AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan: ತರಕಾರಿ ಅಂಗಡಿಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿ; ಅಬಕಾರಿ ಅಧಿಕಾರಿಗಳ ವಿರುದ್ಧ ಶಾಸಕ ಶಿವಲಿಂಗೇಗೌಡ ಗರಂ

ಸಿಎಲ್​-7ನಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಹಾಸನದ ದಿಶಾ ಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳನ್ನು ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಶಿವಲಿಂಗೇಗೌಡ ಅವರು ತರಾಟೆಗೆ ತೆಗೆದುಕೊಂಡರು.

Hassan: ತರಕಾರಿ ಅಂಗಡಿಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿ; ಅಬಕಾರಿ ಅಧಿಕಾರಿಗಳ ವಿರುದ್ಧ ಶಾಸಕ ಶಿವಲಿಂಗೇಗೌಡ ಗರಂ
ದಿಶಾ ಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ಮತ್ತು ಸಂಸದ ಪ್ರಜ್ವಲ್ ರೇವಣ್ಣ
TV9 Web
| Edited By: |

Updated on:Feb 01, 2023 | 9:58 PM

Share

ಹಾಸನ: ಲಾಡ್ಜ್​ನಲ್ಲಿ ಅಕ್ರಮ ಮದ್ಯ ಮಾರಾಟದ ವಿಚಾರವಾಗಿ ಅಬಕಾರಿ ಅಧಿಕಾರಿಗಳನ್ನು (Excise officials) ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ತೀವ್ರ ತರಾಟೆಗೆ ತೆಗೆದುಕೊಂಡರು. ದಿಶಾ ಸಭೆಯಲ್ಲಿ (Disha Meeting) ಮದ್ಯ ಮಾರಾಟದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆದಿದ್ದು, ಸಿಎಲ್​-7ನಲ್ಲಿ ನಿಯಮ ಉಲ್ಲಂಘನೆ ಮಾಡಿದ ಹಿನ್ನಲೆ ಅಧಿಕಾರಿಗಳ ವಿರುದ್ಧ ಸಂಸದರು ಗರಂ ಆದರು. ಈ ವೇಳೆ ಸಂಸದ ಪ್ರಜ್ವಲ್ ಮಾತಿಗೆ ದನಿಗೂಡಿಸಿದ ಶಾಸಕ ಶಿವಲಿಂಗೇಗೌಡ (MLA Shivalingegowda), ಜನರನ್ನು ಯಾಮಾರಿಸುತ್ತಿದ್ದೀರಿ, ನಮ್ಮನ್ನು ಏನು ಕುರಿಗಳು ಅಂತಾ ತಿಳಿದುಕೊಂಡಿದ್ದಿರೇನ್ರೀ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.

ಲಾಡ್ಜ್​ನಲ್ಲಿ ಮದ್ಯ ಸೇವನೆ ಮಾಡುತ್ತಿರುವಾಗ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಆರೋಪದ ಬಗ್ಗೆ ಮಾತನಾಡಿದ ಶಾಸಕರು, ನಿಮಗೆ ನಾಚಿಕೆ ಆಗಲ್ವಾ? ಇಷ್ಟೆಲ್ಲಾ ಮಾಡುವುದಾದರೆ ತರಕಾರಿ ಅಂಗಡಿಯಲ್ಲೂ ಅವಕಾಶ ನೀಡಿ. ಎಷ್ಟು ಬಾರ್ ತೆಗೆದಿದ್ದೇವೆ ಎಂದು ಜಾಹೀರಾತು ನೀಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೊಸ ಬಾರ್​ ತೆರೆಯುವುದನ್ನು ತಡೆಯದಿದ್ದರೆ ರಾಜ್ಯ ಹಾಳಾಗಿಹೋಗುತ್ತದೆ. ಬಾಟಲಿಗೆ ಸಿರೆಂಜ್ ಹಾಕಿ ಎಳೀತಾರೆ, ಅದಕ್ಕೆ ಸ್ಪಿರಿಟ್ ತುಂಬಿಸುತ್ತಾರೆ. ಅದೂ ಒರಿಜಿನಲ್ ಎಣ್ಣೆ ಮಾರಲ್ಲ ಎಲ್ಲಾ ಡ್ಲೂಪ್ಲಿಕೇಟ್ ಎಣ್ಣೆ ಮಾರಾಟ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಆದಾಯ ಬರುತ್ತದೆ ಎಂದು ಜನರಿಗೆ ವಿಷ ಕುಡಿಸಬೇಡಿ. ಡೂಪ್ಲಿಕೇಟ್​ ಎಣ್ಣೆ ಕುಡಿಸುವ ಬದಲು ವಿಷ ಕುಡಿಸಿ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ಮಂಗಳೂರಿನಲ್ಲಿ ನಟಿ ಸಾನ್ಯ ಕಿರಿಕ್ ವಿಚಾರ, ಅಪಸ್ವರ ಎತ್ತಿದವರ ವಿರುದ್ಧ ದೇವರ ಮೊರೆ ಹೋದ ಕಂಬಳ‌‌ ಸಮಿತಿ

ಸಿಎಲ್ 7 ಬಾರ್ ಹೆಚ್ಚಳದಿಂದ ಜನರಿಗೆ ಸಮಸ್ಯೆಯಾಗುತ್ತಿರುವ ಆರೋಪ ಹಾಸನ ಜಿಲ್ಲೆಯಲ್ಲಿ ಕೇಳಿಬಂದಿದೆ. ಈ ಬಗ್ಗೆ ಅಸಮಾಧಾನ ಹೊರಹಾಕಿದ ಸಂಸದ ಮತ್ತು ಶಾಸಕರು, ಅಬಕಾರಿ ಇಲಾಖೆ ಅದಿಕಾರಿಗಳಿಗೆ ಸಖತ್ ಕ್ಲಾಸ್ ತೆಗೆದುಕೊಂಡರು. ಅಲ್ಲದೆ, ಜಿಲ್ಲೆಯಲ್ಲಿ ಎಷ್ಟು ಬಾರ್ ಓಪನ್ ಆಗಿದೆ, ಎಷ್ಟು ಮಾರಾಟ ಆಗಿದೆ ಎಂಬುದರ ಬಗ್ಗೆ ಮಾಹಿತಿ ಕೊಡಿ ಎಂದು ಅಧಿಕಾರಿಗಳನ್ನು ತಾಕೀತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 pm, Wed, 1 February 23

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು