AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ರೇವಣ್ಣ ಆರೋಪಗಳಿಗೆ ಬೇಸತ್ತು ಸ್ವಯಂ ವರ್ಗಾವಣೆ ಕೋರಿದ ಹಾಸನ DySP ಉದಯ್​ ಭಾಸ್ಕರ್

ರೇವಣ್ಣ ಅವರ ಆರೋಪಕ್ಕೆ ಬೇಸತ್ತು DySP ಉದಯ್ ಭಾಸ್ಕರ್ ಸ್ವಯಂ ವರ್ಗಾವಣೆ ಕೋರಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ವರ್ಗಾವಣೆಗೆ ಕೋರಿದ್ದಾರೆ.

ಹೆಚ್​ಡಿ ರೇವಣ್ಣ ಆರೋಪಗಳಿಗೆ ಬೇಸತ್ತು ಸ್ವಯಂ ವರ್ಗಾವಣೆ ಕೋರಿದ ಹಾಸನ DySP ಉದಯ್​ ಭಾಸ್ಕರ್
ಹೆಚ್​ಡಿ ರೇವಣ್ಣ, ಹಾಸನ DySP ಉದಯ್​ ಭಾಸ್ಕರ್
ಆಯೇಷಾ ಬಾನು
|

Updated on: Apr 02, 2023 | 11:14 AM

Share

ಹಾಸನ: DySP ಉದಯ್​ ಭಾಸ್ಕರ್​(Hassan DySP Uday Bhaskar) ನಿಷ್ಪಕ್ಷಪಾತವಾಗಿ ಕೆಲಸ ಮಾಡದ ಆರೋಪದ ಮೇಲೆ ಉದಯ್​ ಭಾಸ್ಕರ್ ವಿರುದ್ಧ ಕ್ರಮಕ್ಕೆ ಹೆಚ್​ಡಿ ರೇವಣ್ಣ(HD Revanna) ಒತ್ತಾಯಿಸಿದ್ದಾರೆ. ರೇವಣ್ಣ ಅವರ ಆರೋಪಕ್ಕೆ ಬೇಸತ್ತು DySP ಉದಯ್ ಭಾಸ್ಕರ್ ಸ್ವಯಂ ವರ್ಗಾವಣೆ ಕೋರಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ವರ್ಗಾವಣೆಗೆ ಕೋರಿದ್ದಾರೆ. ಹೆಚ್​ಡಿ ರೇವಣ್ಣ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ನಿಷ್ಪಕ್ಷಪಾತ, ನೇರ ನುಡಿ ವ್ಯಕ್ತಿತ್ವವುಳ್ಳವನು. ಅವರ ಒತ್ತಾಯಕ್ಕೆ ಮಣಿಯದ ಕಾರಣ ಅನಗತ್ಯ ಆರೋಪ ಮಾಡ್ತಿದ್ದಾರೆ. ನನ್ನ ಮೇಲೆ ಆರೋಪ ಮಾಡಿ ಮೇಲಧಿಕಾರಿಗಳಿಗೆ ಒತ್ತಡ ಹಾಕ್ತಿದ್ದಾರೆ. ಇದರಿಂದ ಮೇಲಧಿಕಾರಿಗಳಿಗೂ ಇರಿಸುಮುರಿಸು ಉಂಟಾಗುತ್ತದೆ ಎಂದು ಹೆಚ್​.ಡಿ.ರೇವಣ್ಣ ವಿರುದ್ಧ DySP ಉದಯ್​ ಭಾಸ್ಕರ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುಂದಗೋಳ ಕ್ಷೇತ್ರದಿಂದ ಎಂಆರ್​ ಪಾಟೀಲ್​ಗೆ ಟಿಕೆಟ್​ ಪಕ್ಕಾ: ಜಗದೀಶ್​ ಶೆಟ್ಟರ್​ ಹಳೆ ವಿಡಿಯೋ ವೈರಲ್​

ಹದಿನೈದು ವರ್ಷಗಳ ಹಿಂದೆ ಹಾಸನದಲ್ಲಿ ಪಿಎಸ್ ಐ ಆಗಿ ಕೆಲಸ ಮಾಡಿದ್ದು ಈಗ ಡಿವೈಎಸ್ಪಿ ಆಗಿ ಹಾಸನದಲ್ಲಿದಾರೆ. ಇವರು ಬಿಜೆಪಿ ಜೊತೆ ಶಾಮೀಲಾಗಿದಾರೆ. ಇವರ ವ್ಯಾಪ್ತಿಯ ಠಾಣೆಗಳಲ್ಲಿ ಬಿಜೆಪಿ ಮುಖಂಡರೇ ಇರ್ತಾರೆ. ರೌಡಿ ಶೀಟರ್​ಗಳ ಎಲ್ಲ ಕೇಸ್ ಗಳ ರಾಜಿ ಸಂಧಾನ ಮಾಡಿಸ್ತಾರೆ. ಜೆಡಿಎಸ್ ಮುಖಂಡರ ಮೇಲೆ ವಿನಾಕಾರಣ ಕೇಸ್ ಹಾಕಿಸ್ತಾರೆ ಎಂದು ರೇವಣ್ಣ ಪದೇ ಪದೆ ಆರೋಪ ಮಾಡಿದ್ದಾರೆ. ಇವರನ್ನು ಕೂಡಲೆ ವರ್ಗಾವಣೆ ಮಾಡಿ ಎಂದು ಒತ್ತಾಯ ಕೂಡ ಮಾಡಿದ್ದಾರೆ. ಕಳೆದ ವರ್ಷ ಏಪ್ರಿಲ್ ನಲ್ಲಿ ಕೊಲೆಯಾದ ಹಾಸನ ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ್ ಕೇಸ್ ನಲ್ಲಿ ಇವರು ಆರೋಪಿಗಳಿಗೆ ಸಹಾಯ ಮಾಡಿದ್ದರು ಎಂದು ಕೂಡ ರೇವಣ್ಣ ಆರೋಪ ಮಾಡಿದ್ರು ಹಾಗಾಗಿ ತಮ್ಮ ವಿರುದ್ದ ಪದೇ ಪದೇ ಆರೋಪ ಹಿನ್ನೆಲೆಯಲ್ಲಿ ಮನನೊಂದು ಸ್ವಯಂ ವರ್ಗಾವಣೆಗೆ ಉದಯ್ ಭಾಸ್ಕರ್ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು