AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಆಲೂರಿನಲ್ಲಿ ರಾತ್ರೋರಾತ್ರಿ ನಿಗೂಢ ಸ್ಫೋಟಕ್ಕೆ ಛಿದ್ರವಾದ ಮನೆ ಗೋಡೆ, ದಂಪತಿಗೆ ಗಂಭೀರ ಗಾಯ

ಊರಿಗೆ ಊರೇ ನಿದ್ರೆಗೆ ಜಾರುವ ಹೊತ್ತಿನಲ್ಲಿ ಹಾಸನದ ಆಲೂರಿನಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಸ್ಥಳೀಯರ ಎದೆ ನಡುಗಿಸುವಂಥ ನಿಗೂಢ ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳೇ ಛಿದ್ರವಾಗಿವೆ. ಮನೆಯಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಅದೃಷ್ಟವಶಾತ್ ಮಕ್ಕಳಿಬ್ಬರು ಬಚಾವಾಗಿದ್ದಾರೆ. ಅಷ್ಟಕ್ಕೂ ಆಲೂರಿನಲ್ಲಿ ಸಂಭವಿಸಿದ ಸ್ಫೋಟಕ್ಕೆ ಕಾರಣವೇನು? ವಿವರಗಳು ಇಲ್ಲಿವೆ.

ಹಾಸನ: ಆಲೂರಿನಲ್ಲಿ ರಾತ್ರೋರಾತ್ರಿ ನಿಗೂಢ ಸ್ಫೋಟಕ್ಕೆ ಛಿದ್ರವಾದ ಮನೆ ಗೋಡೆ, ದಂಪತಿಗೆ ಗಂಭೀರ ಗಾಯ
ಆಲೂರಿನಲ್ಲಿ ರಾತ್ರೋರಾತ್ರಿ ನಿಗೂಢ ಸ್ಫೋಟಕ್ಕೆ ಛಿದ್ರವಾದ ಮನೆ ಗೋಡೆ, ದಂಪತಿಗೆ ಗಂಭೀರ ಗಾಯ
ಮಂಜುನಾಥ ಕೆಬಿ
| Edited By: |

Updated on: Sep 30, 2025 | 9:58 AM

Share

ಹಾಸನ, ಸೆಪ್ಟೆಂಬರ್ 30: ಹಾಸನ (Hassan) ಜಿಲ್ಲೆ ಆಲೂರು ಪಟ್ಟಣದ ಆಲೂರು ಪ್ರದೇಶದಲ್ಲಿ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಊರಿಗೆ ಊರೇ ಬೆಚ್ಚಿಬೀಳಿಸುವಂತಹ ಸ್ಫೋಟ ಸಂಭವಿಸಿದೆ. ಖಾಸಗಿ ಕಂಪನಿ ಉದ್ಯೋಗಿಯಾದ ಸುದರ್ಶನ್‌ ಆಚಾರ್ (32)ಮತ್ತು ಪತ್ನಿ ಕಾವ್ಯಾ (27) ತಮ್ಮ ಇಬ್ಬರು ಮಕ್ಕಳ ಜೊತೆ ಮನೆಯಲ್ಲಿದ್ದ ವೇಳೆ ಈ ಘೋರ ದುರಂತ ಸಂಭವಿಸಿದೆ. ಮೇಲ್ನೋಟಕ್ಕೆ ಇದೊಂದು ಸಿಲಿಂಡರ್‌ ಬ್ಲಾಸ್ಟ್‌ ಎಂಬ ರೀತಿ ಕಾಣಿಸಿದೆ. ಸ್ಥಳೀಯರು ಆ್ಯಂಬುಲೆನ್ಸ್ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಸ್ಫೋಟದ ತೀವ್ರತೆ ಹೇಗಿತ್ತೆಂದರೆ, ಇಡೀ ಮನೆಯೇ ಧ್ವಂಸವಾಗಿದೆ. ಮನೆಯ ಹೊರಗಡೆ ಈ ಸ್ಫೋಟ ಆಗಿದ್ದು, ಮನೆ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಕಾಂಪೌಂಡ್‌ ಕುಸಿದುಬಿದ್ದಿದೆ. ಸ್ಫೋಟದ ತೀವ್ರತೆ ನೋಡಿದರೆ ಇದು ಜಿಲೆಟಿನ್‌ ಅಥವಾ ಡಿಟೋನೇಟರ್‌ ಇರಬಹುದೇ ಎಂಬ ಅನುಮಾನ ಮೂಡಿದೆ. ಅದೃಷ್ಟವಶಾತ್, ಮನೆ ಒಳಗಿದ್ದ ಮಕ್ಕಳಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಹಾಸನದ ಹಿಮ್ಸ್‌ನಲ್ಲಿ ಗಾಯಾಳು ದಂಪತಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ದೀಪಾವಳಿಗೆ ಎಂದು ಪಟಾಕಿ ಏನಾದ್ರೂ ಸಂಗ್ರಹಿಸಿದ್ದರೇ? ಇದರಿಂದಲೇ ದುರಂತ ಸಂಭವಿಸಿತಾ ಎಂಬ ಬಗ್ಗೆಯೂ ಆಲೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಮನೆ ಒಂಟಿ ಮನೆಯಾಗಿದ್ದು, ಅಕ್ಕಪಕ್ಕ 50 ಮೀಟರ್ ದೂರದಲ್ಲಿ ಯಾವುದೇ ಮನೆಗಳಿಲ್ಲ. ಇದ್ದಿದ್ದರೆ ಮತ್ತಷ್ಟು ಅನಾಹುತ ಸಂಭವಿಸುತ್ತಿತ್ತು.

ಗಾಯಾಳುಗಳನ್ನು ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರ

ಏತನ್ಮಧ್ಯೆ, ಗಾಯಾಳುಗಳಾದ ಸುದರ್ಶನ್ ಆಚಾರ್, ಕಾವ್ಯಾ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಿಮ್ಸ್​ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ. ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಂಪತಿಯನ್ನು ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಮೊದಲ ಬಾರಿ ಋತುಮತಿಯಾದ ಬಾಲಕಿಯರೇ ಟಾರ್ಗೆಟ್‌, 20 ಲಕ್ಷಕ್ಕೆ ಬಾಲಕಿ ಪೂರೈಸುವ ಜಾಲ ಪತ್ತೆ

ಮತ್ತೊಂದೆಡೆ, ವಿವಿಧ ಆಯಾಮಗಳಲ್ಲಿ ಪೊಲೀಸರ ತನಿಖೆ ಮುಂದವರಿದಿದೆ. ಸಿಲಿಂಡರ್ ಸ್ಫೋಟವೇ ಸಂಭವಿಸಿದೆಯಾ ಅಥವಾ ಸ್ಫೋಟಕ್ಕೆ ಬೇರೆ ಕಾರಣಗಳಿವೆಯೇ ಎಂಬ ಬಗ್ಗೆ ತನಿಖೆ ಪ್ರಗತಿಯಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ