ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಪ್ರಕರಣ: ಹಾಸನ ಎಸ್ಪಿ ಶ್ರೀನಿವಾಸ ಗೌಡ ಪ್ರತಿಕ್ರಿಯೆ

ಕಾನ್ಸ್​​​ಟೇಬಲ್ ಗೆ ಮಧ್ಯಾಹ್ನ ಊಟ ಮಾಡದೆ ಇದ್ದ ಕಾರಣ ಬಿಪಿ ವ್ಯತ್ಯಾಸ ಆಗಿದೆ ಅಷ್ಟೇ ಎಂದು ಕಾನ್ಸ್​​​ಟೇಬಲ್ ಮೇಲೆ ಹಾಸನ ಉಪವಿಭಾಗದ ಡಿವೈಎಸ್ಪಿ ಉದಯಭಾಸ್ಕರ್ ಹಲ್ಲೆ ಮಾಡಿರುವುದನ್ನು ಎಸ್ಪಿ ಶ್ರೀನಿವಾಸ ಗೌಡ ಅಲ್ಲಗಳೆದಿದ್ದಾರೆ. ಇದೊಂದು ಆಕಸ್ಮಿಕ ಘಟನೆ ಎಂದು ಸ್ಪಷ್ಟನೆ ನೀಡಿರುವ ಎಸ್ಪಿ, ತಮ್ಮ ಸಮ್ಮುಖದಲ್ಲೇ ನಡೆದ ಘಟನೆ ಬಗ್ಗೆ ವಿವರಿಸಿದರು.

ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಪ್ರಕರಣ: ಹಾಸನ ಎಸ್ಪಿ ಶ್ರೀನಿವಾಸ ಗೌಡ ಪ್ರತಿಕ್ರಿಯೆ
ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಪ್ರಕರಣ: ಹಾಸನ ಎಸ್ಪಿ ಶ್ರೀನಿವಾಸ ಗೌಡ ಪ್ರತಿಕ್ರಿಯೆ
Follow us
| Updated By: ಸಾಧು ಶ್ರೀನಾಥ್​

Updated on:Jun 25, 2022 | 4:03 PM

ಹಾಸನ: ಹಾಸನ ನಗರ ಠಾಣೆ ಪೊಲೀಸ್ ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಆರೋಪ ಪ್ರಕರಣದ ಬಗ್ಗೆ ಹಾಸನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್​ಪಿ) ಶ್ರೀನಿವಾಸ ಗೌಡ ಪ್ರತಿಕ್ರಿಯಿಸಿದ್ದಾರೆ. ನಿನ್ನೆ ಶುಕ್ರವಾರ ಠಾಣೆ ಪರಿವೀಕ್ಷಣೆ ವೇಳೆ ಶಸ್ತ್ರಾಸ್ತ್ರ ಸಂಬಂಧ ವಿವರಣೆ ಕೇಳಿದರು. ಆ ವೇಳೆ ಕಾನ್ಸ್​​​ಟೇಬಲ್ ವೇಣುಗೋಪಾಲ ಸರಿಯಾಗಿ ವಿವರಣೆ ನೀಡಲಿಲ್ಲ. ಹಾಗಾಗಿ ಡಿವೈಎಸ್ಪಿ ಅವರನ್ನು ಗದರಿದರು. ನಾನೇ ಹೇಳಿಕೊಡ್ತಿನಿ ಎಂದು ಅವರಿಂದ ವೆಪನ್ ಪಡೆಯೋ ವೇಳೆ ಅವರ ಮಾಸ್ಕ್ ಗೆ ಕೈ ತಾಗಿತ್ತು. ಡಿವೈಎಸ್ಪಿ ಉದ್ದೇಶಪೂರ್ವಕವಾಗಿ ಅವರ ಮೇಲೆ ಕೈ ಮಾಡಿಲ್ಲ ಎಂದು ಎಸ್ಪಿ ಶ್ರೀನಿವಾಸ ಗೌಡ ಹೇಳಿದ್ದಾರೆ.

ಕಾನ್ಸ್​​​ಟೇಬಲ್ ಗೆ ಮಧ್ಯಾಹ್ನ ಊಟ ಮಾಡದೆ ಇದ್ದ ಕಾರಣ ಬಿಪಿ ವ್ಯತ್ಯಾಸ ಆಗಿದೆ ಅಷ್ಟೇ ಎಂದು ಕಾನ್ಸ್​​​ಟೇಬಲ್ ಮೇಲೆ ಹಾಸನ ಉಪವಿಭಾಗದ ಡಿವೈಎಸ್ಪಿ ಉದಯಭಾಸ್ಕರ್ ಹಲ್ಲೆ ಮಾಡಿರುವುದನ್ನು ಎಸ್ಪಿ ಶ್ರೀನಿವಾಸ ಗೌಡ ಅಲ್ಲಗಳೆದಿದ್ದಾರೆ. ಇದೊಂದು ಆಕಸ್ಮಿಕ ಘಟನೆ ಎಂದು ಸ್ಪಷ್ಟನೆ ನೀಡಿರುವ ಎಸ್ಪಿ, ತಮ್ಮ ಸಮ್ಮುಖದಲ್ಲೇ ನಡೆದ ಘಟನೆ ಬಗ್ಗೆ ವಿವರಿಸಿದರು. ಜೂನ್ 23 ರ ಸಂಜೆ ಹಾಸನ ನಗರ ಠಾಣೆ ಪರಿವೀಕ್ಷಣೆ ವೇಳೆ ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಆರೋಪ ಕೇಳಿ ಬಂದಿತ್ತು.

ನಮ್ಮದು ಶಿಸ್ತಿನ ಇಲಾಖೆ, ಕೆಲಸದ ವೇಳೆ ನಮ್ಮ ಕೆಳ ಹಂತದ ಅಧಿಕಾರಿಗಳನ್ನ ಶಿಸ್ತಿನಿಂದ ನಡೆಸಿಕೊಳ್ಳಬೇಕಾಗುತ್ತೆ. ಘಟನೆಯ ಹಿಂದೆ ವೈಯಕ್ತಿಕ ದ್ವೇಷವಾಗಲಿ, ಯಾವುದೇ ವೈಯಕ್ತಿಕ ಹಿನ್ನೆಲೆಯಲ್ಲಿ ನಡೆದಿಲ್ಲ. ಹೇಳಿಕೊಡುವ ಹುಮ್ಮಸ್ಸಿನಲ್ಲಿ ನಡೆದಿರೊ ಘಟನೆ ಇದಾಗಿದೆ. ಆದರೂ ಈ ಬಗ್ಗೆ ಡಿವೈಎಸ್ಪಿ ಅವರಿಗೆ ವಾರ್ನ್ ಮಾಡಿ, ತಾಳ್ಮೆಯಿಂದ ವರ್ತಿಸುವಂತೆ ಹೇಳಿದ್ದೇನೆ. ಇಬ್ಬರನ್ನೂ ಕೂಡ ಕರೆಸಿ ಮಾತನಾಡಿ, ಪರಿಸ್ಥಿತಿ ಅರ್ಥ ಮಾಡಿಸಿದ್ದೇನೆ ಎಂದು ಎಸ್ಪಿ ಶ್ರೀನಿವಾಸ ವಿವರಣೆ ನೀಡಿದ್ದಾರೆ.

Also Read:

ಹಾಸನ ಎಸ್​ಪಿ ಸಮ್ಮುಖದಲ್ಲೇ ಕಾನ್ಸ್​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ, ಆಸ್ಪತ್ರೆಗೆ ದಾಖಲು Also Read: ಭ್ರೂಣ ಪತ್ತೆ ಪ್ರಕರಣ: ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದ ಆರೋಗ್ಯ ಸಚಿವ ಸುಧಾಕರ್, ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಿಢೀರ್ ದಾಳಿ

Published On - 4:00 pm, Sat, 25 June 22

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ