AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ 12 ಗಂಟೆಗಳಿಂದ ನಡೆದ ಹಾಸನಾಂಬೆ ಹುಂಡಿ ಎಣಿಕೆ ಕಾರ್ಯ ಅಂತ್ಯ: ಕೋಟಿ-ಕೋಟಿ ಆದಾಯ ಸಂಗ್ರಹ

ಸತತ 12 ಗಂಟೆಗಳಿಂದ ನಡೆದ ಹಾಸನಾಂಬೆ ದೇಗುಲದ ಹುಂಡಿ ಎಣಿಕೆ ಕಾರ್ಯ ಅಂತ್ಯವಾಗಿದ್ದು, ಒಟ್ಟು 15 ದಿನಗಳು ನಡೆದಿದ್ದ ಹಾಸನಾಂಬೆ ದರ್ಶನೋತ್ಸವದಲ್ಲಿ ಈ ವರ್ಷವೂ ಸಹ ಕೋಟಿ-ಕೊಟಿ ರೂಪಾಯಿ ಆದಾಯ ಹರಿದುಬಂದಿದೆ.

ಸತತ 12 ಗಂಟೆಗಳಿಂದ ನಡೆದ ಹಾಸನಾಂಬೆ ಹುಂಡಿ ಎಣಿಕೆ ಕಾರ್ಯ ಅಂತ್ಯ: ಕೋಟಿ-ಕೋಟಿ ಆದಾಯ ಸಂಗ್ರಹ
Hasanamba
TV9 Web
| Edited By: |

Updated on: Oct 28, 2022 | 10:43 PM

Share

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡೋ ಹಾಸನಾಂಭೆ ಉತ್ಸವ ಈ ಬಾರಿ ಅದ್ಧೂರಿಯಾಗಿ ಸಂಪನ್ನಗೊಂಡಿದ್ದು, ಈ ವರ್ಷ ಅಕ್ಟೋಬರ್ 13 ರಿಂದ ಅಕ್ಟೋಬರ್ 27 ರ ವರೆಗೆ ನಡೆದಿದ್ದ ಹಾಸನಾಂಬೆ ಉತ್ಸವ ಸಂದರ್ಭದಲ್ಲಿ ಕೋಟಿ ಕೊಟಿ ಆದಾಯ ಹರಿದುಬಂದಿದೆ.  ಸತತ 12 ಗಂಟೆಗಳಿಂದ ನಡೆದ ಹಾಸನಾಂಬೆ ದೇಗುಲದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಈ ವರ್ಷ ಒಟ್ಟು ಹಾಸನಾಂಬೆ ಉತ್ಸವದಿಂದ 3 ಕೋಟಿ 69 ಲಕ್ಷದ 51 ಸಾವಿರದ 251 ರೂ ಆದಾಯ ಸಂಗ್ರಹವಾಗಿದೆ.

ಅಕ್ಟೋಬರ್ 13 ರಿಂದ ಅಕ್ಟೋಬರ್ 27 ರ ವರೆಗೆ ನಡೆದಿದ್ದ ಹಾಸನಾಂಬೆ ಉತ್ಸವದಲ್ಲಿ ಆರು ಲಕ್ಷಕ್ಕೂ ಅಧಿಕ ಭಕ್ತರು ದರ್ಶನ ಪಡೆದುಕೊಂಡಿದ್ದು, ಭಕ್ತರಿಂದ ಕಾಣಿಕೆ ರೂಪದಲ್ಲಿ 1 ಕೋಟಿ 88 ಲಕ್ಷದ 40 ಸಾವಿರದ 935 ರೂ. ಸಂಗ್ರಹವಾಗಿದ್ರೆ, ವಿಶೇಷ ದರ್ಶನದ ಪಾಸ್ ಮಾರಾಟದಿಂದ 1 ಕೋಟಿ 48 ಲಕ್ಷದ,27 ಸಾವಿರದ 600 ರೂ ಸಂಗ್ರಹವಾಗಿದೆ. ಇನ್ನು ಲಡ್ಡು ಪ್ರಸಾದ ಮಾರಾಟ ದಿಂದ 32 ಲಕ್ಷದ 82 ಸಾವಿರದ 716 ರೂ ಆದಾಯ ಬಂದಿದೆ. ಎಲ್ಲಾ ಮೂಲಗಳೂ ಸೇರಿ ಒಟ್ಟು 3,69,51,251 ರೂ ಸಂಗ್ರಹವಾದಂತಾಗಿದೆ.

ಹಾಸನಾಂಭೆ ಉತ್ಸವ ಸಂಪನ್ನ: ಪುನೀತ್ ರಾಜಕುಮಾರ್ ಪುತ್ಥಳಿ ಜೊತೆ ಬಂದು ದೇವಿಯ ದರ್ಶನ ಮಾಡಿದ ಅಪ್ಪು ಅಭಿಮಾನಿಗಳು!

ಈ ಮೂಲಕ ಹಾಸನಾಂಬೆ ದರ್ನದ ವೇಳೆ ಸಂಗ್ರಹದಲ್ಲಿ ಎರಡನೇ ಅತಿ ಹೆಚ್ಚು ಮೊತ್ತದ ದಾಖಲೆಯ ಆದಾಯ ಸಂಗ್ರಹವಾಗಿದೆ. ಕೋವಿಡ್ ಸಂದರ್ಭ ದಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ಇಲ್ಲದೆ ಆದಾಯ ಕುಸಿದಿತ್ತು. ಈ ಬಾರಿ ಮತ್ತೆ ಕೋಟಿ ಕೋಟಿ ಆದಾಯ ಸಂಗ್ರಹವಾಗಿದೆ.

ಇಂದು(ಅ.28) ಬೆಳಗ್ಗೆ 9 ಗಂಟೆಯಿಂದ ನಡೆದ ಹುಂಡಿ ಎಣಿಕೆ ಪ್ರಕ್ರಿಯೆ ಶುರುವಾಗಿ ರಾತ್ರಿ 9 ಗಂಟೆಗೆ ಅಂತ್ಯವಾಗಿದೆ. ಉಪ ವಿಭಾಗಾಧಿಕಾರಿ ಜಗದೀಶ್ ನೇತೃತ್ವದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ, ಮುಜರಾಯಿ ಇಲಾಖೆ ಸಿಬ್ಬಂದಿ, ಸ್ಕೌಟ್ಸ್​ & ಗೈಡ್ಸ್​ ಸ್ವಯಂಸೇವಕರಿಂದ ಹುಂಡಿ ಎಣಿಕೆ ಕಾರ್ಯ ನಡೆದಿತ್ತು.

ಈ ಹಿಂದೆ 2017 ರಲ್ಲಿ ಅತಿ ಹೆಚ್ಚು 4.14 ಕೋಟಿ ಹಣ ಸಂಗ್ರಹವಾಗಿತ್ತು. 2017ರ ಹೊರತುಪಡಿಸಿ ಈ ವರ್ಷ ಅತಿ ಹೆಚ್ಚು ಆದಾಯ ಹರಿದುಬಂದಿದೆ.

ತಡ ರಾತ್ರಿ ಅದ್ಧೂರಿಯಾಗಿ ನಡೆದ ಹಾಸನಾಂಬೆ, ಸಿದ್ದೇಶ್ವರ ಜಾತ್ರಾ ಮಹೋತ್ಸವ: ಮಧ್ಯಾಹ್ನ 12ಗೆ ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಬಂದ್

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ