AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ತನ್ನ ಪ್ರೀತಿ ಸಾಬೀತು ಮಾಡಲು ಪ್ರೇಯಸಿಗೆ ವೀಡಿಯೋ ಕಾಲ್ ಮಾಡಿ ಹಳೆ ಲವರ್​ ಮೇಲೆ ಮಾರಣಾಂತಿಕ ಹಲ್ಲೆ

ಓಬ್ಬ ಯುವತಿಯನ್ನ ಪ್ರೀತಿಸುವುದಾಗಿ ನಂಬಿಸಿ ಮತ್ತೊಬ್ಬಳಿಗೆ ಅಮಾನುಷವಾಗಿ ಹಲ್ಲೆಮಾಡಿದ ಯುವಕನನ್ನು ಸಕಲೇಶಪುರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಯುವಕನ ವಿರುದ್ಧ ಇಬ್ಬರು ಯುವರಿಯರು ಪ್ರತ್ಯೇಕ ದೂರು ನೀಡಿದ್ದು, ಸಕಲೇಶಪುರ ಗ್ರಾಮಾಂತರ ಹಾಗು ನಗರ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಹಾಸನ: ತನ್ನ ಪ್ರೀತಿ ಸಾಬೀತು ಮಾಡಲು ಪ್ರೇಯಸಿಗೆ ವೀಡಿಯೋ ಕಾಲ್ ಮಾಡಿ ಹಳೆ ಲವರ್​ ಮೇಲೆ ಮಾರಣಾಂತಿಕ ಹಲ್ಲೆ
ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪಿ ಶರತ್ (ಎಡಚಿತ್ರ) ಮತ್ತು ಶರತ್ ಯುವತಿಗೆ ವಿಡಿಯೋ ಕಾಲ್ ಮಾಡಿದ ದೃಶ್ಯ (ಬಲಚಿತ್ರ)
ಮಂಜುನಾಥ ಕೆಬಿ
| Edited By: |

Updated on:Dec 01, 2023 | 10:50 AM

Share

ಹಾಸನ, ಡಿ.1: ಯುವಕನೊಬ್ಬ ತನ್ನ ಪ್ರೀತಿಯನ್ನು ಸಾಬೀತು ಮಾಡಲು ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿ ಹಳೆ ಪ್ರೇಯಸಿ ಮೇಲೆ ಮಾರಣಾಂತಿಕವಾಗಿ ಹಲ್ಲೆ (Assault) ನಡೆಸಿದ ಘಟನೆ ಹಾಸನ (Hassan) ಜಿಲ್ಲೆಯ ಬೇಲೂರು ತಾಲೂಕಿನ ಗರ್ಜೆ ಗ್ರಾಮದಲ್ಲಿ ನಡೆದಿದೆ. ಪ್ರೀತಿಯ ನಾಟಕವಾಡಿ ತನ್ನ ಮನೆಗೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದ ಶರತ್ ಸಾಲಿಯಾನ್ ಬಂಧಿತ ಆರೋಪಿ.

ಘಟನೆ ಸಂಬಂಧ ಸಕಲೇಶಪುರ ತಾಲೂಕಿನ ನೊಂದ ಯುವತಿಯರಿಬ್ಬರು ದೂರು ನೀಡಿದ್ದು, ಸಕಲೇಶಪುರ ಗ್ರಾಮಾಂತರ ಹಾಗೂ ನಗರ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ. ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಯ ಶರತ್‌, ಮೂರು ವರ್ಷಗಳಿಂದ ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದನು.

ತನ್ನ ಪ್ರೀತಿಯ ಬಲೆಗೆ ಬಿದ್ದ ಬಳಿಕ ಹಣ, ಒಡವೆ ಪಡೆದು ವಂಚಿಸುತ್ತಿದ್ದನು. ಒಬ್ಬ ಯುವತಿಯನ್ನ ಪ್ರೀತಿಸುವಾಗಲೇ ಮತ್ತೊಬ್ಬಳಿಗೆ ಗಾಳ ಹಾಕುತ್ತಿದ್ದನು. ವಂಚಕನ ಮೋಸದ ಬಗ್ಗೆ ಅನುಮಾನಗೊಂಡ ಯುವತಿ ಪ್ರಶ್ನೆ ಮಾಡಿದಾಗ ಅವಳನ್ನು ನಂಬಿಸಲು ಮತ್ತೊಬ್ಬಳ ಮೇಲೆ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ: ಹಾಸನ: ಆಗಿಲೆ ಗ್ರಾಮದ ಕುಂತಿ ಬೆಟ್ಟದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಬರ್ಬರ ಹತ್ಯೆ ಮಾಡಿದ ಪಾಗಲ್ ಪ್ರೇಮಿ

ಅಷ್ಟು ಮಾತ್ರವಲ್ಲದೆ, ಹಲ್ಲೆ ನಡೆಸುವಾಗ ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿ ಹಲ್ಲೆ ನಡೆಸಿದ್ದಾನೆ. ತನ್ನದೇ ಮನೆಯಲ್ಲಿ ಯುವತಿಯನ್ನ ನೇಣು ಬಿಗಿಯೊ ಯತ್ನ ಮಾಡಿದ್ದನು. ಇದನ್ನು ಆಕೆ ರೆಕಾರ್ಡ್ ಮಾಡಿಕೊಂಡಿದ್ದಾಳೆ. ಹಲ್ಲೆ ಮಾಡಿದ ವೀಡಿಯೋ ಆದರಿಸಿ ಇಬ್ಬರು ಯುವತಿಯರು ಠಾಣೆಗೆ ದೂರು ನೀಡುವ ಮೂಲಕ ಯುವಕನ ಮುಖವಾಡವನ್ನು ಬಿಚ್ಚಿಟ್ಟಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕಾಣುವ ಸುಂದರ ಯುವತಿಯರಿಗೆ ಗಾಳ ಹಾಕುತ್ತಿದ್ದ ಆರೋಪಿ ಶರತ್, ಬಳಿಕ ಫೋನ್ ನಂಬರ್ ಪಡೆದು ನಯವಾಗಿ ಮಾತನಾಡಿ ತನ್ನ ಬಲೆಗೆ ಬೀಳಿಸಿಕೊಂಡು ವಂಚನೆ ಎಸಗುತ್ತಿದ್ದನು. ಹೀಗೆ ಹಲವು ಯುವತಿಯರನ್ನು ಪ್ರೀತಿ ಬಲೆಯಲ್ಲಿ ಬೀಳಿಸಿಕೊಂಡು ವಂಚಿಸಿದ್ದಾಗಿ ತಿಳಿದುಬಂದಿದೆ. ಸದ್ಯ ನವಂಬರ್ 29 ರಂದು ಶರತ್​ನನ್ನು ಸಕಲೇಶಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 am, Fri, 1 December 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ