AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಆಲೂರಿನಲ್ಲಿ ರಾತ್ರೋರಾತ್ರಿ ನಿಗೂಢ ಸ್ಫೋಟಕ್ಕೆ ಛಿದ್ರವಾದ ಮನೆ ಗೋಡೆ, ದಂಪತಿಗೆ ಗಂಭೀರ ಗಾಯ

ಊರಿಗೆ ಊರೇ ನಿದ್ರೆಗೆ ಜಾರುವ ಹೊತ್ತಿನಲ್ಲಿ ಹಾಸನದ ಆಲೂರಿನಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಸ್ಥಳೀಯರ ಎದೆ ನಡುಗಿಸುವಂಥ ನಿಗೂಢ ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳೇ ಛಿದ್ರವಾಗಿವೆ. ಮನೆಯಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಅದೃಷ್ಟವಶಾತ್ ಮಕ್ಕಳಿಬ್ಬರು ಬಚಾವಾಗಿದ್ದಾರೆ. ಅಷ್ಟಕ್ಕೂ ಆಲೂರಿನಲ್ಲಿ ಸಂಭವಿಸಿದ ಸ್ಫೋಟಕ್ಕೆ ಕಾರಣವೇನು? ವಿವರಗಳು ಇಲ್ಲಿವೆ.

ಹಾಸನ: ಆಲೂರಿನಲ್ಲಿ ರಾತ್ರೋರಾತ್ರಿ ನಿಗೂಢ ಸ್ಫೋಟಕ್ಕೆ ಛಿದ್ರವಾದ ಮನೆ ಗೋಡೆ, ದಂಪತಿಗೆ ಗಂಭೀರ ಗಾಯ
ಆಲೂರಿನಲ್ಲಿ ರಾತ್ರೋರಾತ್ರಿ ನಿಗೂಢ ಸ್ಫೋಟಕ್ಕೆ ಛಿದ್ರವಾದ ಮನೆ ಗೋಡೆ, ದಂಪತಿಗೆ ಗಂಭೀರ ಗಾಯ
ಮಂಜುನಾಥ ಕೆಬಿ
| Edited By: |

Updated on: Sep 30, 2025 | 9:58 AM

Share

ಹಾಸನ, ಸೆಪ್ಟೆಂಬರ್ 30: ಹಾಸನ (Hassan) ಜಿಲ್ಲೆ ಆಲೂರು ಪಟ್ಟಣದ ಆಲೂರು ಪ್ರದೇಶದಲ್ಲಿ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಊರಿಗೆ ಊರೇ ಬೆಚ್ಚಿಬೀಳಿಸುವಂತಹ ಸ್ಫೋಟ ಸಂಭವಿಸಿದೆ. ಖಾಸಗಿ ಕಂಪನಿ ಉದ್ಯೋಗಿಯಾದ ಸುದರ್ಶನ್‌ ಆಚಾರ್ (32)ಮತ್ತು ಪತ್ನಿ ಕಾವ್ಯಾ (27) ತಮ್ಮ ಇಬ್ಬರು ಮಕ್ಕಳ ಜೊತೆ ಮನೆಯಲ್ಲಿದ್ದ ವೇಳೆ ಈ ಘೋರ ದುರಂತ ಸಂಭವಿಸಿದೆ. ಮೇಲ್ನೋಟಕ್ಕೆ ಇದೊಂದು ಸಿಲಿಂಡರ್‌ ಬ್ಲಾಸ್ಟ್‌ ಎಂಬ ರೀತಿ ಕಾಣಿಸಿದೆ. ಸ್ಥಳೀಯರು ಆ್ಯಂಬುಲೆನ್ಸ್ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಸ್ಫೋಟದ ತೀವ್ರತೆ ಹೇಗಿತ್ತೆಂದರೆ, ಇಡೀ ಮನೆಯೇ ಧ್ವಂಸವಾಗಿದೆ. ಮನೆಯ ಹೊರಗಡೆ ಈ ಸ್ಫೋಟ ಆಗಿದ್ದು, ಮನೆ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಕಾಂಪೌಂಡ್‌ ಕುಸಿದುಬಿದ್ದಿದೆ. ಸ್ಫೋಟದ ತೀವ್ರತೆ ನೋಡಿದರೆ ಇದು ಜಿಲೆಟಿನ್‌ ಅಥವಾ ಡಿಟೋನೇಟರ್‌ ಇರಬಹುದೇ ಎಂಬ ಅನುಮಾನ ಮೂಡಿದೆ. ಅದೃಷ್ಟವಶಾತ್, ಮನೆ ಒಳಗಿದ್ದ ಮಕ್ಕಳಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಹಾಸನದ ಹಿಮ್ಸ್‌ನಲ್ಲಿ ಗಾಯಾಳು ದಂಪತಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ದೀಪಾವಳಿಗೆ ಎಂದು ಪಟಾಕಿ ಏನಾದ್ರೂ ಸಂಗ್ರಹಿಸಿದ್ದರೇ? ಇದರಿಂದಲೇ ದುರಂತ ಸಂಭವಿಸಿತಾ ಎಂಬ ಬಗ್ಗೆಯೂ ಆಲೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಮನೆ ಒಂಟಿ ಮನೆಯಾಗಿದ್ದು, ಅಕ್ಕಪಕ್ಕ 50 ಮೀಟರ್ ದೂರದಲ್ಲಿ ಯಾವುದೇ ಮನೆಗಳಿಲ್ಲ. ಇದ್ದಿದ್ದರೆ ಮತ್ತಷ್ಟು ಅನಾಹುತ ಸಂಭವಿಸುತ್ತಿತ್ತು.

ಗಾಯಾಳುಗಳನ್ನು ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರ

ಏತನ್ಮಧ್ಯೆ, ಗಾಯಾಳುಗಳಾದ ಸುದರ್ಶನ್ ಆಚಾರ್, ಕಾವ್ಯಾ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಿಮ್ಸ್​ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ. ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಂಪತಿಯನ್ನು ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಮೊದಲ ಬಾರಿ ಋತುಮತಿಯಾದ ಬಾಲಕಿಯರೇ ಟಾರ್ಗೆಟ್‌, 20 ಲಕ್ಷಕ್ಕೆ ಬಾಲಕಿ ಪೂರೈಸುವ ಜಾಲ ಪತ್ತೆ

ಮತ್ತೊಂದೆಡೆ, ವಿವಿಧ ಆಯಾಮಗಳಲ್ಲಿ ಪೊಲೀಸರ ತನಿಖೆ ಮುಂದವರಿದಿದೆ. ಸಿಲಿಂಡರ್ ಸ್ಫೋಟವೇ ಸಂಭವಿಸಿದೆಯಾ ಅಥವಾ ಸ್ಫೋಟಕ್ಕೆ ಬೇರೆ ಕಾರಣಗಳಿವೆಯೇ ಎಂಬ ಬಗ್ಗೆ ತನಿಖೆ ಪ್ರಗತಿಯಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ