AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ನೀವೇ ಮಾತನಾಡಿ ನಾನು ಎದ್ದು ಹೋಗ್ತೀನಿ; ರೈತರ ಮುಂದೆ ಸಿಟ್ಟಿಗೆದ್ದ ಶೋಭಾ ಕರಂದ್ಲಾಜೆ!

ನಾನು ಮಾತಾಡೋಕೆ ಬೇರೆ ಎಲ್ಲಾ ಕಡೆ ಸಿಗುತ್ತೇನೆ. ಕಾರ್ಯಕ್ರಮಕ್ಕೆ ಅಡ್ಡಿ ಮಾಡುವುದಿದ್ರೆ ನೀವೇ ಮಾತಾಡಿ ಎಂದು ವೇದಿಕೆ ಮೇಲೆಯೇ ಶೋಭಾ ಅಸಮಾಧಾನ ಹೊರಹಾಕಿದ್ದಾರೆ. ಕೊನೆಗೆ ಹಾಸನ ಪೊಲೀಸರು ರೈತರನ್ನು ಸಮಾಧಾನಪಡಿಸಿದ್ದಾರೆ.

ಹಾಸನ: ನೀವೇ ಮಾತನಾಡಿ ನಾನು ಎದ್ದು ಹೋಗ್ತೀನಿ; ರೈತರ ಮುಂದೆ ಸಿಟ್ಟಿಗೆದ್ದ ಶೋಭಾ ಕರಂದ್ಲಾಜೆ!
ಶೋಭಾ ಕರಂದ್ಲಾಜೆ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on:Mar 13, 2022 | 1:15 PM

Share

ಹಾಸನ: ಫಸಲ್ ಬಿಮಾ ಯೋಜನೆ ನನ್ನ ಪಾಲಿಸಿ ನನ್ನ ಕೈಯಲ್ಲಿ, ಈ ಬಗ್ಗೆ ಹಾಸನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ರೈತರ ಆಕ್ರೋಶ ವ್ಯಕ್ತವಾಗಿದೆ. ಹಾಸನ ಜಿಲ್ಲೆಯ ರೈತರು ಬೆಳೆದ ರಾಗಿ ಖರೀದಿ ಮಾಡ್ತಿಲ್ಲ. ಮೊದಲು ರಾಗಿ ಬಗ್ಗೆ ಮಾತನಾಡುವಂತೆ ರೈತರು ಒತ್ತಾಯ ಮಾಡಿದ್ದಾರೆ. ಶೋಭಾ ಕರಂದ್ಲಾಜೆ ಭಾಷಣದ ವೇಳೆ ರೈತರ ಅಸಮಾಧಾನ ಕೇಳಿಬಂದಿದೆ. ರೈತರ ಆಕ್ರೋಶಕ್ಕೆ ಕೇಂದ್ರ ಕೃಷಿ ರಾಜ್ಯ ಇಲಾಖೆ ಸಚಿವೆ ಶೋಭಾ ಕರಂದ್ಲಾಜೆ ಸಿಟ್ಟಾಗಿದ್ದಾರೆ. ನೀವೇ ಮಾತನಾಡಿ ನಾನು ಎದ್ದು ಹೋಗ್ತೀನಿ ಎಂದು ಸಚಿವೆ ಶೋಭಾ ಕರಂದ್ಲಾಜೆ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನ ರೈತರಿಗೆ ಫಸಲ್ ಬಿಮಾ ಯೋಜನೆ ಹಣ ಸಿಕ್ಕಿಲ್ಲ. ಹಾಸನ ಜಿಲ್ಲೆಯಿಂದ ಎಷ್ಟು ಹಣ ಸಂಗ್ರಹ ಮಾಡಿದ್ರು? ಹಾಸನ ಜಿಲ್ಲೆಗೆ ಎಷ್ಟು ಕೋಟಿ ಹಣ ಬಂತು ಎಂದು ಹೇಳಿ ಎಂದು ವೇದಿಕೆ ಮೇಲೆ ಸಚಿವರು ಮಾತಿಗೆ ನಿಂತಾಗ ಅಸಮಾಧಾನ ಕೇಳಿಬಂದಿದೆ. ನಾನು ಮಾತಾಡೋಕೆ ಬೇರೆ ಎಲ್ಲಾ ಕಡೆ ಸಿಗುತ್ತೇನೆ. ಕಾರ್ಯಕ್ರಮಕ್ಕೆ ಅಡ್ಡಿ ಮಾಡುವುದಿದ್ರೆ ನೀವೇ ಮಾತಾಡಿ ಎಂದು ವೇದಿಕೆ ಮೇಲೆಯೇ ಶೋಭಾ ಅಸಮಾಧಾನ ಹೊರಹಾಕಿದ್ದಾರೆ. ಕೊನೆಗೆ ಹಾಸನ ಪೊಲೀಸರು ರೈತರನ್ನು ಸಮಾಧಾನಪಡಿಸಿದ್ದಾರೆ. ಹಾಸನ ತಾಲ್ಲೂಕಿನ ಕಾರೆಕೆರೆ ಕೃಷಿ ಕಾಲೇಜು ಆವರಣದಲ್ಲಿ ನಡೆಯುತ್ತಿರೋ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ.

2024ರ ನಂತರ ದೇಶದ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರಲಿಕ್ಕೆ ಸಾಧ್ಯವಿಲ್ಲ: ಗೋವಿಂದ ಕಾರಜೋಳ

ಇತ್ತ ಬಾಗಲಕೋಟೆಯಲ್ಲಿ, ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ವಿಚಾರಕ್ಕೆ ಸಂಬಂಧಿಸಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪರಿಸ್ಥಿತಿ ಇನ್ನೂ ಹೀನಾಯ ಆಗುತ್ತದೆ. ಇದಕ್ಕಿಂತಲೂ ಹೀನಾಯ ಆಗುತ್ತದೆ. ಪಂಚರಾಜ್ಯ ಚುನಾವಣೆಗೂ ಮುನ್ನ ಬೆಳಗಾವಿಯಲ್ಲಿ ಇದೇ ಮಾತು ಹೇಳಿದ್ದೆ. ಇವಾಗಲೂ ಹೇಳ್ತೀನಿ. 2024ರ ನಂತರ ದೇಶದ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರಲಿಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ, ಇಬ್ಬರು ಸ್ಪೇಷಲ್ ಪ್ಲೈಟ್ ಮಾಡಿಕೊಂಡು ಗೋವಾ, ಉತ್ತರಾಖಂಡ ಹೋಗಿದ್ದರು. ಬಾಡಿಗೆ ಕೊಟ್ಟು ಮರಳಿ ಬಂದ್ರು. ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಬರೋದಿಲ್ಲ ಎಂದು ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್​ನಲ್ಲಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮಧ್ಯೆ ಏನಿದೆ ಅಂತ ನಾಡಿನ‌ ಜನತೆಗೆ ಗೊತ್ತು. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಕಾಂಗ್ರೆಸ್​ನಲ್ಲಿ ಈಗ ಎರಡು ಗುಂಪು ಇವೆ. ಚುನಾವಣೆ ಬರುವಷ್ಟರಲ್ಲಿ ಮೂರು ಗುಂಪು ಆಗುತ್ತದೆ. ಮೂರು ಗುಂಪಿನವರು ಮೂರು ದಿಕ್ಕಿಗೆ ಹೋಗ್ತಾರೆ ಎಂದು ಕಾರಜೋಳ ಟೀಕಿಸಿದ್ದಾರೆ.

ಕಾಂಗ್ರೆಸ್​ನಿಂದ ಬಿಜೆಪಿಗೆ ಕೆಲ ಶಾಸಕರು ಬರುತ್ತಾರೆ ಎಂಬ ಸುದ್ದಿ ಬಗ್ಗೆ ಬಾಗಲಕೋಟೆಯಲ್ಲಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಬಿಟ್ಟು ಹೋಗ್ತಾರೆ, ಆದರೆ ನಾವು ಯಾರನ್ನೂ ಸಂಪರ್ಕ ಮಾಡಿಲ್ಲ. ನಮ್ಮ ಬಾಗಿಲು 24 ಗಂಟೆಗಳ ಕಾಲ ಓಪನ್ ಇರುತ್ತದೆ. ಯಾರು ಬೇಕಾದರೂ ಬರಬಹುದು. ರಾಜ್ಯ ಬಿಜೆಪಿ ಅಧ್ಯಕ್ಷರು ಬದಲಾವಣೆ ಆಗ್ತಾರೆ ಎಂಬುದು ಗಾಳಿ ಸುದ್ದಿ. ಇವೆಲ್ಲ ಬಾಗಲಕೋಟೆಯಲ್ಲಿ ಹುಟ್ಟಿದ ಸುದ್ದಿ ಎಂದು ಕಾರಜೋಳ ಹಾಸ್ಯಚಟಾಕಿ ಹಾರಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್​ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಶೋಭಾ ಕರಂದ್ಲಾಜೆ ಭೇಟಿ

ಇದನ್ನೂ ಓದಿ: ಹರ್ಷ ಹತ್ಯೆಗೆ ಅಂತರಾಷ್ಟ್ರೀಯ ಪಿತೂರಿ, ಪ್ರಕರಣ ಎನ್ಐಎಗೆ ಕೊಡಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Published On - 12:31 pm, Sun, 13 March 22

ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್