AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ: ಭವಿಷ್ಯ ನುಡಿದ ಮಾಜಿ ಸಚಿವ ಹೆಚ್​ಡಿ ರೇವಣ್ಣ

ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್​ಡಿ ರೇವಣ್ಣ, ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಸರ್ಕಾರ ವಿದ್ಯುತ್ ಇಲಾಖೆ ಖಾಸಗಿ ಕರಣ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ: ಭವಿಷ್ಯ ನುಡಿದ ಮಾಜಿ ಸಚಿವ ಹೆಚ್​ಡಿ ರೇವಣ್ಣ
ಮಾಜಿ ಸಚಿವ ರೇವಣ್ಣ
ಮಂಜುನಾಥ ಕೆಬಿ
| Edited By: |

Updated on: Jan 25, 2024 | 3:04 PM

Share

ಹಾಸನ, ಜನವರಿ 25: ನಮ್ಮ ಕಾಲದಲ್ಲಿ ಎಂದೂ ಕರೆಂಟ್ ಬಿಲ್ ಹೆಚ್ಚಿಸಿರಲಿಲ್ಲ. ಈ ಸರ್ಕಾರ ಬಂದ ಮೇಲೆ ಬಿಲ್ ಹೆಚ್ಚಿಸಿದರು. ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ. ಆ ಮೂಲಕ ಕೆಇಬಿ ಖಾಸಗಿ ಕರಣ ಆಗುತ್ತೆ ಎಂದು ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಆಲೂರು ಪಟ್ಟಣದಲ್ಲಿ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಇಬಿ ಸಾಲದಲ್ಲಿದೆ. ನಾನಿದ್ದಾಗ ಮೀಸಲು ಹಣ ಇಟ್ಟಿದ್ದೆ. ಕಾಂಗ್ರೆಸ್ ಸರ್ಕಾರ ವಿದ್ಯುತ್ ಇಲಾಖೆ ಖಾಸಗಿ ಕರಣ ಮಾಡುತ್ತಿದೆ. ಈ ಸರ್ಕಾರ ಚುನಾವಣೆ ಪೂರ್ವದಲ್ಲಿ ಆರನೇ ಗ್ಯಾರಂಟಿ ಹೇಳಿದ್ದರು. ಆದರೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಕೊಬ್ಬರಿಗೆ ಬೆಂಬಲ ಬೆಲೆ ನೀಡಿಲ್ಲ. ಪ್ರಧಾನಿಯವರು ದೇವೇಗೌಡರನ್ನು ಯಾವ ರೀತಿ ಗೌರವಿಸುತ್ತಾರೆ. ಕಾಂಗ್ರೆಸ್​ನವರು ಬೇಕಾದಾಗ ಉಪಯೋಗಿಸಿ ದೂರ ತಳ್ಳುತ್ತಾರೆ. ಕುಮಾರಸ್ವಾಮಿ ಅವರ ಸರ್ಕಾರ ತೆಗೆದಿದ್ದು ಯಾರು? ಯಾವ ಯಾವ ಲೋಕಸಭಾ ಸದಸ್ಯರು ಏನು ಮಾಡಿದಾರೆ ಹೇಳಲಿ ಎಂದು ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಮೀಸಲಾತಿ ಕೊಟ್ಟಿದ್ದರೆ ಹೇಳಲಿ ನಾನು ರಾಜಕೀಯ ಬಿಡುತ್ತೇನೆ

ನಮ್ಮ ಪಕ್ಷವನ್ನು ಕಾಂಗ್ರೆಸ್ ಕೈ ಹಿಡಿತಾರೆ. ಅಲ್ಪ ಸಂಖ್ಯಾತರಿಗೆ ಯಾವಾಗ ಟೋಪಿ ಹಾಕುತ್ತಾರೆ ಗೊತ್ತಿಲ್ಲ.  ಬಿಜೆಪಿಗಾಗಿ ಅವರು ಮುಸ್ಲಿಂನ ಹಿಡಿದುಕೊಂಡಿದಾರೆ. ದೇವೇಗೌಡರು ಮೀಸಲಾತಿ ಕೊಟ್ಟರು. ಅಲ್ಪ ಸಂಖ್ಯಾತರ ಪರವಾಗಿ ಕೆಲಸ ಮಾಡಿದ್ದು ದೇವೇಗೌಡರು. ಕಾಂಗ್ರೆಸ್​ನವರು ಕೇವಲ ಮುಸಲ್ಮಾನರ ಮತ ತಗೊಂಡರು. ಆದರೆ ಅವರಿಗೆ ಮೀಸಲಾತಿ ಕೊಟ್ಟಿದ್ದ ದೇವೇಗೌಡರು. ಕಾಂಗ್ರೆಸ್ ಮೀಸಲಾತಿ ಕೊಟ್ಟಿದ್ದರೆ ಹೇಳಲಿ ನಾನು ರಾಜಕೀಯ ಬಿಟ್ಟು ಹೋಗುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಅಸ್ಸಾಂನ ಆಂತರಿಕ ಸಂಘರ್ಷ ಗೊತ್ತಿದ್ದರೂ ರಾಹುಲ್ ಗಾಂಧಿ ಅಲ್ಲಿಗೆ ಹೋಗಿದ್ದೇಕೆ: ಹೆಚ್​ಡಿ ದೇವೇಗೌಡ ಪ್ರಶ್ನೆ

ಲೋಕಸಭಾ ಚುನಾವಣೆ ಆದ ಮೇಲೆ‌ ಯಾವ ಗ್ಯಾರಂಟಿ ಇರಲ್ಲ. ಕುಮಾರಸ್ವಾಮಿ ಸಿಎಂ‌ ಆಗಿದ್ದಾಗ ಕುಮಾರಸ್ವಾಮಿ ಸರಾಯಿ ನಿಷೇಧ ಮಾಡಿದರು. ಈಗ ಹೆಣ್ಮಕ್ಕಳು ಬೀದಿ ಬೀದಿಲಿ ಎಣ್ಣೆ ಅಂಗಡಿ ಆಗಿದೆ ಅಂತಿದಾರೆ. ಕಳೆದ ಆರು ತಿಂಗಳಲ್ಲಿ ಮೂರು ಬಾರಿ ಎಣ್ಣೆ ರೇಟ್ ಜಾಸ್ತಿಯಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಮೈತ್ರಿಯಿಂದ ಆನೆಬಲ: ಹಾಸನದಲ್ಲಿ ಹೆಚ್​ಡಿ ದೇವೇಗೌಡ ತಾಲೂಕುವಾರು ಸಭೆ

ಇದು ಬಡವರ ಸರ್ಕಾರ ಅಲ್ಲ. ಕುಮಾರಸ್ವಾಮಿ ಇದ್ದಾಗ ಕೊಡುತ್ತೆ ಎಂದು ಹೊರಟಿತ್ತು. ಈಗ ಜೋಡೆತ್ತು ಎಲ್ಲಿ ಅಂತಾರೆ. ದೇವೇಗೌಡರನ್ನು, ಕುಮಾರಸ್ವಾಮಿ ಅವರನ್ನು ಉಳಿಸಿದ್ದು ದೇವರು. 2024ಕ್ಕೆ ಮೋದಿಯವರು ಪ್ರಧಾನಿ ಆಗಬೇಕು, ದೇಶ ಉಳಿಸಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Manjunath KB
Manjunath KB
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!