AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ನೀವೇ ಮಾತನಾಡಿ ನಾನು ಎದ್ದು ಹೋಗ್ತೀನಿ; ರೈತರ ಮುಂದೆ ಸಿಟ್ಟಿಗೆದ್ದ ಶೋಭಾ ಕರಂದ್ಲಾಜೆ!

ನಾನು ಮಾತಾಡೋಕೆ ಬೇರೆ ಎಲ್ಲಾ ಕಡೆ ಸಿಗುತ್ತೇನೆ. ಕಾರ್ಯಕ್ರಮಕ್ಕೆ ಅಡ್ಡಿ ಮಾಡುವುದಿದ್ರೆ ನೀವೇ ಮಾತಾಡಿ ಎಂದು ವೇದಿಕೆ ಮೇಲೆಯೇ ಶೋಭಾ ಅಸಮಾಧಾನ ಹೊರಹಾಕಿದ್ದಾರೆ. ಕೊನೆಗೆ ಹಾಸನ ಪೊಲೀಸರು ರೈತರನ್ನು ಸಮಾಧಾನಪಡಿಸಿದ್ದಾರೆ.

ಹಾಸನ: ನೀವೇ ಮಾತನಾಡಿ ನಾನು ಎದ್ದು ಹೋಗ್ತೀನಿ; ರೈತರ ಮುಂದೆ ಸಿಟ್ಟಿಗೆದ್ದ ಶೋಭಾ ಕರಂದ್ಲಾಜೆ!
ಶೋಭಾ ಕರಂದ್ಲಾಜೆ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on:Mar 13, 2022 | 1:15 PM

Share

ಹಾಸನ: ಫಸಲ್ ಬಿಮಾ ಯೋಜನೆ ನನ್ನ ಪಾಲಿಸಿ ನನ್ನ ಕೈಯಲ್ಲಿ, ಈ ಬಗ್ಗೆ ಹಾಸನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ರೈತರ ಆಕ್ರೋಶ ವ್ಯಕ್ತವಾಗಿದೆ. ಹಾಸನ ಜಿಲ್ಲೆಯ ರೈತರು ಬೆಳೆದ ರಾಗಿ ಖರೀದಿ ಮಾಡ್ತಿಲ್ಲ. ಮೊದಲು ರಾಗಿ ಬಗ್ಗೆ ಮಾತನಾಡುವಂತೆ ರೈತರು ಒತ್ತಾಯ ಮಾಡಿದ್ದಾರೆ. ಶೋಭಾ ಕರಂದ್ಲಾಜೆ ಭಾಷಣದ ವೇಳೆ ರೈತರ ಅಸಮಾಧಾನ ಕೇಳಿಬಂದಿದೆ. ರೈತರ ಆಕ್ರೋಶಕ್ಕೆ ಕೇಂದ್ರ ಕೃಷಿ ರಾಜ್ಯ ಇಲಾಖೆ ಸಚಿವೆ ಶೋಭಾ ಕರಂದ್ಲಾಜೆ ಸಿಟ್ಟಾಗಿದ್ದಾರೆ. ನೀವೇ ಮಾತನಾಡಿ ನಾನು ಎದ್ದು ಹೋಗ್ತೀನಿ ಎಂದು ಸಚಿವೆ ಶೋಭಾ ಕರಂದ್ಲಾಜೆ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನ ರೈತರಿಗೆ ಫಸಲ್ ಬಿಮಾ ಯೋಜನೆ ಹಣ ಸಿಕ್ಕಿಲ್ಲ. ಹಾಸನ ಜಿಲ್ಲೆಯಿಂದ ಎಷ್ಟು ಹಣ ಸಂಗ್ರಹ ಮಾಡಿದ್ರು? ಹಾಸನ ಜಿಲ್ಲೆಗೆ ಎಷ್ಟು ಕೋಟಿ ಹಣ ಬಂತು ಎಂದು ಹೇಳಿ ಎಂದು ವೇದಿಕೆ ಮೇಲೆ ಸಚಿವರು ಮಾತಿಗೆ ನಿಂತಾಗ ಅಸಮಾಧಾನ ಕೇಳಿಬಂದಿದೆ. ನಾನು ಮಾತಾಡೋಕೆ ಬೇರೆ ಎಲ್ಲಾ ಕಡೆ ಸಿಗುತ್ತೇನೆ. ಕಾರ್ಯಕ್ರಮಕ್ಕೆ ಅಡ್ಡಿ ಮಾಡುವುದಿದ್ರೆ ನೀವೇ ಮಾತಾಡಿ ಎಂದು ವೇದಿಕೆ ಮೇಲೆಯೇ ಶೋಭಾ ಅಸಮಾಧಾನ ಹೊರಹಾಕಿದ್ದಾರೆ. ಕೊನೆಗೆ ಹಾಸನ ಪೊಲೀಸರು ರೈತರನ್ನು ಸಮಾಧಾನಪಡಿಸಿದ್ದಾರೆ. ಹಾಸನ ತಾಲ್ಲೂಕಿನ ಕಾರೆಕೆರೆ ಕೃಷಿ ಕಾಲೇಜು ಆವರಣದಲ್ಲಿ ನಡೆಯುತ್ತಿರೋ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ.

2024ರ ನಂತರ ದೇಶದ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರಲಿಕ್ಕೆ ಸಾಧ್ಯವಿಲ್ಲ: ಗೋವಿಂದ ಕಾರಜೋಳ

ಇತ್ತ ಬಾಗಲಕೋಟೆಯಲ್ಲಿ, ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ವಿಚಾರಕ್ಕೆ ಸಂಬಂಧಿಸಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪರಿಸ್ಥಿತಿ ಇನ್ನೂ ಹೀನಾಯ ಆಗುತ್ತದೆ. ಇದಕ್ಕಿಂತಲೂ ಹೀನಾಯ ಆಗುತ್ತದೆ. ಪಂಚರಾಜ್ಯ ಚುನಾವಣೆಗೂ ಮುನ್ನ ಬೆಳಗಾವಿಯಲ್ಲಿ ಇದೇ ಮಾತು ಹೇಳಿದ್ದೆ. ಇವಾಗಲೂ ಹೇಳ್ತೀನಿ. 2024ರ ನಂತರ ದೇಶದ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರಲಿಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ, ಇಬ್ಬರು ಸ್ಪೇಷಲ್ ಪ್ಲೈಟ್ ಮಾಡಿಕೊಂಡು ಗೋವಾ, ಉತ್ತರಾಖಂಡ ಹೋಗಿದ್ದರು. ಬಾಡಿಗೆ ಕೊಟ್ಟು ಮರಳಿ ಬಂದ್ರು. ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಬರೋದಿಲ್ಲ ಎಂದು ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್​ನಲ್ಲಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮಧ್ಯೆ ಏನಿದೆ ಅಂತ ನಾಡಿನ‌ ಜನತೆಗೆ ಗೊತ್ತು. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಕಾಂಗ್ರೆಸ್​ನಲ್ಲಿ ಈಗ ಎರಡು ಗುಂಪು ಇವೆ. ಚುನಾವಣೆ ಬರುವಷ್ಟರಲ್ಲಿ ಮೂರು ಗುಂಪು ಆಗುತ್ತದೆ. ಮೂರು ಗುಂಪಿನವರು ಮೂರು ದಿಕ್ಕಿಗೆ ಹೋಗ್ತಾರೆ ಎಂದು ಕಾರಜೋಳ ಟೀಕಿಸಿದ್ದಾರೆ.

ಕಾಂಗ್ರೆಸ್​ನಿಂದ ಬಿಜೆಪಿಗೆ ಕೆಲ ಶಾಸಕರು ಬರುತ್ತಾರೆ ಎಂಬ ಸುದ್ದಿ ಬಗ್ಗೆ ಬಾಗಲಕೋಟೆಯಲ್ಲಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಬಿಟ್ಟು ಹೋಗ್ತಾರೆ, ಆದರೆ ನಾವು ಯಾರನ್ನೂ ಸಂಪರ್ಕ ಮಾಡಿಲ್ಲ. ನಮ್ಮ ಬಾಗಿಲು 24 ಗಂಟೆಗಳ ಕಾಲ ಓಪನ್ ಇರುತ್ತದೆ. ಯಾರು ಬೇಕಾದರೂ ಬರಬಹುದು. ರಾಜ್ಯ ಬಿಜೆಪಿ ಅಧ್ಯಕ್ಷರು ಬದಲಾವಣೆ ಆಗ್ತಾರೆ ಎಂಬುದು ಗಾಳಿ ಸುದ್ದಿ. ಇವೆಲ್ಲ ಬಾಗಲಕೋಟೆಯಲ್ಲಿ ಹುಟ್ಟಿದ ಸುದ್ದಿ ಎಂದು ಕಾರಜೋಳ ಹಾಸ್ಯಚಟಾಕಿ ಹಾರಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್​ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಶೋಭಾ ಕರಂದ್ಲಾಜೆ ಭೇಟಿ

ಇದನ್ನೂ ಓದಿ: ಹರ್ಷ ಹತ್ಯೆಗೆ ಅಂತರಾಷ್ಟ್ರೀಯ ಪಿತೂರಿ, ಪ್ರಕರಣ ಎನ್ಐಎಗೆ ಕೊಡಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Published On - 12:31 pm, Sun, 13 March 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!