AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಪ್ರಕರಣ: ಹಾಸನ ಎಸ್ಪಿ ಶ್ರೀನಿವಾಸ ಗೌಡ ಪ್ರತಿಕ್ರಿಯೆ

ಕಾನ್ಸ್​​​ಟೇಬಲ್ ಗೆ ಮಧ್ಯಾಹ್ನ ಊಟ ಮಾಡದೆ ಇದ್ದ ಕಾರಣ ಬಿಪಿ ವ್ಯತ್ಯಾಸ ಆಗಿದೆ ಅಷ್ಟೇ ಎಂದು ಕಾನ್ಸ್​​​ಟೇಬಲ್ ಮೇಲೆ ಹಾಸನ ಉಪವಿಭಾಗದ ಡಿವೈಎಸ್ಪಿ ಉದಯಭಾಸ್ಕರ್ ಹಲ್ಲೆ ಮಾಡಿರುವುದನ್ನು ಎಸ್ಪಿ ಶ್ರೀನಿವಾಸ ಗೌಡ ಅಲ್ಲಗಳೆದಿದ್ದಾರೆ. ಇದೊಂದು ಆಕಸ್ಮಿಕ ಘಟನೆ ಎಂದು ಸ್ಪಷ್ಟನೆ ನೀಡಿರುವ ಎಸ್ಪಿ, ತಮ್ಮ ಸಮ್ಮುಖದಲ್ಲೇ ನಡೆದ ಘಟನೆ ಬಗ್ಗೆ ವಿವರಿಸಿದರು.

ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಪ್ರಕರಣ: ಹಾಸನ ಎಸ್ಪಿ ಶ್ರೀನಿವಾಸ ಗೌಡ ಪ್ರತಿಕ್ರಿಯೆ
ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಪ್ರಕರಣ: ಹಾಸನ ಎಸ್ಪಿ ಶ್ರೀನಿವಾಸ ಗೌಡ ಪ್ರತಿಕ್ರಿಯೆ
TV9 Web
| Edited By: |

Updated on:Jun 25, 2022 | 4:03 PM

Share

ಹಾಸನ: ಹಾಸನ ನಗರ ಠಾಣೆ ಪೊಲೀಸ್ ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಆರೋಪ ಪ್ರಕರಣದ ಬಗ್ಗೆ ಹಾಸನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್​ಪಿ) ಶ್ರೀನಿವಾಸ ಗೌಡ ಪ್ರತಿಕ್ರಿಯಿಸಿದ್ದಾರೆ. ನಿನ್ನೆ ಶುಕ್ರವಾರ ಠಾಣೆ ಪರಿವೀಕ್ಷಣೆ ವೇಳೆ ಶಸ್ತ್ರಾಸ್ತ್ರ ಸಂಬಂಧ ವಿವರಣೆ ಕೇಳಿದರು. ಆ ವೇಳೆ ಕಾನ್ಸ್​​​ಟೇಬಲ್ ವೇಣುಗೋಪಾಲ ಸರಿಯಾಗಿ ವಿವರಣೆ ನೀಡಲಿಲ್ಲ. ಹಾಗಾಗಿ ಡಿವೈಎಸ್ಪಿ ಅವರನ್ನು ಗದರಿದರು. ನಾನೇ ಹೇಳಿಕೊಡ್ತಿನಿ ಎಂದು ಅವರಿಂದ ವೆಪನ್ ಪಡೆಯೋ ವೇಳೆ ಅವರ ಮಾಸ್ಕ್ ಗೆ ಕೈ ತಾಗಿತ್ತು. ಡಿವೈಎಸ್ಪಿ ಉದ್ದೇಶಪೂರ್ವಕವಾಗಿ ಅವರ ಮೇಲೆ ಕೈ ಮಾಡಿಲ್ಲ ಎಂದು ಎಸ್ಪಿ ಶ್ರೀನಿವಾಸ ಗೌಡ ಹೇಳಿದ್ದಾರೆ.

ಕಾನ್ಸ್​​​ಟೇಬಲ್ ಗೆ ಮಧ್ಯಾಹ್ನ ಊಟ ಮಾಡದೆ ಇದ್ದ ಕಾರಣ ಬಿಪಿ ವ್ಯತ್ಯಾಸ ಆಗಿದೆ ಅಷ್ಟೇ ಎಂದು ಕಾನ್ಸ್​​​ಟೇಬಲ್ ಮೇಲೆ ಹಾಸನ ಉಪವಿಭಾಗದ ಡಿವೈಎಸ್ಪಿ ಉದಯಭಾಸ್ಕರ್ ಹಲ್ಲೆ ಮಾಡಿರುವುದನ್ನು ಎಸ್ಪಿ ಶ್ರೀನಿವಾಸ ಗೌಡ ಅಲ್ಲಗಳೆದಿದ್ದಾರೆ. ಇದೊಂದು ಆಕಸ್ಮಿಕ ಘಟನೆ ಎಂದು ಸ್ಪಷ್ಟನೆ ನೀಡಿರುವ ಎಸ್ಪಿ, ತಮ್ಮ ಸಮ್ಮುಖದಲ್ಲೇ ನಡೆದ ಘಟನೆ ಬಗ್ಗೆ ವಿವರಿಸಿದರು. ಜೂನ್ 23 ರ ಸಂಜೆ ಹಾಸನ ನಗರ ಠಾಣೆ ಪರಿವೀಕ್ಷಣೆ ವೇಳೆ ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಆರೋಪ ಕೇಳಿ ಬಂದಿತ್ತು.

ನಮ್ಮದು ಶಿಸ್ತಿನ ಇಲಾಖೆ, ಕೆಲಸದ ವೇಳೆ ನಮ್ಮ ಕೆಳ ಹಂತದ ಅಧಿಕಾರಿಗಳನ್ನ ಶಿಸ್ತಿನಿಂದ ನಡೆಸಿಕೊಳ್ಳಬೇಕಾಗುತ್ತೆ. ಘಟನೆಯ ಹಿಂದೆ ವೈಯಕ್ತಿಕ ದ್ವೇಷವಾಗಲಿ, ಯಾವುದೇ ವೈಯಕ್ತಿಕ ಹಿನ್ನೆಲೆಯಲ್ಲಿ ನಡೆದಿಲ್ಲ. ಹೇಳಿಕೊಡುವ ಹುಮ್ಮಸ್ಸಿನಲ್ಲಿ ನಡೆದಿರೊ ಘಟನೆ ಇದಾಗಿದೆ. ಆದರೂ ಈ ಬಗ್ಗೆ ಡಿವೈಎಸ್ಪಿ ಅವರಿಗೆ ವಾರ್ನ್ ಮಾಡಿ, ತಾಳ್ಮೆಯಿಂದ ವರ್ತಿಸುವಂತೆ ಹೇಳಿದ್ದೇನೆ. ಇಬ್ಬರನ್ನೂ ಕೂಡ ಕರೆಸಿ ಮಾತನಾಡಿ, ಪರಿಸ್ಥಿತಿ ಅರ್ಥ ಮಾಡಿಸಿದ್ದೇನೆ ಎಂದು ಎಸ್ಪಿ ಶ್ರೀನಿವಾಸ ವಿವರಣೆ ನೀಡಿದ್ದಾರೆ.

Also Read:

ಹಾಸನ ಎಸ್​ಪಿ ಸಮ್ಮುಖದಲ್ಲೇ ಕಾನ್ಸ್​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ, ಆಸ್ಪತ್ರೆಗೆ ದಾಖಲು Also Read: ಭ್ರೂಣ ಪತ್ತೆ ಪ್ರಕರಣ: ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದ ಆರೋಗ್ಯ ಸಚಿವ ಸುಧಾಕರ್, ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಿಢೀರ್ ದಾಳಿ

Published On - 4:00 pm, Sat, 25 June 22

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು