AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಿ ಮನೆಗೆ ಬಂದು ಸ್ನಾನ ಮಾಡುವಾಗ ಹೃದಯಾಘಾತದಿಂದ ಸಬ್‌ಇನ್ಸ್‌ಪೆಕ್ಟರ್ ಸಾವು

ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಬ್‌ಇನ್ಸ್‌ಪೆಕ್ಟರ್ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.

ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಿ ಮನೆಗೆ ಬಂದು ಸ್ನಾನ ಮಾಡುವಾಗ ಹೃದಯಾಘಾತದಿಂದ ಸಬ್‌ಇನ್ಸ್‌ಪೆಕ್ಟರ್ ಸಾವು
ಸಬ್‌ಇನ್ಸ್‌ಪೆಕ್ಟರ್ ಮಾದನಾಯಕ್
TV9 Web
| Updated By: ಆಯೇಷಾ ಬಾನು|

Updated on:Aug 16, 2022 | 9:43 PM

Share

ಹಾಸನ: ಹೃದಯಾಘಾತದಿಂದ ಸಬ್‌ಇನ್ಸ್‌ಪೆಕ್ಟರ್ ಮಾದನಾಯಕ್ (52) ಮೃತಪಟ್ಟಿದ್ದಾರೆ. ಹಾಸನ ನಗರಠಾಣೆ ಅಪರಾಧ ವಿಭಾಗದ ಸಬ್‌ಇನ್ಸ್‌ಪೆಕ್ಟರ್ ಆಗಿದ್ದ ಮಾದನಾಯಕ್ ಪ್ರಕರಣವೊಂದರ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಿ ನಂತರ ಜೈಲಿಗೆ ಬಿಟ್ಟು ಮನೆಗೆ ತೆರಳಿದ್ದರು. ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಬ್‌ಇನ್ಸ್‌ಪೆಕ್ಟರ್ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.

ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ನೇಣಿಗೆ ಶರಣು

ವಿಜಯಪುರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ನೇಣಿಗೆ ಶರಣಾದ ಘಟನೆ ಬಸವನಬಾಗೇವಾಡಿ ತಾಲೂಕಿನ ದೇಗಿನಾಳ ಗ್ರಾಮದಲ್ಲಿ ನಡೆದಿದೆ. ಸುರೇಶ ಮಾಕೊಂಡ (44) ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ನೇಣಿಗೆ ಶರಣಾಗಿದ್ದಾರೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು

ಚಾಮರಾಜನಗರ: ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಗ್ರಾಮದಲ್ಲಿ ನಡೆದಿದೆ. ಚಂದ್ರು(19), ಸುನಿಲ್(27) ಮೃತ ದುರ್ದೈವಿಗಳು. ಮೃತರು ಮಂಡ್ಯ ಜಿಲ್ಲೆಯ ಹಲಗೂರು ನಿವಾಸಿಗಳು ಎಂದು ತಿಳಿದು ಬಂದಿದೆ. ಯುವಕರು ಕುಟುಂಬದವರ ಜತೆ ದೇಗುಲಕ್ಕೆ ಬಂದಿದ್ದಾಗ ಪೂಜೆ ನಂತರ ಕಾಲುವೆಯಲ್ಲಿ ಈಜಲು ತೆರಳಿದ್ದಾಗ ದುರಂತ ಸಂಭವಿಸಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಯುವಕ ಸಾವು

ರಾಮನಗರ: ಕನಕಪುರ ತಾಲ್ಲೂಕಿನ ಚುಂಚಿಫಾಲ್ಸ್ ಬಳಿ ಯುವಕ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಪ್ರವೀಣ್ ಚಂದ್ರ (26) ಮೃತ ಯುವಕ. ಮೃತ ಯುವಕ ಬೆಂಗಳೂರಿನ ಶಂಕರಮಠದ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದನು. ಪ್ರವೀಣ್ ಚಂದ್ರ ಭಾನುವಾರ ತನ್ನ ಇಬ್ಬರು ಸ್ನೇಹಿತರ ಜೊತೆ ಚುಂಚಿಫಾಲ್ಸ್​ಗೆ ಬಂದಿದ್ದನು.

ಈ ವೇಳೆ ಅಪಾಯದ ಸ್ಥಳದಲ್ಲಿ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಕಾಲು ಚಾರಿ ಬಿದ್ದು ಸಾವನ್ನಪ್ಪಿದ್ದಾನೆ. ಇಂದು ಚುಂಚಿಪಾಲ್ಸ್ ನಿಂದ ಒಂದು ಕಿಲೋಮೀಟರ್ ದೂರದಲ್ಲಿದೆ ಮೃತ ದೇಹ ಪತ್ತೆಯಾಗಿದೆ. ಸಾತನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:25 pm, Tue, 16 August 22

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್