AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲೊಂದು ಅಚ್ಚರಿ! ಸತ್ತ ಕೋಳಿಯ ಬಾಯಲ್ಲಿ ಬೆಂಕಿ, ಗ್ರಾಮಸ್ಥರೇ ಶಾಕ್

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹದಿಗೆ ಗ್ರಾಮದಲ್ಲಿ 15ಕ್ಕೂ ಹೆಚ್ಚು ಕೋಳಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ. ಕೋಳಿಗಳಿಗೆ ವಿಷ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಚ್ಚರಿ ಎಂದರೆ ಸತ್ತ ಕೋಳಿಯ ಬಾಯಿಯಿಂದ ಬೆಂಕಿ ಬರುತ್ತಿದೆ. ಈ ಘಟನೆಯಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ ಮತ್ತು ಅಧಿಕಾರಿಗಳ ತನಿಖೆಗೆ ಒತ್ತಾಯಿಸಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Dec 26, 2024 | 7:34 PM

Share

ಹಾಸನ, ಡಿಸೆಂಬರ್​ 26: ಜಿಲ್ಲೆಯ ಸಕಲೇಶಪುರ ತಾಲೂಕಿನ ಸಮೀಪದ ಹದಿಗೆ ಗ್ರಾಮದಲ್ಲಿ ಕೂಲಿ ಕಾರ್ಮಿಕರೇ ವಾಸವಾಗಿರುವ ಗ್ರಾಮ. ಈ ಗ್ರಾಮದಲ್ಲಿ ಹೆಚ್ಚಾಗಿ ಕೋಳಿ (Chicken) ಸಾಕಣೆ ಮಾಡಿಕೊಂಡು ಜೀವನ ನಡೆಸುತ್ತಾರೆ. ಆದರೆ ಕಾರ್ಮಿಕರು ನಿತ್ಯದಂತೆ ತಮ್ಮ ಕೂಲಿ ಕೆಲಸಕ್ಕೆ ಹೋಗಿ ಬರುವಷ್ಟರಲ್ಲಿ ವಿಷ ಸೇವಿಸಿದ ಪರಿಣಾಮ 15ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ. ಆದರೆ ಹೀಗೆ ಸಾವನ್ನಪ್ಪಿದ್ದ ಕೋಳಿಯ ಬಾಯಿಯಿಂದ ನಿಗೂಢವಾಗಿ ಬೆಂಕಿ ಹೊರಹೊಮ್ಮುತ್ತಿದೆ. ಇದು ಹದಿಗೆ ಗ್ರಾಮಸ್ಥರಿಗೆ ಆಶ್ಚರ್ಯ ಉಂಟು ಮಾಡಿದೆ.

ಗ್ರಾಮದ ರವಿ ಎಂಬುವವರಿಗೆ ಸೇರಿದ ಕೋಳಿಗಳು ಸಾವನ್ನಪ್ಪಿವೆ. ಕೋಳಿ ಸಾಕಾಣಿಕೆಯನ್ನು ಸಹಿಸದ ಕೆಲ ಕಿಡಿಗೇಡಿಗಳು, ಕೂಲಿ ಕೆಲಸಕ್ಕೆ ಹೋಗಿ ಬರುವಷ್ಟರಲ್ಲಿ ರಾಸಾಯನಿಕ ವಿಷವಿಟ್ಟು ಸಾಯಿಸಿರುವುದಾಗಿ ಆರೋಪ ಕೇಳಿಬಂದಿದೆ. ಹೀಗೆ ಸತ್ತ ಕೋಳಿಯ ಹೊಟ್ಟೆ ಭಾಗದಲ್ಲಿ ಜೋರಾಗಿ ಅದುವಿದಾಗ ಬೆಂಕಿ ಉಗುಳುತ್ತಿವೆ. ಸದ್ಯ ಸತ್ತ ಕೋಳಿ ಬಾಯಿಯಿಂದ ಬೆಂಕಿ ಬರುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಇದನ್ನೂ ಓದಿ: ಅರ್ಜುನ ವೀರ ಮರಣಹೊಂದಿ ಇಂದಿಗೆ 1 ವರ್ಷ: ಸರ್ಕಾರದ ನಡೆಗೆ ಅಭಿಮಾನಿಗಳು ಬೇಸರ

ಹದಿಗೆ ಗ್ರಾಮದ ಜನರು ಕೋಳಿ ಸಾಕಾಣಿಕೆಯನ್ನು ಉಪ ಕಸುಬು ಮಾಡಿಕೊಂಡಿದ್ದಾರೆ. ಆದರೆ ಇದನ್ನು ಸಹಿಸದ ಕೆಲವರು ಕೋಳಿಗಳು ಮರಣ ಹೊಂದುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪಾನಿಪುರಿ, ಗೋಬಿ ಅಂಗಡಿಯವರೇ ನಮಗಿಂತ ಸುಖವಾಗಿದ್ದಾರೆ: ತಹಶೀಲ್ದಾರ್ ನೋವಿನ ಮಾತು

ಇನ್ನು ಸತ್ತ ಕೋಳಿ ಬಾಯಿಯಿಂದ ಬೆಂಕಿ ಬರುತ್ತಿರುವ ವಿಡಿಯೋಕ್ಕೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಬಗೆಬಗೆಯ ಕಮೆಂಟ್​ ಮಾಡಿದ್ದಾರೆ. ಒಬ್ಬರು ನೆಟ್ಟಿಗರು ಹೇಳುವಂತೆ ಯಾರೋ ಕೋಳಿಗಳಿಗೆ ಫೊಸೇಟ್ (ರಾಸಾಯನಿಕ ವಿಷ) ಅನ್ನು ತಿನ್ನಿಸಿದ್ದಾರೆ ಎಂದಿದ್ದಾರೆ. ಇನ್ನೊಬ್ಬರು ಕಾಮೆಂಟ್​ ಮಾಡಿದ್ದು, ಅವು ಹಾನಿಕಾರಕ ರಾಸಾಯನಿಕವನ್ನು ಸೇವಿಸಿರಬಹುದು ಎಂದು ಹೇಳಿದ್ದಾರೆ. ಇನ್ನೊಬ್ಬರು ಚೀನಿಗಳ ರಾಶಿಚಕ್ರದಲ್ಲಿ ಡ್ರ್ಯಾಗನ್​​ ಕೋಳಿಯನ್ನು ನೋಡಿದ ನೆನಪಿಲ್ಲ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:19 pm, Thu, 26 December 24

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್