AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ಮೇಲೆ ಮಚ್ಚಿನಿಂದ ಹಲ್ಲೆ; ವಿಡಿಯೋ ವೈರಲ್

ಕೈಯಲ್ಲಿ ಕತ್ತಿ ಹಿಡಿದು ರಸ್ತೆಯಲ್ಲಿ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೆಕ್ಯಾನಿಕ್ ಶಿರು ಎಂಬಾತನ ಮೇಲೆ ಗಂಭೀರ ಹಲ್ಲೆ ನಡೆದಿದೆ.

ಹಾಸನದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ಮೇಲೆ ಮಚ್ಚಿನಿಂದ ಹಲ್ಲೆ; ವಿಡಿಯೋ ವೈರಲ್
ಮಚ್ಚಿನಿಂದ ಹಲ್ಲೆ
TV9 Web
| Edited By: |

Updated on: Aug 29, 2021 | 10:11 AM

Share

ಹಾಸನ: ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಹಾಸನ ನಗರದ ರಾಜಕುಮಾರ್ ಬಡಾವಣೆಯ 80 ಅಡಿ ರಸ್ತೆಯಲ್ಲಿ ನಡೆದಿದೆ. ಮೂವರು ಯುವಕರ ಮೇಲೆ ಹಲ್ಲೆ ನಡೆದಿದ್ದು, ಕೈಯಲ್ಲಿ ಕತ್ತಿ ಹಿಡಿದು ರಸ್ತೆಯಲ್ಲಿ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೆಕ್ಯಾನಿಕ್ ಶಿರು ಎಂಬಾತನ ಮೇಲೆ ಗಂಭೀರ ಹಲ್ಲೆ ನಡೆದಿದೆ. ಹಲ್ಲೆ ಮಾಡಿದ ಆರೋಪಿ ಶಾಹೀದ್ ಎಂಬುವವನು ಪರಾರಿಯಾಗಿದ್ದಾನೆ.

ಕೈಯಲ್ಲಿ ಕತ್ತಿ ಹಿಡಿದು ರಸ್ತೆಯಲ್ಲಿ ಹಲ್ಲೆ ಮದ್ಯದ ಅಮಲಿನಲ್ಲಿ ಪುಂಡರು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿನಿಮೀಯ ರೀತಿಯಲ್ಲಿ ಓಡಿ ಬಂದ ಪುಂಡರು ಕಬ್ಬಿಣದ ರಾಡ್​ನಿಂದ ಯುವಕರಿಗೆ ಹಿಗ್ಗಾಮುಗ್ಗಾ ಹೊಡೆದಿದ್ದಾರೆ. ಹಲ್ಲೆಯಿಂದ ಇಬ್ಬರು ಯುವಕರ ಮುಖಕ್ಕೆ ಗಾಯವಾಗಿದ್ದು, ಹಲ್ಲೆ ನಡೆಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವಕರು ಗುರಾಯಿಸಿದರು ಅಂತ ನೆಪ ಹೇಳಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ. ಸದ್ಯ ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ವೃದ್ಧನ ಅಡ್ಡಗಟ್ಟಿ ದರೋಡೆ ರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ 65 ವರ್ಷದ ವ್ಯಕ್ತಿಯ ಮೇಲೆ ಇದ್ದಕ್ಕಿದ್ದಂತೆ ದಾಳಿ ಮಾಡಿದ ದರೋಡೆಕೋರರು ಅವರ ಬಳಿಯಿದ್ದ ಹಣವನ್ನೆಲ್ಲ ದೋಚಿಕೊಂಡು ಓಡಿಹೋಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ನಡೆದುಕೊಂಡು ಹೋಗುವಾಗ ಹಿಂದಿನಿಂದ ಬಹಳ ದೂರ ಹಿಂಬಾಲಿಸಿದ ಇಬ್ಬರು ಅಪರಿಚಿತರು ಆ ವ್ಯಕ್ತಿಯ ಕುತ್ತಿಗೆಯನ್ನು ಹಿಡಿದು, ಆತನ ಕೈಲಿದ್ದ ಬ್ಯಾಗ್ನೊಂದಿಗೆ ಪರಾರಿಯಾಗಿದ್ದಾರೆ. ಬೆಳಗಿನ ಜಾವ 3.30ಕ್ಕೆ ರಾಮ್ ನಿವಾಸ್ ಎಂಬ ವ್ಯಕ್ತಿ ತನ್ನ ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತರು ದಾಳಿ ನಡೆಸಿದ್ದಾರೆ. ಅವರು ತಮ್ಮ ಮನೆ ತಲುಪುವ ಸ್ವಲ್ಪ ಹೊತ್ತಿನ ಮೊದಲು ಈ ಘಟನೆ ನಡೆದಿದೆ. ಹಿಂದಿನಿಂದ ಬಂದ ಇಬ್ಬರ ರಾಮ್ ಅವರ ಕುತ್ತಿಗೆಯನ್ನು ಹಿಡಿದು, ಅವರ ಕೈಲಿದ್ದ ಬ್ಯಾಗ್ ಕಸಿದುಕೊಂಡು ಓಡಿಹೋಗಿದ್ದಾರೆ. ಈ ಘಟನೆ ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಇದನ್ನೂ ಓದಿ

ಹಳೇ ಚಾಳಿ ಮುಂದುವರಿಸಿದ ತಾಲಿಬಾನ್​; ಗಾಯಕನ ಹತ್ಯೆ

ಅಮ್ಮನ ಜತೆ ಸರತಿ ಸಾಲಿನಲ್ಲಿ ಸಾಗುತ್ತಿರುವ ಬಾತುಕೋಳಿ ಮರಿಗಳು; ಅಪರೂಪದ ದೃಶ್ಯ ಕ್ಯಾಮರಾದಲ್ಲಿ ಸೆರೆ

(hassan man has assaulted a youth and this Video Viral on social media)

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್