AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ವರುಣಾರ್ಭಟ: 15 ಕಡೆ ಭೂಕುಸಿತ, ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್

ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಏಳು ಕಿಲೋಮೀಟರ್ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಪ್ರಯಾಣಿಕರ ಮತ್ತು ಸರಕು ರೈಲುಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ರೈಲ್ವೆ ಇಲಾಖೆ ಸಿಬ್ಬಂದಿಯಿಂದ ದುರಸ್ತಿ ಕಾರ್ಯ ನಡೆದಿದೆ.

ಹಾಸನದಲ್ಲಿ ವರುಣಾರ್ಭಟ: 15 ಕಡೆ ಭೂಕುಸಿತ, ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್
ಭಾರೀ ಮಳೆಗೆ ಮಣ್ಣು ಕುಸಿತ
ಮಂಜುನಾಥ ಕೆಬಿ
| Edited By: |

Updated on:Aug 17, 2025 | 9:42 AM

Share

ಹಾಸನ, ಆಗಸ್ಟ್​ 17: ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣಾರ್ಭಟ (rain) ಜೋರಾಗಿದೆ. ಭಾರೀ ಮಳೆಯಿಂದಾಗಿ  7 ಕಿ.ಮೀ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ. ಸಕಲೇಶಪುರ ತಾಲೂಕಿನ ಎಡಕುಮಾರಿ ಸಮೀಪ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದ್ದು, ಬೆಂಗಳೂರು ಟು ಮಂಗಳೂರು (Bengaluru t0 Mangaluru) ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್ ಆಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿಯಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತವಾಗಿದ್ರಿಂದಾಗಿ ಮರ, ಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

7 KM ವ್ಯಾಪ್ತಿಯಲ್ಲಿ 15 ಕಡೆ ಭೂಕುಸಿತ

ಹಾಸನದ ಸಕಲೇಶಪುರದ 7 ಕಿ.ಮೀ ವ್ಯಾಪ್ತಿಯಲ್ಲೇ 15 ಕಡೆ ಭೂಕುಸಿತವಾಗಿದೆ. ಎಡಕುಮಾರಿ ಸಮೀಪ ಹಳಿ ಮೇಲೆ ಮಣ್ಣು ಕುಸಿದು ಬೆಂಗಳೂರು ಟು ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಸ್ಥಗಿತವಾಗಿದೆ.  ಮತ್ತೊಂದೆಡೆ ಇದೇ ಮಾರನಹಳ್ಳಿ ಸಮೇಪ ಕಾರಿನ ಮೇಲೆ ಬೃಹತ್‌ ಮರವೊಂದು ಬಿದ್ದಿದೆ. ಮಳೆ ನಡುವೆಯೂ ಪೊಲೀಸರು ಕಾರಿನಲ್ಲಿದ್ದವರನ್ನ ರಕ್ಷಿಸಿದ್ದಾರೆ.

ಇದನ್ನೂ ಓದಿ: ಶಿರಾಡಿಘಾಟ್ ಜಲಪಾತವೊಂದರ ಬಳಿ ಕೆಳಗೆ ಉರುಳಿಬಿದ್ದ ಕಾರು, ಅದೃಷ್ಟವಶಾತ್ ಪ್ರಯಾಣಿಕರು ಸೇಫ್

ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ಕೊಪ್ಪದ ಭೈರೇದೇವರು ಗ್ರಾಮದಲ್ಲಿ ಮರ ಬಿದ್ದು ಮನೆಗೆ ಹಾನಿಯಾಗಿದೆ. ಭಾಸ್ಕರ್ ಭಟ್ ಎಂಬುವರ ಮನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಮುಂದಿನ ನಾಲ್ಕು ದಿನ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆಯಿದ್ದು, ಪ್ರವಾಸಿಗರು ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಅತ್ತ ಕೋಲಾರ, ವೇಮಗಲ್, ಮಾಲೂರಿನಲ್ಲಿ ಮಳೆಯಾಗಿದೆ. ಆಗಸ್ಟ್ 20ರವರೆಗೆ ರಾಜ್ಯಾದ್ಯಂತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲಪ್ರಭಾ ನದಿ ನೀರಿನ ರಭಸಕ್ಕೆ ಒಡೆದ ಸೇತುವೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೇವಿನಾಳ, ಸುರಳಿಕಲ್ ಮಧ್ಯೆ, ಮಲಪ್ರಭಾ ನದಿಗೆ ಅಡ್ಡಲಾಗಿ ಬ್ರಿಡ್ಜ್​ ಬಳಿ ತಡೆಗೋಡೆ‌ ಕಟ್ಟಲಾಗಿದೆ. ಆದರೆ ಮಳೆ ಹೆಚ್ಚಾಗಿದ್ದು, ಮಲಪ್ರಭಾ ನದಿಯಿಂದ ನೀರು ಶರವೇಗದಲ್ಲಿ ಮುನ್ನುಗ್ಗುತ್ತಿದೆ. ಇದರಿಂದಾಗಿ ತಡೆಗೋಡೆ ಒಡೆದು ಹೊಲ, ಗದ್ದೆಗಳಿಗೆ ನೀರು ನುಗ್ಗಿದೆ. ಕಬ್ಬು ಸೇರಿದಂತೆ ಇತರೆ ಬೆಳೆಗಳು ಸಂಪೂರ್ಣ ಜಲಾವೃತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:52 am, Sun, 17 August 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ