AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಪ್ರಕರಣ: ಹಾಸನ ಎಸ್ಪಿ ಶ್ರೀನಿವಾಸ ಗೌಡ ಪ್ರತಿಕ್ರಿಯೆ

ಕಾನ್ಸ್​​​ಟೇಬಲ್ ಗೆ ಮಧ್ಯಾಹ್ನ ಊಟ ಮಾಡದೆ ಇದ್ದ ಕಾರಣ ಬಿಪಿ ವ್ಯತ್ಯಾಸ ಆಗಿದೆ ಅಷ್ಟೇ ಎಂದು ಕಾನ್ಸ್​​​ಟೇಬಲ್ ಮೇಲೆ ಹಾಸನ ಉಪವಿಭಾಗದ ಡಿವೈಎಸ್ಪಿ ಉದಯಭಾಸ್ಕರ್ ಹಲ್ಲೆ ಮಾಡಿರುವುದನ್ನು ಎಸ್ಪಿ ಶ್ರೀನಿವಾಸ ಗೌಡ ಅಲ್ಲಗಳೆದಿದ್ದಾರೆ. ಇದೊಂದು ಆಕಸ್ಮಿಕ ಘಟನೆ ಎಂದು ಸ್ಪಷ್ಟನೆ ನೀಡಿರುವ ಎಸ್ಪಿ, ತಮ್ಮ ಸಮ್ಮುಖದಲ್ಲೇ ನಡೆದ ಘಟನೆ ಬಗ್ಗೆ ವಿವರಿಸಿದರು.

ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಪ್ರಕರಣ: ಹಾಸನ ಎಸ್ಪಿ ಶ್ರೀನಿವಾಸ ಗೌಡ ಪ್ರತಿಕ್ರಿಯೆ
ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಪ್ರಕರಣ: ಹಾಸನ ಎಸ್ಪಿ ಶ್ರೀನಿವಾಸ ಗೌಡ ಪ್ರತಿಕ್ರಿಯೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 25, 2022 | 4:03 PM

ಹಾಸನ: ಹಾಸನ ನಗರ ಠಾಣೆ ಪೊಲೀಸ್ ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಆರೋಪ ಪ್ರಕರಣದ ಬಗ್ಗೆ ಹಾಸನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್​ಪಿ) ಶ್ರೀನಿವಾಸ ಗೌಡ ಪ್ರತಿಕ್ರಿಯಿಸಿದ್ದಾರೆ. ನಿನ್ನೆ ಶುಕ್ರವಾರ ಠಾಣೆ ಪರಿವೀಕ್ಷಣೆ ವೇಳೆ ಶಸ್ತ್ರಾಸ್ತ್ರ ಸಂಬಂಧ ವಿವರಣೆ ಕೇಳಿದರು. ಆ ವೇಳೆ ಕಾನ್ಸ್​​​ಟೇಬಲ್ ವೇಣುಗೋಪಾಲ ಸರಿಯಾಗಿ ವಿವರಣೆ ನೀಡಲಿಲ್ಲ. ಹಾಗಾಗಿ ಡಿವೈಎಸ್ಪಿ ಅವರನ್ನು ಗದರಿದರು. ನಾನೇ ಹೇಳಿಕೊಡ್ತಿನಿ ಎಂದು ಅವರಿಂದ ವೆಪನ್ ಪಡೆಯೋ ವೇಳೆ ಅವರ ಮಾಸ್ಕ್ ಗೆ ಕೈ ತಾಗಿತ್ತು. ಡಿವೈಎಸ್ಪಿ ಉದ್ದೇಶಪೂರ್ವಕವಾಗಿ ಅವರ ಮೇಲೆ ಕೈ ಮಾಡಿಲ್ಲ ಎಂದು ಎಸ್ಪಿ ಶ್ರೀನಿವಾಸ ಗೌಡ ಹೇಳಿದ್ದಾರೆ.

ಕಾನ್ಸ್​​​ಟೇಬಲ್ ಗೆ ಮಧ್ಯಾಹ್ನ ಊಟ ಮಾಡದೆ ಇದ್ದ ಕಾರಣ ಬಿಪಿ ವ್ಯತ್ಯಾಸ ಆಗಿದೆ ಅಷ್ಟೇ ಎಂದು ಕಾನ್ಸ್​​​ಟೇಬಲ್ ಮೇಲೆ ಹಾಸನ ಉಪವಿಭಾಗದ ಡಿವೈಎಸ್ಪಿ ಉದಯಭಾಸ್ಕರ್ ಹಲ್ಲೆ ಮಾಡಿರುವುದನ್ನು ಎಸ್ಪಿ ಶ್ರೀನಿವಾಸ ಗೌಡ ಅಲ್ಲಗಳೆದಿದ್ದಾರೆ. ಇದೊಂದು ಆಕಸ್ಮಿಕ ಘಟನೆ ಎಂದು ಸ್ಪಷ್ಟನೆ ನೀಡಿರುವ ಎಸ್ಪಿ, ತಮ್ಮ ಸಮ್ಮುಖದಲ್ಲೇ ನಡೆದ ಘಟನೆ ಬಗ್ಗೆ ವಿವರಿಸಿದರು. ಜೂನ್ 23 ರ ಸಂಜೆ ಹಾಸನ ನಗರ ಠಾಣೆ ಪರಿವೀಕ್ಷಣೆ ವೇಳೆ ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಆರೋಪ ಕೇಳಿ ಬಂದಿತ್ತು.

ನಮ್ಮದು ಶಿಸ್ತಿನ ಇಲಾಖೆ, ಕೆಲಸದ ವೇಳೆ ನಮ್ಮ ಕೆಳ ಹಂತದ ಅಧಿಕಾರಿಗಳನ್ನ ಶಿಸ್ತಿನಿಂದ ನಡೆಸಿಕೊಳ್ಳಬೇಕಾಗುತ್ತೆ. ಘಟನೆಯ ಹಿಂದೆ ವೈಯಕ್ತಿಕ ದ್ವೇಷವಾಗಲಿ, ಯಾವುದೇ ವೈಯಕ್ತಿಕ ಹಿನ್ನೆಲೆಯಲ್ಲಿ ನಡೆದಿಲ್ಲ. ಹೇಳಿಕೊಡುವ ಹುಮ್ಮಸ್ಸಿನಲ್ಲಿ ನಡೆದಿರೊ ಘಟನೆ ಇದಾಗಿದೆ. ಆದರೂ ಈ ಬಗ್ಗೆ ಡಿವೈಎಸ್ಪಿ ಅವರಿಗೆ ವಾರ್ನ್ ಮಾಡಿ, ತಾಳ್ಮೆಯಿಂದ ವರ್ತಿಸುವಂತೆ ಹೇಳಿದ್ದೇನೆ. ಇಬ್ಬರನ್ನೂ ಕೂಡ ಕರೆಸಿ ಮಾತನಾಡಿ, ಪರಿಸ್ಥಿತಿ ಅರ್ಥ ಮಾಡಿಸಿದ್ದೇನೆ ಎಂದು ಎಸ್ಪಿ ಶ್ರೀನಿವಾಸ ವಿವರಣೆ ನೀಡಿದ್ದಾರೆ.

Also Read:

ಹಾಸನ ಎಸ್​ಪಿ ಸಮ್ಮುಖದಲ್ಲೇ ಕಾನ್ಸ್​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ, ಆಸ್ಪತ್ರೆಗೆ ದಾಖಲು Also Read: ಭ್ರೂಣ ಪತ್ತೆ ಪ್ರಕರಣ: ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದ ಆರೋಗ್ಯ ಸಚಿವ ಸುಧಾಕರ್, ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಿಢೀರ್ ದಾಳಿ

Published On - 4:00 pm, Sat, 25 June 22

ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ