AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan: ತಿರುಪತಿ ಮಾದರಿಯಲ್ಲಿ ಹಾಸನಾಂಬೆ ದರ್ಶನಕ್ಕೆ ಚಿಂತನೆ: ಜಿಲ್ಲಾಧಿಕಾರಿ ಆರ್ ಗಿರೀಶ್ ಹೇಳಿಕೆ

Hassan: ತಿರುಪತಿ ಮಾದರಿಯಲ್ಲಿ ಹಾಸನಾಂಬೆ ದರ್ಶನಕ್ಕೆ ಚಿಂತನೆ ನಡೆಸಲಾಗಿದೆ. ಅಂದರೆ, ಅದರ ಅನ್ವಯ ವೈಟಿಂಗ್ ರೂಂ ಮಾಡಿ ತಂಡ ತಂಡವಾಗಿ ಭಕ್ತರನ್ನು ಬಿಡಲು ತಯಾರಿ ನಡೆಸಲಾಗಿದೆ. ಕೊವಿಡ್ ಕಾರಣದಿಂದ ಸಾಮಾಜಿಕ ಅಂತರ ಕಾಪಾಡಲು ತಿರುಪತಿ ಮಾದರಿ ಅನುಸರಿಸಲು ಚಿಂತನೆ ನಡೆಸಲಾಗಿದೆ.

Hassan: ತಿರುಪತಿ ಮಾದರಿಯಲ್ಲಿ ಹಾಸನಾಂಬೆ ದರ್ಶನಕ್ಕೆ ಚಿಂತನೆ: ಜಿಲ್ಲಾಧಿಕಾರಿ ಆರ್ ಗಿರೀಶ್ ಹೇಳಿಕೆ
ಹಾಸನಾಂಬೆ ದೇವಾಲಯ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 28, 2021 | 8:13 PM

Share

ಹಾಸನ: ತಿರುಪತಿ ಮಾದರಿಯಲ್ಲಿ ಹಾಸನಾಂಬೆ ದರ್ಶನಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹಾಸನದಲ್ಲಿ ಜಿಲ್ಲಾಧಿಕಾರಿ ಆರ್.‌ ಗಿರೀಶ್ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್ 28 ರಂದು ಹಾಸನಾಂಬೆ ಜಾತ್ರಾ ಮಹೋತ್ಸವ ಆರಂಭ ಆಗಲಿರುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ. ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಬಗ್ಗೆ ಮಾಹಿತಿ ಲಭಿಸಿದೆ. ಮುಂದಿನ ವಾರ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಉಸ್ತುವಾರಿ ಸಚಿವರ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ. ಕೊವಿಡ್ ಕಡಿಮೆ ಇದ್ದರೆ ಹಿಂದಿನ‌ ವರ್ಷಗಳಂತೆ ಉತ್ಸವ ನಡೆಯಲಿದೆ ಎಂದು ಹಾಸನದಲ್ಲಿ ಜಿಲ್ಲಾಧಿಕಾರಿ ಆರ್.‌ಗಿರೀಶ್ ಹೇಳಿಕೆ ನೀಡಿದ್ದಾರೆ.

ತಿರುಪತಿ ಮಾದರಿಯಲ್ಲಿ ಹಾಸನಾಂಬೆ ದರ್ಶನಕ್ಕೆ ಚಿಂತನೆ ನಡೆಸಲಾಗಿದೆ. ಅಂದರೆ, ಅದರ ಅನ್ವಯ ವೈಟಿಂಗ್ ರೂಂ ಮಾಡಿ ತಂಡ ತಂಡವಾಗಿ ಭಕ್ತರನ್ನು ಬಿಡಲು ತಯಾರಿ ನಡೆಸಲಾಗಿದೆ. ಕೊವಿಡ್ ಕಾರಣದಿಂದ ಸಾಮಾಜಿಕ ಅಂತರ ಕಾಪಾಡಲು ತಿರುಪತಿ ಮಾದರಿ ಅನುಸರಿಸಲು ಚಿಂತನೆ ನಡೆಸಲಾಗಿದೆ. ಈಗಾಗಲೇ ಸಂಬಂಧಪಟ್ಟ ವಿವಿಧ ಇಲಾಖೆಯ ಸಭೆಯನ್ನು ಕರೆದು ಚರ್ಚಿಸಲಾಗಿದೆ. ಏನೇನು ಕೆಲಸವಾಗಬೇಕು ಹಾಗೂ ಕೆಲಸ ಟೆಂಡರ್ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ವಾರ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಅಂತಿಮ ನಿರ್ಧಾರ ಮಾಡಲಾಗುತ್ತದೆ. ಕೊವಿಡ್ ಕಡಿಮೆ ಇದ್ದರೆ ಹಿಂದಿನ‌ ವರ್ಷಗಳಂತೆ ಹಾಸನಾಂಬೆ ಉತ್ಸವ ನಡೆಯಲಿದೆ. ಕೊವಿಡ್ ಸ್ವರೂಪವನ್ನು ನೋಡಿ ಸಿದ್ದತೆಗಳನ್ನ ನಡೆಸಲಾಗುತ್ತದೆ. ಅಕ್ಟೋಬರ್ ತಿಂಗಳಲ್ಲಿ ಕಡಿಮೆಯಾದ್ರೆ ಪ್ರತೀ ವರ್ಷದಂತೆ ಆಚರಣೆಯಾಗುತ್ತದೆ . ಕೊವಿಡ್ ಕಾರಣದಿಂದ ಬೇರೆ ಬೇರೆ ಮಾದರಿಯಲ್ಲಿ ದರ್ಶನಕ್ಕೆ ಚಿಂತಿಸಲಾಗುತ್ತದೆ. ಸದ್ಯ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ. ಎಂದಿನಂತೆ ಜಾತ್ರೆ ಆಚರಿಸುವ ಆಶಾಭಾವನೆ ನಮ್ಮಲ್ಲಿದೆ ಎಂದು ಡಿಸಿ ಆರ್. ಗಿರೀಶ್ ಹೇಳಿದ್ದಾರೆ.

ಇದನ್ನೂ ಓದಿ: Bengaluru: ಒಂದೇ ಕಾಲೇಜಿನ 54 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಭಾರತ ಮತ್ತೊಮ್ಮೆ ಸಾಧನೆ; ಸೋಮವಾರವೂ 1 ಕೋಟಿ ಡೋಸ್ ಲಸಿಕೆ ನೀಡಿಕೆ

Published On - 8:12 pm, Tue, 28 September 21

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ