AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಕಾಫಿ ಬೆಳೆಗಾರರ ಕಣ್ಣಲ್ಲಿ ನೀರು ತರಿಸಿದ ಮಳೆ, ಕೊಳೆ ರೋಗಕ್ಕೆ ತುತ್ತಾದ ಕಾಫಿ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಕಾಲಿಕ ಮಳೆಯಿಂದ ಕಾಫಿ, ಅಡಿಕೆ, ಕಾಳುಮೆಣಸು ಬೆಳೆಗಳು ಹಾನಿಗೊಳಗಾಗಿವೆ. ಕೊಳೆ ರೋಗದ ಹರಡುವಿಕೆಯಿಂದ ಫಸಲು ನಷ್ಟವಾಗುತ್ತಿದೆ. ಕಳೆದ ವರ್ಷದ ಅತಿವೃಷ್ಟಿಯಿಂದ ಚೇತರಿಸಿಕೊಳ್ಳುತ್ತಿದ್ದ ರೈತರು ಈಗ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರೀ ಮಳೆಯಿಂದಾಗಿ ರಸ್ತೆಗಳು ಕುಸಿತ ಸೇರಿದಂತೆ ಹಲವು ಸಮಸ್ಯೆಗಳನ್ನು ರೈತರು ಎದುರಿಸುವಂತಾಗಿದೆ.

ಹಾಸನ: ಕಾಫಿ ಬೆಳೆಗಾರರ ಕಣ್ಣಲ್ಲಿ ನೀರು ತರಿಸಿದ ಮಳೆ, ಕೊಳೆ ರೋಗಕ್ಕೆ ತುತ್ತಾದ ಕಾಫಿ
ಕಾಫಿ ಬೆಳೆ
ಮಂಜುನಾಥ ಕೆಬಿ
| Edited By: |

Updated on: Jun 05, 2025 | 8:14 AM

Share

ಹಾಸನ, ಜೂನ್​ 05: ಈ ವರ್ಷ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿದ ಮುಂಗಾರು ಪೂರ್ವ ಭಾರೀ ಮಳೆ (rain) ಕಾಫಿ ಬೆಳೆಗಾರರನ್ನ (Coffee growers) ಸಂಕಷ್ಟಕ್ಕೆ ಸಿಲುಕಿಸಿದೆ. ಅವಧಿಗೆ ಮುನ್ನವೇ ಆರ್ಭಟಿಸಿದ ಮುಂಗಾರು, ಮೇ ಅಂತ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದು ಫಸಲು ಕಟ್ಟೋ ವೇಳೆಯಲ್ಲೇ ಕೊಳೆ ರೋಗ ಅಂಟಿ ಕಾಫಿಗೆ ಕಂಟಕ ಎದುರಾಗಿದೆ. ಕಾಳುಮೆಣಸು, ಅಡಿಕೆ ಸೇರಿ ಹಲವು ಬೆಳೆಗಳಿಗೆ ಮಳೆ ಆಘಾತ ತಂದಿದೆ. ಇನ್ನು ಕಾಫಿಗೆ ಉತ್ತಮ ಬೆಳೆ ಇರುವ ಸಂದರ್ಭದಲ್ಲೇ ಮಳೆಯಿಂದ ಹಾನಿಯಾಗುವ ಆತಂಕ ಎದುರಾಗಿರುವುದು ಬೆಳೆಗಾರರನ್ನು ಕಂಗೆಡಿಸಿದೆ.

ಕಾಫಿ ಬೆಳೆಗಾರರ ಕಣ್ಣಲ್ಲಿ ನೀರು ತರಿಸಿದ ಮಳೆ

ಜಿಲ್ಲೆಯ ಮಲೆನಾಡು ಭಾಗದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಸುರಿದ ಮುಂಗಾರು ಮಳೆ ದೊಡ್ಡ ಅನಾಹುತ ಸೃಷ್ಟಿಸಿದೆ. ಸತತ 10 ದಿನಗಳು ಸುರಿದ ಭಾರೀ ಮಳೆಗೆ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕಿನ ಕಾಫಿ ತೋಟಗಳಲ್ಲಿ ಕಾಫಿ ಫಸಲು ತೆನೆಕಟ್ಟುವ ವೇಳೆಯಲ್ಲೇ ಕೊಳೆಯುವ ಸ್ಥಿತಿ  ನಿರ್ಮಾಣವಾಗಿದೆ. ನಿರಂತರ ಮಳೆಯಿಂದ ಹೆಚ್ಚಾದ ಶೀತದಿಂದ ಗೊಂಚಲು ಕೊಳೆ ರೋಗದಿಂದ ಕಾಫಿ ಬೆಳೆಗಾರರ ಕಣ್ಣಲ್ಲಿ ನೀರು ತರಿಸುತ್ತಿದೆ.

ಇದನ್ನೂ ಓದಿ: ಶಿರಾಡಿ, ಚಾರ್ಮಾಡಿ, ಶಿರೂರಿನಲ್ಲಿ ಭೂಕುಸಿತ: ಉತ್ತರ ಕನ್ನಡದಲ್ಲಿ ಹೆದ್ದಾರಿಯ 19 ಕಡೆ ವಾಹನ ನಿಲುಗಡೆ ಬಂದ್

ಇದನ್ನೂ ಓದಿ
Image
Karnataka Rains: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ
Image
ಬೆಂಗಳೂರು ಕಾಲ್ತುಳಿತದಲ್ಲಿ ಮೃತಪಟ್ಟವರು ಯಾರೆಲ್ಲ? ಇಲ್ಲಿದೆ ಪೂರ್ಣ ವಿವರ
Image
ಭೂಕುಸಿತ ಭೀತಿ: ಉತ್ತರ ಕನ್ನಡದಲ್ಲಿ ಹೆದ್ದಾರಿಯ 19 ಕಡೆ ವಾಹನ ನಿಲುಗಡೆ ಬಂದ್
Image
ಬೆಂಗಳೂರು ಮಂಗಳೂರು ವಾಹನ ಸವಾರರೇ ಗಮನಿಸಿ: ಶಿರಾಡಿ ಘಾಟ್​ನ ಹಲವೆಡೆ ಭೂಕುಸಿತ

ಕಳೆದ 20 ವರ್ಷಗಳಲ್ಲೇ ಅತ್ಯಧಿಕ ಕಾಫಿ ರೇಟ್ ಪಡೆದು ಕಳೆದ ವರ್ಷದ ಅತಿವೃಷ್ಟಿಯಿಂದ ಉಳಿದ ಬೆಳೆಯಿಂದಲೇ ಒಂದಷ್ಟು ಲಾಭ ನೋಡಿದ್ದ, ಬೆಳೆಗಾರರು ಈ ವರ್ಷವಾದರೂ ಉತ್ತಮ ಬೆಲೆ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ಇರುವಾಗಲೇ ಮೊದಲ ಮಳೆಯೇ ದೊಡ್ಡ ಹೊಡೆತ ನೀಡಿರುವುದು ಬೆಳೆಗಾರರ ನಿದ್ದೆಗೆಡಿಸಿದೆ.

ಶೇಕಡ 50 ರಷ್ಟು ಬೆಲೆ ನಷ್ಟ

ಕಳೆದ ವರ್ಷ ಸುದೀರ್ಘ ಅವಧಿಗೆ ಮಳೆ ಸುರಿದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಕಾಫಿ ಬೆಳೆಗೆ ದೊಡ್ಡ ಆಘಾತವಾಗಿ ಶೇಕಡ 50 ರಷ್ಟು ಬೆಲೆ ನಷ್ಟವಾಗಿತ್ತು. ಆದರೆ ಉತ್ತಮ ಬೆಲೆಯಿಂದ ಕಾಫಿ ಬೆಳೆಗಾರರು ಕೊಂಚ ನಿರಾಳವಾಗಿದ್ದರು. ಈ ವರ್ಷ ಮಾತ್ರ ಮೇ ಅಂತ್ಯದಲ್ಲಿ ಅಬ್ಬರಿಸಿದ ಮುಂಗಾರು ಪೂರ್ವ ಮಳೆಯಿಂದ ಬೆಳೆಗಾರರು ಆಘಾತಗೊಂಡಿದ್ದಾರೆ. ಇನ್ನೊಂದೆಡೆ ಕಾಳು ಮೆಣಸಿಗೂ ಮಳೆ ಆಘಾತ ನೀಡಿದೆ. ಮಳೆ ಹೆಚ್ಚಾಗಿದ್ದರಿಂದ ಗಿಡದಲ್ಲಿಯೇ ಮೆಣಸು ಬಳ್ಳಿಗಳು ಕೊಳೆಯುತ್ತಿವೆ. ಅಡಿಕೆ ಫಸಲು ಕೂಡ ಸಂಪೂರ್ಣ ನಾಶವಾಗಿದೆ.

ಜಿಲ್ಲೆಯ ಆಲೂರು, ಬೇಲೂರು, ಸಕಲೇಶಪುರದಲ್ಲಿ ಅತಿ ಹೆಚ್ಚಿನ ಮಳೆ ಸುರಿದು ಅಪಾರ ಪ್ರಮಾಣದ ಹಾನಿಯಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದೆಡೆ ಶಿರಾಡಿಘಾಟ್​ನಲ್ಲಿ ರಸ್ತೆ ಕುಸಿತ, ಮತ್ತೊಂದೆಡೆ ಬೆಳೆನಾಶ, ಮಲೆನಾಡಿ ಭಾಗದ ಜನರು ಅಕ್ಷರಶಃ ಮೊದಲ ಮಳೆಗೆ ಹೈರಾಣಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮಂಗಳೂರು ವಾಹನ ಸವಾರರೇ ಗಮನಿಸಿ: ಶಿರಾಡಿ ಘಾಟ್ ರಸ್ತೆಯ ಹಲವೆಡೆ ಭೂಕುಸಿತ

ಒಟ್ಟಿನಲ್ಲಿ ಕಳೆದ ವರ್ಷ ಕೂಡ ಅತಿವೃಷ್ಟಿಯಿಂದ ಉಂಟಾಗಿದ್ದ ಹಾನಿಯಿಂದ ಉಳಿದ ಬೆಳೆಗಳಿಂದ ಹೇಗೋ ಒಂದಷ್ಟು ಆದಾಯ ಮಾಡಿಕೊಂಡಿದ್ದ ಕಾಫಿ ಬೆಳೆಗಾರರು, ಈ ವರ್ಷ ಮೊದಲ ಮಳೆಗೆ ಹಾನಿಯಾಗುವ ಆತಂಕದಲ್ಲಿದ್ದು, ಇನ್ನೂ ಮೂರ್ನಾಲ್ಕು ತಿಂಗಳು ಸುರಿಯುವ ಮಳೆ ಮತ್ತಿನ್ನೇನು ಅವಾಂತರ ಮಾಡುತ್ತೆ ಎಂಬ ಆತಂಕದಲ್ಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ