AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan: ತರಕಾರಿ ಅಂಗಡಿಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿ; ಅಬಕಾರಿ ಅಧಿಕಾರಿಗಳ ವಿರುದ್ಧ ಶಾಸಕ ಶಿವಲಿಂಗೇಗೌಡ ಗರಂ

ಸಿಎಲ್​-7ನಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಹಾಸನದ ದಿಶಾ ಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳನ್ನು ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಶಿವಲಿಂಗೇಗೌಡ ಅವರು ತರಾಟೆಗೆ ತೆಗೆದುಕೊಂಡರು.

Hassan: ತರಕಾರಿ ಅಂಗಡಿಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿ; ಅಬಕಾರಿ ಅಧಿಕಾರಿಗಳ ವಿರುದ್ಧ ಶಾಸಕ ಶಿವಲಿಂಗೇಗೌಡ ಗರಂ
ದಿಶಾ ಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ಮತ್ತು ಸಂಸದ ಪ್ರಜ್ವಲ್ ರೇವಣ್ಣ
TV9 Web
| Edited By: Rakesh Nayak Manchi|

Updated on:Feb 01, 2023 | 9:58 PM

Share

ಹಾಸನ: ಲಾಡ್ಜ್​ನಲ್ಲಿ ಅಕ್ರಮ ಮದ್ಯ ಮಾರಾಟದ ವಿಚಾರವಾಗಿ ಅಬಕಾರಿ ಅಧಿಕಾರಿಗಳನ್ನು (Excise officials) ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ತೀವ್ರ ತರಾಟೆಗೆ ತೆಗೆದುಕೊಂಡರು. ದಿಶಾ ಸಭೆಯಲ್ಲಿ (Disha Meeting) ಮದ್ಯ ಮಾರಾಟದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆದಿದ್ದು, ಸಿಎಲ್​-7ನಲ್ಲಿ ನಿಯಮ ಉಲ್ಲಂಘನೆ ಮಾಡಿದ ಹಿನ್ನಲೆ ಅಧಿಕಾರಿಗಳ ವಿರುದ್ಧ ಸಂಸದರು ಗರಂ ಆದರು. ಈ ವೇಳೆ ಸಂಸದ ಪ್ರಜ್ವಲ್ ಮಾತಿಗೆ ದನಿಗೂಡಿಸಿದ ಶಾಸಕ ಶಿವಲಿಂಗೇಗೌಡ (MLA Shivalingegowda), ಜನರನ್ನು ಯಾಮಾರಿಸುತ್ತಿದ್ದೀರಿ, ನಮ್ಮನ್ನು ಏನು ಕುರಿಗಳು ಅಂತಾ ತಿಳಿದುಕೊಂಡಿದ್ದಿರೇನ್ರೀ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.

ಲಾಡ್ಜ್​ನಲ್ಲಿ ಮದ್ಯ ಸೇವನೆ ಮಾಡುತ್ತಿರುವಾಗ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಆರೋಪದ ಬಗ್ಗೆ ಮಾತನಾಡಿದ ಶಾಸಕರು, ನಿಮಗೆ ನಾಚಿಕೆ ಆಗಲ್ವಾ? ಇಷ್ಟೆಲ್ಲಾ ಮಾಡುವುದಾದರೆ ತರಕಾರಿ ಅಂಗಡಿಯಲ್ಲೂ ಅವಕಾಶ ನೀಡಿ. ಎಷ್ಟು ಬಾರ್ ತೆಗೆದಿದ್ದೇವೆ ಎಂದು ಜಾಹೀರಾತು ನೀಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೊಸ ಬಾರ್​ ತೆರೆಯುವುದನ್ನು ತಡೆಯದಿದ್ದರೆ ರಾಜ್ಯ ಹಾಳಾಗಿಹೋಗುತ್ತದೆ. ಬಾಟಲಿಗೆ ಸಿರೆಂಜ್ ಹಾಕಿ ಎಳೀತಾರೆ, ಅದಕ್ಕೆ ಸ್ಪಿರಿಟ್ ತುಂಬಿಸುತ್ತಾರೆ. ಅದೂ ಒರಿಜಿನಲ್ ಎಣ್ಣೆ ಮಾರಲ್ಲ ಎಲ್ಲಾ ಡ್ಲೂಪ್ಲಿಕೇಟ್ ಎಣ್ಣೆ ಮಾರಾಟ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಆದಾಯ ಬರುತ್ತದೆ ಎಂದು ಜನರಿಗೆ ವಿಷ ಕುಡಿಸಬೇಡಿ. ಡೂಪ್ಲಿಕೇಟ್​ ಎಣ್ಣೆ ಕುಡಿಸುವ ಬದಲು ವಿಷ ಕುಡಿಸಿ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ಮಂಗಳೂರಿನಲ್ಲಿ ನಟಿ ಸಾನ್ಯ ಕಿರಿಕ್ ವಿಚಾರ, ಅಪಸ್ವರ ಎತ್ತಿದವರ ವಿರುದ್ಧ ದೇವರ ಮೊರೆ ಹೋದ ಕಂಬಳ‌‌ ಸಮಿತಿ

ಸಿಎಲ್ 7 ಬಾರ್ ಹೆಚ್ಚಳದಿಂದ ಜನರಿಗೆ ಸಮಸ್ಯೆಯಾಗುತ್ತಿರುವ ಆರೋಪ ಹಾಸನ ಜಿಲ್ಲೆಯಲ್ಲಿ ಕೇಳಿಬಂದಿದೆ. ಈ ಬಗ್ಗೆ ಅಸಮಾಧಾನ ಹೊರಹಾಕಿದ ಸಂಸದ ಮತ್ತು ಶಾಸಕರು, ಅಬಕಾರಿ ಇಲಾಖೆ ಅದಿಕಾರಿಗಳಿಗೆ ಸಖತ್ ಕ್ಲಾಸ್ ತೆಗೆದುಕೊಂಡರು. ಅಲ್ಲದೆ, ಜಿಲ್ಲೆಯಲ್ಲಿ ಎಷ್ಟು ಬಾರ್ ಓಪನ್ ಆಗಿದೆ, ಎಷ್ಟು ಮಾರಾಟ ಆಗಿದೆ ಎಂಬುದರ ಬಗ್ಗೆ ಮಾಹಿತಿ ಕೊಡಿ ಎಂದು ಅಧಿಕಾರಿಗಳನ್ನು ತಾಕೀತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 pm, Wed, 1 February 23

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ