AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan: ತರಕಾರಿ ಅಂಗಡಿಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿ; ಅಬಕಾರಿ ಅಧಿಕಾರಿಗಳ ವಿರುದ್ಧ ಶಾಸಕ ಶಿವಲಿಂಗೇಗೌಡ ಗರಂ

ಸಿಎಲ್​-7ನಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಹಾಸನದ ದಿಶಾ ಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳನ್ನು ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಶಿವಲಿಂಗೇಗೌಡ ಅವರು ತರಾಟೆಗೆ ತೆಗೆದುಕೊಂಡರು.

Hassan: ತರಕಾರಿ ಅಂಗಡಿಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿ; ಅಬಕಾರಿ ಅಧಿಕಾರಿಗಳ ವಿರುದ್ಧ ಶಾಸಕ ಶಿವಲಿಂಗೇಗೌಡ ಗರಂ
ದಿಶಾ ಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ಮತ್ತು ಸಂಸದ ಪ್ರಜ್ವಲ್ ರೇವಣ್ಣ
TV9 Web
| Edited By: Rakesh Nayak Manchi|

Updated on:Feb 01, 2023 | 9:58 PM

Share

ಹಾಸನ: ಲಾಡ್ಜ್​ನಲ್ಲಿ ಅಕ್ರಮ ಮದ್ಯ ಮಾರಾಟದ ವಿಚಾರವಾಗಿ ಅಬಕಾರಿ ಅಧಿಕಾರಿಗಳನ್ನು (Excise officials) ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ತೀವ್ರ ತರಾಟೆಗೆ ತೆಗೆದುಕೊಂಡರು. ದಿಶಾ ಸಭೆಯಲ್ಲಿ (Disha Meeting) ಮದ್ಯ ಮಾರಾಟದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆದಿದ್ದು, ಸಿಎಲ್​-7ನಲ್ಲಿ ನಿಯಮ ಉಲ್ಲಂಘನೆ ಮಾಡಿದ ಹಿನ್ನಲೆ ಅಧಿಕಾರಿಗಳ ವಿರುದ್ಧ ಸಂಸದರು ಗರಂ ಆದರು. ಈ ವೇಳೆ ಸಂಸದ ಪ್ರಜ್ವಲ್ ಮಾತಿಗೆ ದನಿಗೂಡಿಸಿದ ಶಾಸಕ ಶಿವಲಿಂಗೇಗೌಡ (MLA Shivalingegowda), ಜನರನ್ನು ಯಾಮಾರಿಸುತ್ತಿದ್ದೀರಿ, ನಮ್ಮನ್ನು ಏನು ಕುರಿಗಳು ಅಂತಾ ತಿಳಿದುಕೊಂಡಿದ್ದಿರೇನ್ರೀ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.

ಲಾಡ್ಜ್​ನಲ್ಲಿ ಮದ್ಯ ಸೇವನೆ ಮಾಡುತ್ತಿರುವಾಗ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಆರೋಪದ ಬಗ್ಗೆ ಮಾತನಾಡಿದ ಶಾಸಕರು, ನಿಮಗೆ ನಾಚಿಕೆ ಆಗಲ್ವಾ? ಇಷ್ಟೆಲ್ಲಾ ಮಾಡುವುದಾದರೆ ತರಕಾರಿ ಅಂಗಡಿಯಲ್ಲೂ ಅವಕಾಶ ನೀಡಿ. ಎಷ್ಟು ಬಾರ್ ತೆಗೆದಿದ್ದೇವೆ ಎಂದು ಜಾಹೀರಾತು ನೀಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೊಸ ಬಾರ್​ ತೆರೆಯುವುದನ್ನು ತಡೆಯದಿದ್ದರೆ ರಾಜ್ಯ ಹಾಳಾಗಿಹೋಗುತ್ತದೆ. ಬಾಟಲಿಗೆ ಸಿರೆಂಜ್ ಹಾಕಿ ಎಳೀತಾರೆ, ಅದಕ್ಕೆ ಸ್ಪಿರಿಟ್ ತುಂಬಿಸುತ್ತಾರೆ. ಅದೂ ಒರಿಜಿನಲ್ ಎಣ್ಣೆ ಮಾರಲ್ಲ ಎಲ್ಲಾ ಡ್ಲೂಪ್ಲಿಕೇಟ್ ಎಣ್ಣೆ ಮಾರಾಟ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಆದಾಯ ಬರುತ್ತದೆ ಎಂದು ಜನರಿಗೆ ವಿಷ ಕುಡಿಸಬೇಡಿ. ಡೂಪ್ಲಿಕೇಟ್​ ಎಣ್ಣೆ ಕುಡಿಸುವ ಬದಲು ವಿಷ ಕುಡಿಸಿ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ಮಂಗಳೂರಿನಲ್ಲಿ ನಟಿ ಸಾನ್ಯ ಕಿರಿಕ್ ವಿಚಾರ, ಅಪಸ್ವರ ಎತ್ತಿದವರ ವಿರುದ್ಧ ದೇವರ ಮೊರೆ ಹೋದ ಕಂಬಳ‌‌ ಸಮಿತಿ

ಸಿಎಲ್ 7 ಬಾರ್ ಹೆಚ್ಚಳದಿಂದ ಜನರಿಗೆ ಸಮಸ್ಯೆಯಾಗುತ್ತಿರುವ ಆರೋಪ ಹಾಸನ ಜಿಲ್ಲೆಯಲ್ಲಿ ಕೇಳಿಬಂದಿದೆ. ಈ ಬಗ್ಗೆ ಅಸಮಾಧಾನ ಹೊರಹಾಕಿದ ಸಂಸದ ಮತ್ತು ಶಾಸಕರು, ಅಬಕಾರಿ ಇಲಾಖೆ ಅದಿಕಾರಿಗಳಿಗೆ ಸಖತ್ ಕ್ಲಾಸ್ ತೆಗೆದುಕೊಂಡರು. ಅಲ್ಲದೆ, ಜಿಲ್ಲೆಯಲ್ಲಿ ಎಷ್ಟು ಬಾರ್ ಓಪನ್ ಆಗಿದೆ, ಎಷ್ಟು ಮಾರಾಟ ಆಗಿದೆ ಎಂಬುದರ ಬಗ್ಗೆ ಮಾಹಿತಿ ಕೊಡಿ ಎಂದು ಅಧಿಕಾರಿಗಳನ್ನು ತಾಕೀತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 pm, Wed, 1 February 23

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ