AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಆಲೂರಿನಲ್ಲಿ ರಾತ್ರೋರಾತ್ರಿ ನಿಗೂಢ ಸ್ಫೋಟಕ್ಕೆ ಛಿದ್ರವಾದ ಮನೆ ಗೋಡೆ, ದಂಪತಿಗೆ ಗಂಭೀರ ಗಾಯ

ಊರಿಗೆ ಊರೇ ನಿದ್ರೆಗೆ ಜಾರುವ ಹೊತ್ತಿನಲ್ಲಿ ಹಾಸನದ ಆಲೂರಿನಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಸ್ಥಳೀಯರ ಎದೆ ನಡುಗಿಸುವಂಥ ನಿಗೂಢ ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳೇ ಛಿದ್ರವಾಗಿವೆ. ಮನೆಯಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಅದೃಷ್ಟವಶಾತ್ ಮಕ್ಕಳಿಬ್ಬರು ಬಚಾವಾಗಿದ್ದಾರೆ. ಅಷ್ಟಕ್ಕೂ ಆಲೂರಿನಲ್ಲಿ ಸಂಭವಿಸಿದ ಸ್ಫೋಟಕ್ಕೆ ಕಾರಣವೇನು? ವಿವರಗಳು ಇಲ್ಲಿವೆ.

ಹಾಸನ: ಆಲೂರಿನಲ್ಲಿ ರಾತ್ರೋರಾತ್ರಿ ನಿಗೂಢ ಸ್ಫೋಟಕ್ಕೆ ಛಿದ್ರವಾದ ಮನೆ ಗೋಡೆ, ದಂಪತಿಗೆ ಗಂಭೀರ ಗಾಯ
ಆಲೂರಿನಲ್ಲಿ ರಾತ್ರೋರಾತ್ರಿ ನಿಗೂಢ ಸ್ಫೋಟಕ್ಕೆ ಛಿದ್ರವಾದ ಮನೆ ಗೋಡೆ, ದಂಪತಿಗೆ ಗಂಭೀರ ಗಾಯ
ಮಂಜುನಾಥ ಕೆಬಿ
| Edited By: |

Updated on: Sep 30, 2025 | 9:58 AM

Share

ಹಾಸನ, ಸೆಪ್ಟೆಂಬರ್ 30: ಹಾಸನ (Hassan) ಜಿಲ್ಲೆ ಆಲೂರು ಪಟ್ಟಣದ ಆಲೂರು ಪ್ರದೇಶದಲ್ಲಿ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಊರಿಗೆ ಊರೇ ಬೆಚ್ಚಿಬೀಳಿಸುವಂತಹ ಸ್ಫೋಟ ಸಂಭವಿಸಿದೆ. ಖಾಸಗಿ ಕಂಪನಿ ಉದ್ಯೋಗಿಯಾದ ಸುದರ್ಶನ್‌ ಆಚಾರ್ (32)ಮತ್ತು ಪತ್ನಿ ಕಾವ್ಯಾ (27) ತಮ್ಮ ಇಬ್ಬರು ಮಕ್ಕಳ ಜೊತೆ ಮನೆಯಲ್ಲಿದ್ದ ವೇಳೆ ಈ ಘೋರ ದುರಂತ ಸಂಭವಿಸಿದೆ. ಮೇಲ್ನೋಟಕ್ಕೆ ಇದೊಂದು ಸಿಲಿಂಡರ್‌ ಬ್ಲಾಸ್ಟ್‌ ಎಂಬ ರೀತಿ ಕಾಣಿಸಿದೆ. ಸ್ಥಳೀಯರು ಆ್ಯಂಬುಲೆನ್ಸ್ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಸ್ಫೋಟದ ತೀವ್ರತೆ ಹೇಗಿತ್ತೆಂದರೆ, ಇಡೀ ಮನೆಯೇ ಧ್ವಂಸವಾಗಿದೆ. ಮನೆಯ ಹೊರಗಡೆ ಈ ಸ್ಫೋಟ ಆಗಿದ್ದು, ಮನೆ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಕಾಂಪೌಂಡ್‌ ಕುಸಿದುಬಿದ್ದಿದೆ. ಸ್ಫೋಟದ ತೀವ್ರತೆ ನೋಡಿದರೆ ಇದು ಜಿಲೆಟಿನ್‌ ಅಥವಾ ಡಿಟೋನೇಟರ್‌ ಇರಬಹುದೇ ಎಂಬ ಅನುಮಾನ ಮೂಡಿದೆ. ಅದೃಷ್ಟವಶಾತ್, ಮನೆ ಒಳಗಿದ್ದ ಮಕ್ಕಳಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಹಾಸನದ ಹಿಮ್ಸ್‌ನಲ್ಲಿ ಗಾಯಾಳು ದಂಪತಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ದೀಪಾವಳಿಗೆ ಎಂದು ಪಟಾಕಿ ಏನಾದ್ರೂ ಸಂಗ್ರಹಿಸಿದ್ದರೇ? ಇದರಿಂದಲೇ ದುರಂತ ಸಂಭವಿಸಿತಾ ಎಂಬ ಬಗ್ಗೆಯೂ ಆಲೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಮನೆ ಒಂಟಿ ಮನೆಯಾಗಿದ್ದು, ಅಕ್ಕಪಕ್ಕ 50 ಮೀಟರ್ ದೂರದಲ್ಲಿ ಯಾವುದೇ ಮನೆಗಳಿಲ್ಲ. ಇದ್ದಿದ್ದರೆ ಮತ್ತಷ್ಟು ಅನಾಹುತ ಸಂಭವಿಸುತ್ತಿತ್ತು.

ಗಾಯಾಳುಗಳನ್ನು ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರ

ಏತನ್ಮಧ್ಯೆ, ಗಾಯಾಳುಗಳಾದ ಸುದರ್ಶನ್ ಆಚಾರ್, ಕಾವ್ಯಾ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಿಮ್ಸ್​ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ. ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಂಪತಿಯನ್ನು ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಮೊದಲ ಬಾರಿ ಋತುಮತಿಯಾದ ಬಾಲಕಿಯರೇ ಟಾರ್ಗೆಟ್‌, 20 ಲಕ್ಷಕ್ಕೆ ಬಾಲಕಿ ಪೂರೈಸುವ ಜಾಲ ಪತ್ತೆ

ಮತ್ತೊಂದೆಡೆ, ವಿವಿಧ ಆಯಾಮಗಳಲ್ಲಿ ಪೊಲೀಸರ ತನಿಖೆ ಮುಂದವರಿದಿದೆ. ಸಿಲಿಂಡರ್ ಸ್ಫೋಟವೇ ಸಂಭವಿಸಿದೆಯಾ ಅಥವಾ ಸ್ಫೋಟಕ್ಕೆ ಬೇರೆ ಕಾರಣಗಳಿವೆಯೇ ಎಂಬ ಬಗ್ಗೆ ತನಿಖೆ ಪ್ರಗತಿಯಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ