AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರವಣೂರಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತ ತೆರವಿಗೆ ಮುಂದಾದ ಜಿಲ್ಲಾಡಳಿತ; ಸ್ಥಳದಲ್ಲಿ ಜಮಾಯಿಸುತ್ತಿರುವ ಜನರು

ಅನುಮತಿ ಪಡೆಯದೆ ಶ್ರವನೂರಿನಲ್ಲಿ ರಾಯಣ್ಣ ಸರ್ಕಲ್ ನಿರ್ಮಿಸಿದ ಆರೋಪ ಸಂಬಂಧ ಪೊಲೀಸ್ ಗೌರವ ವಂದನೆ ಸಲ್ಲಿಸಿ ಭಾವಚಿತ್ರ ತೆರವು ಮಾಡಲು ಹಾಸನ ಜಿಲ್ಲಾಡಳಿತ ಮುಂದಾಗಿದೆ.

ಶ್ರವಣೂರಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತ ತೆರವಿಗೆ ಮುಂದಾದ ಜಿಲ್ಲಾಡಳಿತ; ಸ್ಥಳದಲ್ಲಿ ಜಮಾಯಿಸುತ್ತಿರುವ ಜನರು
ಶ್ರವಣೂರಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತ ನಿರ್ಮಾಣ ತೆರವಿಗೆ ಮುಂದಾದ ಜಿಲ್ಲಾಡಳಿತ
TV9 Web
| Updated By: Rakesh Nayak Manchi|

Updated on:Dec 18, 2022 | 12:36 PM

Share

ಹಾಸನ: ಅನುಮತಿ ಪಡೆಯದೆ ಶ್ರವನೂರಿನಲ್ಲಿ ನಿರ್ಮಾಣ ಮಾಡಿರುವ ಮಹಾನ್ ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣ ವೃತ್ತ (Sangolli Rayanna Circle)ವನ್ನು ತೆರವು ಮಾಡಲು ಜಿಲ್ಲಾಡಳಿತ ಮುಂದಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯಲ್ಲಿ ಜನರು ಗ್ರಾಮದಲ್ಲಿ ಜಮಾಯಿಸುತ್ತಿದ್ದಾರೆ. ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿರುವ ಶ್ರವಣೂರು ಗ್ರಾಮದಲ್ಲಿ ಅನುಮತಿ ಪಡೆಯದೆ ರಾಯಣ್ಣ ಸರ್ಕಲ್ ನಿರ್ಮಿಸಲಾಗಿದ್ದು, ಕಾಗಿನೆಲೆ‌ ಮಹಾ ಸಂಸ್ಥಾನ ಕನಕ ಗುರುಪೀಠದ ಕೆ.ಆರ್​.ನಗರ ಶಾಖಾ ಮಠದ ಶಿವಾನಂದ ಸ್ವಾಮೀಜಿ ನೇತೃತ್ವದಲ್ಲಿ ಪೂಜೆ ಹಾಗೂ ಪೊಲೀಸ್ ಗೌರವ ವಂದನೆ ಸಲ್ಲಿಸಿದ ಬಳಿಕ ಪೊಲೀಸ್ ಭದ್ರತೆಯೊಂದಿಗೆ ತೆರವು ಕಾರ್ಯಾಚರಣೆ ಆರಂಭಗೊಳ್ಳಲಿದೆ.

ಹಾಸನ ಉಪ ವಿಭಾದ ಎಸಿ ಬಿ.ಎ.ಜಗದೀಶ್, ಎಸ್​ಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದ್ದು, ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಶ್ರವಣೂರಿಗೆ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದ್ದು, ಇಬ್ಬರು ಡಿವೈಎಸ್​ಪಿ, 10 ಸರ್ಕಲ್​ ಇನ್ಸ್​ಪೆಕ್ಟರ್​​, 20 ಪಿಎಸ್​ಐ, 400ಕ್ಕೂ ಹೆಚ್ಚು ಪೊಲೀಸರು, 4 ಡಿಎಆರ್​ ತುಕಡಿ ನಿಯೋಜನೆ ಮಾಡಲಾಗಿದೆ. ಅಲ್ಲದೆ ಸುತ್ತಮುತ್ತಲಿನ ಗ್ರಾಮಗಳಲ್ಲೂ ಬ್ಯಾರಿಕೇಡ್ ಹಾಕಲಾಗಿದೆ.

ಇದನ್ನೂ ಓದಿ: ಬೆಳಗಾವಿಗೆ ಬರುತ್ತಿದ್ದೇನೆ, ಸೂಕ್ತ ಭದ್ರತೆ ಕೊಡಿ; ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮಹಾ ಸಂಸದ ಧೈರ್ಯಶೀಲ ಮಾನೆ ಪತ್ರ

ಕಳೆದ 13 ದಿನದ ಹಿಂದೆ ಅನುಮತಿ ಪಡೆಯದೆ ಗ್ರಾಮಸ್ಥರು ಸಂಗೊಳ್ಳಿ ರಾಯಣ್ಣ ವೃತ್ತ ನಿರ್ಮಾಣ ಮಾಡಿ ರಾಯಣ್ಣನ ಭಾವಚಿತ್ರ ಇರಿಸಿದ್ದರು. ಹೀಗಾಗಿ ವೃತ್ತ ತೆರವು ಮಾಡಲು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಅವರು ಶಾಂತಿ ಸಭೆ ನಡೆಸಿದ್ದರು. ಅದಾಗ್ಯೂ ಗ್ರಾಮಸ್ಥರಿಂದ ವೃತ್ತ ತೆರವಿಗೆ ವಿರೋಧ ವ್ಯಕ್ತವಾದ ಹಿನ್ನೆಲೆ ಸ್ಥಳದಲ್ಲಿ ಪೊಲೀಸ್ ಭದ್ರತೆ ನಿಯೋಜಿಸಿ ಪ್ರತಿಮೆ ತೆರವುಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ.​

ಸಂಗೊಳ್ಳಿ ರಾಯಣ್ಣ ವೃತ್ತ ನಿರ್ಮಾಣವಾಗುತ್ತಲೇ ಇದೇ ಸ್ಥಳದಲ್ಲಿ ಬೇರೆ ನಾಯಕರ ಪ್ರತಿಮೆ ಸ್ಥಾಪನೆಗೆ ಕೋರಿ ಮನವಿ ಸಲ್ಲಿಕೆ ಮಾಡಲಾಗಿದೆ. ಅಲ್ಲದೆ ಅನುಮತಿ ಪಡೆಯದೇ ಸಂಗೊಳ್ಳಿ ರಾಯಣ್ಣ ವೃತ್ತ ಮಾಡಲಾಗಿದೆ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ವೃತ್ತ ನಿರ್ಮಾಣದ ಬಳಿಕ ವಿವಾದ ಸೃಷ್ಟಿ ಹಿನ್ನಲೆ ತೆರವಿಗೆ ಜಿಲ್ಲಾಡಳಿತ ತೀರ್ಮಾನ ಮಾಡಿದೆ.

ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣ

ಸಂಗೊಳ್ಳಿ ರಾಯಣ್ಣ ವೃತ್ತ ತೆರವು ಹಿನ್ನಲೆ ಶ್ರವಣೂರು ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸುತ್ತಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಒಂದೆಡೆ ಪೊಲೀಸರು ರಾಯಣ್ಣನ ಭಾವಚಿತ್ರ ತೆರವು ಮಾಡಲು ಮುಂದಾಗಿದ್ದು, ಇನ್ನೊಂದೆಡೆ ನಿರ್ಮಾಣ ಮಾಡಿರುವ ವೃತ್ತದ ಮೇಲೆ ಪ್ರತಿಷ್ಠಾಪನೆ ಮಾಡಲು ಸಂಗೊಳ್ಳಿರಾಯಣ್ಣ ಅಭಿಮಾನಿಗಳು ಹಾಗೂ ಗ್ರಾಮಸ್ಥರು 8 ಅಡಿ ಎತ್ತರದ ರಾಯಣ್ಣನ ಪ್ರತಿಮೆ ತಂದಿದ್ದಾರೆ. ಚೌಕಿ ತೆರವುಗೊಳಿಸಿದ ಅಣತಿ ದೂರದಲ್ಲಿರುವ ಮನೆಯ ಮುಂದೆ ಪ್ರತಿಮೆ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಖಾಸಗಿ ಜಾಗದಲ್ಲಿ ಪ್ರತಿಮೆ ನಿಲ್ಲಿಸಿದ ಹಿನ್ನೆಲೆಯಲ್ಲಿ ಪೊಲೀಸರು ಯಾವುದೇ ಅಡ್ಡಿಮಾಡಿಲ್ಲ.

ಇದನ್ನೂ ಓದಿ: ಈತ ಸನ್ನಿ ಲಿಯೋನಿ ಮಗನಾ ಅಥವಾ ಬೇರೆಯವರ ಮಗನಾ? ಜಾಗೋ ಹಿಂದೂ ಸಮಾವೇಶದಲ್ಲಿ ನಾಲಿಗೆ ಹರಿಬಿಟ್ಟ ಹಿಂದೂ ಮುಖಂಡ ಧನಂಜಯ್

ಸಂಗೊಳ್ಳಿ ರಾಯಣ್ಣನಿಗೆ ಅವಮಾನ

ಸಂಗೊಳ್ಳಿ ರಾಯಣ್ಣ ವೃತ್ತ ತೆರವಿಗೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಬ್ರಿಟಿಷರ ವಿರುದ್ಧ ಹೋರಾಡಿದ ಸಂಗೊಳ್ಳಿ ರಾಯಣ್ಣನಿಗೆ ಅವಮಾನ ಮಾಡಿದ್ದೀರಾ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸ್ಥಳದಲ್ಲಿ ಜನಾಕ್ರೋಶಗೊಂಡ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ರಾಯಣ್ಣ ಹೆಸರಿಡಲು ಎಲ್ಲಾ ಸಮಾಜದವರ ಒಪ್ಪಿಗೆ

ಯಾರೋ ಹುಡುಗರು ರಾಯಣ್ಣ ವೃತ್ತ ಎಂದು ನಾಮಕರಣ ಮಾಡಿದ್ದಾರೆ. ಇದಕ್ಕೆ ಬೇರೆ ಸಮುದಾಯದ ಜನರು ವಿರೋಧ ವ್ಯಕ್ತಪಡಿಸಿದ್ದರು. ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರ ಜತೆಗೂ ಚರ್ಚೆ ಮಾಡಿದ್ದೆವು. ಸುಪ್ರೀಂ ಕೋರ್ಟ್ ಆದೇಶದಂತೆ ಅನುಮತಿ ಇಲ್ಲದೇ ಪ್ರತಿಮೆ ನಿಲ್ಲಿಸುವಂತಿಲ್ಲ. ವೃತ್ತಕ್ಕೆ ನಾಮಕರಣ ಮಾಡಲು ಗ್ರಾಮ ಪಂಚಾಯಿತಿ ಒಪ್ಪಿಗೆ ಬೇಕು. ಸಮುದಾಯದ ಬೆಂಬಲ ಪಡೆದು ರಾಯಣ್ಣನ ಫೋಟೋ ತೆರವು ಮಾಡಲಾಗುವುದು. ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ಮುಂದಿನ ಕ್ರಮ ಕೈಗೊಳ್ಳುತ್ತದೆ. ಎಲ್ಲಾ ಸಮಾಜದವರೂ ವೃತ್ತಕ್ಕೆ ರಾಯಣ್ಣನ ಹೆಸರಿಡಲು ಒಪ್ಪಿದ್ದಾರೆ ಎಂದು ಶ್ರವಣೂರು ಗ್ರಾಮದಲ್ಲಿ ಎಸ್​​ಪಿ ಹರಿರಾಮ್​ ಶಂಕರ್​ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 am, Sun, 18 December 22

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್