಕಾರಿಗಳ ಅಮಾನತು

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ನಂದಗೊಂಡನಹಳ್ಳಿಯಲ್ಲಿ 126 ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಮೇಲ್ನೋಟಕ್ಕೆ ಕರ್ತವ್ಯಲೋಪ ಆರೋಪ ಹಿನ್ನೆಲೆ ಇಲಾಖಾ ವಿಚಾರಣೆ ಬಾಕಿ ಇರಿಸಿ ನಾಲ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ನಂದಗೋಡನಹಳ್ಳಿಯಲ್ಲಿ 126 ಮರ ಕಡಿದ ಕೇಸ್​: ಅರಣ್ಯ ಇಲಾಖೆಯ 4 ಅಧಿಕಾರಿಗಳ ಅಮಾನತು
ಪ್ರಾತಿನಿಧಿಕ ಚಿತ್ರ
Follow us
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 28, 2023 | 9:26 PM

ಹಾಸನ, ಡಿಸೆಂಬರ್ 28: ಜಿಲ್ಲೆಯ ಬೇಲೂರು ತಾಲ್ಲೂಕಿನ ನಂದಗೊಂಡನಹಳ್ಳಿ (Nagondanahalli) ಯಲ್ಲಿ 126 ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪ್ರಭುಗೌಡ ಬಿರಾದಾರ, ಬೇಲೂರು ವಲಯ ಅರಣ್ಯಾಧಿಕಾರಿ ವಿನಯ್ ಕುಮಾರ್, ಬೇಲೂರು ಉಪ ವಲಯ ಅರಣ್ಯಾಧಿಕಾರಿ ಗುರುರಾಜ್ ಮತ್ತು ಅರಣ್ಯ ಗಸ್ತುಪಾಲಕ ರಾಜಕುಮಾರ್‌ ಅಮಾನತುಗೊಳಗಾದವರು.

ಮೇಲ್ನೋಟಕ್ಕೆ ಕರ್ತವ್ಯಲೋಪ ಆರೋಪ ಹಿನ್ನೆಲೆ ಇಲಾಖಾ ವಿಚಾರಣೆ ಬಾಕಿ ಇರಿಸಿ ನಾಲ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಐಎಫ್‌ಎಸ್‌ ಅಧಿಕಾರಿ ಹಿನ್ನೆಲೆಯಲ್ಲಿ ನಿಯಮಾನುಸಾರ ಡಿಎಫ್‌ಒ ಮೋಹನ್ ಕುಮಾರ್‌ ವಿರುದ್ಧ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಮರಗಳ ಮಾರಣಹೋಮಕ್ಕೂ‌ ನನಗೂ ಯಾವುದೇ ಸಂಬಂಧವಿಲ್ಲ; ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಸ್ಪಷ್ಟನೆ

ತಹಶೀಲ್ದಾರ್‌ ಮಮತಾ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ ಬಂದಿತ್ತು. ಸರ್ವೆ ನಂಬರ್‌ 16ರಲ್ಲಿದ್ದ ಕೋಟ್ಯಂತರ ಬೆಲೆಬಾಳುವ ಮರ ಕಡಿದಿದ್ದರು. ಅಕ್ರಮವಾಗಿ 126 ಮರಗಳನ್ನು ಕಡಿದು ಸಾಗಿಸಲು ಯತ್ನಿಸಿದ್ದರು. ಅರೇಹಳ್ಳಿ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಶಿವರಾಮ ಕಾರಂತ ಬಿಡಿಎ ಜಾಗದಲ್ಲಿ ಮರಗಳ ಮೇಲೆ ಪ್ರಭಾವಿಗಳ ಕಣ್ಣು, ನೂರಾರು ಮರಗಳನ್ನು ಕ್ಷಣಾರ್ಧದಲ್ಲಿ ಕೊಚ್ಚಿಹಾಕಿದರು

ಮರಗಳ ಮಾರಣಹೋಮ‌ ಪ್ರಕರಣದಲ್ಲಿ ಇತ್ತೀಚೆಗೆ ಸಂಸದ ಪ್ರತಾಪ್ ಸಿಂಹ ತಮ್ಮ ವಿಕ್ರಂ ಸಿಂಹ ಅವರ ಹೆಸರು ಕೇಳಿಬಂದಿತ್ತು. ಮರಗಳ ಮಾರಣಹೋಮಕ್ಕೂ‌ ನನಗೂ ಯಾವುದೇ ಸಂಬಂಧವಿಲ್ಲ ಎಂದು ಬಳಿಕ ಅವರು ಸ್ಪಷ್ಟನೆ ನೀಡಿದ್ದರು. ನಾನು ಶುಂಠಿ ಬೆಳೆಯಲು ಜುಲೈ 24 ರಿಂದ ಆ ಭೂಮಿಯನ್ನು ಒಂದು ವರ್ಷಕ್ಕೆ ಅಗ್ರಿಮೆಂಟ್ ಮಾಡಿಕೊಂಡಿದ್ದೇನೆ. ಆದರೆ, ಮರಗಳನ್ನು ಕಡಿದಿರುವುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:25 pm, Thu, 28 December 23