AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ: ಭವಿಷ್ಯ ನುಡಿದ ಮಾಜಿ ಸಚಿವ ಹೆಚ್​ಡಿ ರೇವಣ್ಣ

ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್​ಡಿ ರೇವಣ್ಣ, ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಸರ್ಕಾರ ವಿದ್ಯುತ್ ಇಲಾಖೆ ಖಾಸಗಿ ಕರಣ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ: ಭವಿಷ್ಯ ನುಡಿದ ಮಾಜಿ ಸಚಿವ ಹೆಚ್​ಡಿ ರೇವಣ್ಣ
ಮಾಜಿ ಸಚಿವ ರೇವಣ್ಣ
ಮಂಜುನಾಥ ಕೆಬಿ
| Edited By: |

Updated on: Jan 25, 2024 | 3:04 PM

Share

ಹಾಸನ, ಜನವರಿ 25: ನಮ್ಮ ಕಾಲದಲ್ಲಿ ಎಂದೂ ಕರೆಂಟ್ ಬಿಲ್ ಹೆಚ್ಚಿಸಿರಲಿಲ್ಲ. ಈ ಸರ್ಕಾರ ಬಂದ ಮೇಲೆ ಬಿಲ್ ಹೆಚ್ಚಿಸಿದರು. ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ. ಆ ಮೂಲಕ ಕೆಇಬಿ ಖಾಸಗಿ ಕರಣ ಆಗುತ್ತೆ ಎಂದು ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಆಲೂರು ಪಟ್ಟಣದಲ್ಲಿ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಇಬಿ ಸಾಲದಲ್ಲಿದೆ. ನಾನಿದ್ದಾಗ ಮೀಸಲು ಹಣ ಇಟ್ಟಿದ್ದೆ. ಕಾಂಗ್ರೆಸ್ ಸರ್ಕಾರ ವಿದ್ಯುತ್ ಇಲಾಖೆ ಖಾಸಗಿ ಕರಣ ಮಾಡುತ್ತಿದೆ. ಈ ಸರ್ಕಾರ ಚುನಾವಣೆ ಪೂರ್ವದಲ್ಲಿ ಆರನೇ ಗ್ಯಾರಂಟಿ ಹೇಳಿದ್ದರು. ಆದರೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಕೊಬ್ಬರಿಗೆ ಬೆಂಬಲ ಬೆಲೆ ನೀಡಿಲ್ಲ. ಪ್ರಧಾನಿಯವರು ದೇವೇಗೌಡರನ್ನು ಯಾವ ರೀತಿ ಗೌರವಿಸುತ್ತಾರೆ. ಕಾಂಗ್ರೆಸ್​ನವರು ಬೇಕಾದಾಗ ಉಪಯೋಗಿಸಿ ದೂರ ತಳ್ಳುತ್ತಾರೆ. ಕುಮಾರಸ್ವಾಮಿ ಅವರ ಸರ್ಕಾರ ತೆಗೆದಿದ್ದು ಯಾರು? ಯಾವ ಯಾವ ಲೋಕಸಭಾ ಸದಸ್ಯರು ಏನು ಮಾಡಿದಾರೆ ಹೇಳಲಿ ಎಂದು ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಮೀಸಲಾತಿ ಕೊಟ್ಟಿದ್ದರೆ ಹೇಳಲಿ ನಾನು ರಾಜಕೀಯ ಬಿಡುತ್ತೇನೆ

ನಮ್ಮ ಪಕ್ಷವನ್ನು ಕಾಂಗ್ರೆಸ್ ಕೈ ಹಿಡಿತಾರೆ. ಅಲ್ಪ ಸಂಖ್ಯಾತರಿಗೆ ಯಾವಾಗ ಟೋಪಿ ಹಾಕುತ್ತಾರೆ ಗೊತ್ತಿಲ್ಲ.  ಬಿಜೆಪಿಗಾಗಿ ಅವರು ಮುಸ್ಲಿಂನ ಹಿಡಿದುಕೊಂಡಿದಾರೆ. ದೇವೇಗೌಡರು ಮೀಸಲಾತಿ ಕೊಟ್ಟರು. ಅಲ್ಪ ಸಂಖ್ಯಾತರ ಪರವಾಗಿ ಕೆಲಸ ಮಾಡಿದ್ದು ದೇವೇಗೌಡರು. ಕಾಂಗ್ರೆಸ್​ನವರು ಕೇವಲ ಮುಸಲ್ಮಾನರ ಮತ ತಗೊಂಡರು. ಆದರೆ ಅವರಿಗೆ ಮೀಸಲಾತಿ ಕೊಟ್ಟಿದ್ದ ದೇವೇಗೌಡರು. ಕಾಂಗ್ರೆಸ್ ಮೀಸಲಾತಿ ಕೊಟ್ಟಿದ್ದರೆ ಹೇಳಲಿ ನಾನು ರಾಜಕೀಯ ಬಿಟ್ಟು ಹೋಗುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಅಸ್ಸಾಂನ ಆಂತರಿಕ ಸಂಘರ್ಷ ಗೊತ್ತಿದ್ದರೂ ರಾಹುಲ್ ಗಾಂಧಿ ಅಲ್ಲಿಗೆ ಹೋಗಿದ್ದೇಕೆ: ಹೆಚ್​ಡಿ ದೇವೇಗೌಡ ಪ್ರಶ್ನೆ

ಲೋಕಸಭಾ ಚುನಾವಣೆ ಆದ ಮೇಲೆ‌ ಯಾವ ಗ್ಯಾರಂಟಿ ಇರಲ್ಲ. ಕುಮಾರಸ್ವಾಮಿ ಸಿಎಂ‌ ಆಗಿದ್ದಾಗ ಕುಮಾರಸ್ವಾಮಿ ಸರಾಯಿ ನಿಷೇಧ ಮಾಡಿದರು. ಈಗ ಹೆಣ್ಮಕ್ಕಳು ಬೀದಿ ಬೀದಿಲಿ ಎಣ್ಣೆ ಅಂಗಡಿ ಆಗಿದೆ ಅಂತಿದಾರೆ. ಕಳೆದ ಆರು ತಿಂಗಳಲ್ಲಿ ಮೂರು ಬಾರಿ ಎಣ್ಣೆ ರೇಟ್ ಜಾಸ್ತಿಯಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಮೈತ್ರಿಯಿಂದ ಆನೆಬಲ: ಹಾಸನದಲ್ಲಿ ಹೆಚ್​ಡಿ ದೇವೇಗೌಡ ತಾಲೂಕುವಾರು ಸಭೆ

ಇದು ಬಡವರ ಸರ್ಕಾರ ಅಲ್ಲ. ಕುಮಾರಸ್ವಾಮಿ ಇದ್ದಾಗ ಕೊಡುತ್ತೆ ಎಂದು ಹೊರಟಿತ್ತು. ಈಗ ಜೋಡೆತ್ತು ಎಲ್ಲಿ ಅಂತಾರೆ. ದೇವೇಗೌಡರನ್ನು, ಕುಮಾರಸ್ವಾಮಿ ಅವರನ್ನು ಉಳಿಸಿದ್ದು ದೇವರು. 2024ಕ್ಕೆ ಮೋದಿಯವರು ಪ್ರಧಾನಿ ಆಗಬೇಕು, ದೇಶ ಉಳಿಸಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ