AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಎಸ್​ಪಿ ಸಮ್ಮುಖದಲ್ಲೇ ಕಾನ್ಸ್​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ, ಆಸ್ಪತ್ರೆಗೆ ದಾಖಲು

ಪೊಲೀಸ್ ಕಾನ್ಸ್​​ಟೇಬಲ್ ಮೇಲೆ ಹಾಸನ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಹಲ್ಲೆಯಿಂದ ಗಾಯಗೊಂಡ ಕಾನ್ಸ್​​ಟೇಬಲ್ ವೇಣುಗೋಪಾಲ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಾಸನ ಎಸ್​ಪಿ ಸಮ್ಮುಖದಲ್ಲೇ ಕಾನ್ಸ್​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ, ಆಸ್ಪತ್ರೆಗೆ ದಾಖಲು
ಹಾಸನ ಎಸ್​ಪಿ ಸಮ್ಮುಖದಲ್ಲೇ ಕಾನ್ಸ್​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ, ಆಸ್ಪತ್ರೆಗೆ ದಾಖಲು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 24, 2022 | 6:53 PM

ಹಾಸನ: ಕ್ಷುಲ್ಲಕ‌ ಕಾರಣಕ್ಕೆ ಪೊಲೀಸ್ ಕಾನ್ಸ್​​ಟೇಬಲ್ ಮೇಲೆ ಹಾಸನ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಹಲ್ಲೆಯಿಂದ ಗಾಯಗೊಂಡ ಕಾನ್ಸ್​​ಟೇಬಲ್ ವೇಣುಗೋಪಾಲ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ ಹಾಸನ ನಗರ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಭೇಟಿ ವೇಳೆ, ಎಸ್ಪಿ ಸಮ್ಮುಖದಲ್ಲೇ ಹಲ್ಲೆ ನಡೆದಿದೆ.

ಹಾಸನ ಉಪವಿಭಾಗದ ಡಿವೈಎಸ್ಪಿ ಉದಯಭಾಸ್ಕರ್ ವಿರುದ್ದ ಹಲ್ಲೆ ಆರೋಪ ಕೇಳಿಬಂದಿದೆ. ಗುರುವಾರ ಸಂಜೆ ಹಾಸನ ನಗರ ಠಾಣೆಯಲ್ಲಿ ಘಟನೆ ನಡೆದಿದೆ. ಎಸ್ಪಿ ಠಾಣೆ ಭೇಟಿ ಬೇಳೆ, ರೈಫಲ್ ಕ್ಲೀನ್ ಮಾಡಿ ತೋರಿಸಲು ಕಾನ್ಸ್​​ಟೇಬಲ್ ವೇಣುಗೆ ಡಿವೈಎಸ್ಪಿ ಉದಯಭಾಸ್ಕರ್ ಹೇಳಿದ್ದಾರೆ. ಈ ವೇಳೆ ರೈಫಲ್ ಕ್ಲೀನ್ ಹಂತಗಳಲ್ಲಿ ವೇಣುಗೋಪಾಲ್ ತಪ್ಪು ಮಾಡಿದ್ದಾರೆ ಎನ್ನಲಾಗಿದೆ. ಅದಕ್ಕೆ ಡಿವೈಎಸ್ಪಿಯಿಂದ ಹಲ್ಲೆ ನಡೆದಿದೆ. ಹಲ್ಲೆಯಿಂದ ಕುಸಿದು ಬಿದ್ದಿದ್ದ ವೇಣುಗೋಪಾಲ್ ಅವರನ್ನು ತಕ್ಷಣ ಹಾಸನದ ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಹಾಸನ ನಗರ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಬದಲಾವಣೆ; ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿ 6 ವರ್ಷದಿಂದ 5 ವರ್ಷಕ್ಕೆ ಬದಲಾಯಿಸಿ ಆದೇಶ

ಬೆಂಗಳೂರು: ನಗರದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ(Police Constable Transfer) ಪ್ರಕ್ರಿಯೆಯಲ್ಲಿ ಬದಲಾವಣೆ ತರಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿ 6 ವರ್ಷದಿಂದ 5 ವರ್ಷಕ್ಕೆ ಬದಲಾಯಿಸಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ. ನಗರದ ಕಮಿಷನರೇಟ್ ವ್ಯಾಪ್ತಿಯ ಕಾನ್ಸ್‌ಟೇಬಲ್ ಗಳಿಗೆ ಈ ನೂತನ ಆದೇಶ ಅನ್ವಯವಾಗಲಿದೆ. ಒಂದೇ ಕಡೆಗಳಲ್ಲಿ ಹಲವು ವರ್ಷಗಳಿಂದ ಕಾನ್ಸ್‌ಟೇಬಲ್ಸ್ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆ ಕನಿಷ್ಠ 6 ವರ್ಷದಿಂದ 5 ವರ್ಷಕ್ಕೆ ಕಡಿತಗೊಳಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ ಪ್ರಕರಣ: ವಿಚಾರಣೆಗೊಳಪಟ್ಟ ಡಿಸಿ ಮಂಜುನಾಥ್

ಬೆಂಗಳೂರು: ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಕಳೆದ ತಿಂಗಳು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿ ಮಂಜುನಾಥ್ ಅವರನ್ನು ಸಹ ವಿಚಾರಣೆಗೊಳಪಡಿಸಲಾಗಿದೆ. ಡಿ.ಸಿ. ಕಚೇರಿ ಮೇಲೆ ಎಸಿಬಿ ದಾಳಿ ಪ್ರಕರಣ ಸಂಬಂಧ ಎರಡು ದಿನಗಳ ಹಿಂದೆ ಮಂಜುನಾಥ್ ವಿಚಾರಣೆ ಎದುರಿಸಿದ್ದಾರೆ.

ಅರ್ಜಿ ಕ್ಲಿಯರ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಮಂಜುನಾಥ್ ವಿರುದ್ಧ ಕೇಳಿ‌ಬಂದಿತ್ತು. ಮೇ 21ರಂದು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು. ಉಪ ತಹಶೀಲ್ದಾರ್ ಮತ್ತು ಮ್ಯಾನೇಜರ್ ಮಹೇಶ್ ಗುತ್ತಿಗೆ ನೌಕರ ಚೇತನ್ ರನ್ನ ವಶಕ್ಕೆ ಪಡೆದಿತ್ತು. ದೂರುದಾರರಿಂದ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ವಶಕ್ಕೆ ಪಡೆಯಲಾಗಿತ್ತು. ಇದರಲ್ಲಿ ಮಂಜುನಾಥ್ ಪಾತ್ರದ ಕುರಿತು ಆರೋಪ ಕೇಳಿ ಬಂದ ಹಿನ್ನೆಲೆ ಎಸಿಬಿ ತನಿಖಾ ತಂಡವು ಅವರನ್ನು ವಿಚಾರಣೆಗೊಳಪಡಿಸಿದೆ.

Also Read:

ಸರ್ಕಾರಿ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು, ಆಗಲೇ ಎಲ್ಲವೂ ಸರಿ ಹೋಗುವುದು -ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ

Also Read:

ಕಂಪ್ಲಿ ಕೋಟೆಯಲ್ಲಿ ಪಿರಂಗಿ ಗುಂಡುಗಳು ಪತ್ತೆ! ಅವು ಆದಿಲ್ ಶಾಹಿ ಕಾಲದ್ದು ಎಂದರು ಇತಿಹಾಸ ಸಂಶೋಧಕ ಕೋಲ್ಕಾರ್

Published On - 6:03 pm, Fri, 24 June 22

ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್