AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ವರ್ಷಗಳ ನಂತರ ಬೇಲೂರು ಪುರಸಭೆ ಕಾಂಗ್ರೆಸ್ ಪಾಲು

ಅಧ್ಯಕ್ಷರಾಗಿ ಚ.ನಾ.ದಾನಿ, ಉಪಾಧ್ಯಕ್ಷರಾಗಿ ರತ್ನಮ್ಮ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ನಗರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

25 ವರ್ಷಗಳ ನಂತರ ಬೇಲೂರು ಪುರಸಭೆ ಕಾಂಗ್ರೆಸ್ ಪಾಲು
ಕಾಂಗ್ರೆಸ್
TV9 Web
| Edited By: |

Updated on:Oct 04, 2021 | 5:45 PM

Share

ಹಾಸನ: 25 ವರ್ಷಗಳ ಬಳಿಕ ಬೇಲೂರು ಪುರಸಭೆ ಕಾಂಗ್ರೆಸ್ ಪಾಲಾಗಿದೆ. 23 ವಾರ್ಡ್​ಗಳ ಪೈಕಿ 17 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿದಿದೆ. ಅಧ್ಯಕ್ಷರಾಗಿ ಚ.ನಾ.ದಾನಿ, ಉಪಾಧ್ಯಕ್ಷರಾಗಿ ರತ್ನಮ್ಮ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ನಗರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಸಮುದ್ರದಲ್ಲಿ ಮುಳುಗುತ್ತಿದ್ದ 4 ಮಕ್ಕಳೂ ಸೇರಿ ಒಂದೇ ಕುಟುಂಬದ 6 ಜನರ ರಕ್ಷಣೆ ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಆರು ಮಕ್ಕಳನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಕಾರವಾರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಪ್ರವಾಸಕ್ಕೆ ಆಗಮಿಸಿದ್ದ ಒಂದೇ ಕುಟುಂಬದ 4 ಮಕ್ಕಳು ಸೇರಿ ಒಟ್ಟು ಆರು ಮಂದಿ ಕಡಲತೀರದಲ್ಲಿ ಆಟವಾಡುತ್ತಿದ್ದರು. ಆದರೆ ಒಮ್ಮೆಲೆ ಬಂದ ಅಲೆಯಿಂದ ಎಲ್ಲರೂ ಕೊಚ್ಚಿ ಹೋಗಿದ್ದಾರೆ. ತಕ್ಷಣ ಕುಟುಂಬಸ್ಥರು ಕೂಗಿಕೊಂಡಿದ್ದಾರೆ. ಬಳಿಕ ರಕ್ಷಣೆಗೆ ಧಾವಿಸಿದ ಲೈಫ್‌ಗಾರ್ಡ್ ಮತ್ತು ಟೂರಿಸ್ಟ್ ಮಿತ್ರ ಸಿಬ್ಬಂದಿ ಆರು ಜನರನ್ನೂ ರಕ್ಷಿಸಿದ್ದಾರೆ. ಮಕ್ಕಳು ನೀರು ಕುಡಿದಿದ್ದರಿಂದ ಪ್ರಜ್ಞೆ ತಪ್ಪಿದ್ದರು. ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದರಿಂದ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.

ಶಿರಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ಶಿಥಿಲಾವಸ್ಥೆಗೆ; ವಿದ್ಯಾರ್ಥಿಗಳ ಆತಂಕ ತುಮಕೂರು: ಶಿರಾ ಪಟ್ಟಣದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ. ಕಟ್ಟಡ 1955ರಲ್ಲಿ ನಿರ್ಮಾಣವಾಗಿದ್ದು ಸಂಸ್ಥೆಯ ಪ್ರೌಢಶಾಲಾ ವಿಭಾಗವು ಸಹ ಇದೇ ಕಟ್ಟಡದಲ್ಲಿದೆ. ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. 8 ರಿಂದ10ನೇ ತರಗತಿಯವರಗೆ ಒಟ್ಟು 580 ವಿದ್ಯಾರ್ಥಿಗಳು ಪ್ರೌಢಶಾಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಟ್ಟಡ ಶಿಥಿಲಗೊಂಡಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಕಟ್ಟಡವನ್ನು ನವೀಕರಣ ಮಾಡುವಂತೆ ಮನವಿ ಮಾಡಿದರೂ ನಿರ್ಲಕ್ಷ್ಯ ತೋರಲಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಇದನ್ನೂ ಓದಿ: 

ಹಾಸನದ ಆಲೂಗಡ್ಡೆ ಬೆಳೆಗಾರರಿಗೆ 129 ಕೋಟಿ ನಷ್ಟವಾಗಿದೆ: ಎಚ್.ಡಿ.ರೇವಣ್ಣ ಆಕ್ಷೇಪ

ಶಾಲಾ ಕಾಲೇಜು ಪ್ರಾರಂಭ ಆದರೂ ಬಸ್ಗಳನ್ನು ಬಿಟ್ಟಿಲ್ಲ ವಿಧಾನಸಭೆಯಲ್ಲಿ ಬೇಲೂರು ಶಾಸಕ ಪ್ರಸ್ತಾಪ, ಇದಕ್ಕೆ ಸಾರಿಗೆ ಸಚಿವರು ನೀಡಿದ ಉತ್ತರ ಏನು?

Published On - 5:06 pm, Mon, 4 October 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ