AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್: ಪರ ಪುರುಷನ ಮನೆಯಲ್ಲಿ ಪತ್ತೆ

ಮದುವೆಗೆ ಬಂದಿದ್ದ ಮಹಿಳೆ ಕಾಣೆಯಾಗಿ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಸನ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆ ಆಗಿದ್ದಾರೆ. ಪತಿಯ ಸ್ನೇಹಿತನ ಮನೆಯಲ್ಲಿಯೇ ಮಹಿಳೆ ಸಿಕ್ಕಿದ್ದು, ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು ಎನ್ನಲಾಗಿದೆ.

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್: ಪರ ಪುರುಷನ ಮನೆಯಲ್ಲಿ ಪತ್ತೆ
ನಾಪತ್ತೆಯಾಗಿದ್ದ ಮಹಿಳೆ ಪತ್ತೆ
ಮಂಜುನಾಥ ಕೆಬಿ
| Edited By: |

Updated on:Feb 15, 2026 | 7:37 AM

Share

ಹಾಸನ, ಫೆಬ್ರವರಿ 15: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದ್ದು, ತುಮಕೂರು ಜಿಲ್ಲೆ ಕುಣಿಗಲ್​​​ನಲ್ಲಿ‌ ಪ್ರಿಯಾಂಕಾ ಪತ್ತೆಯಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಕುಣಿಗಲ್​​ನ ಗೊಟ್ಟಿಕೆರೆಯಲ್ಲಿ ಡೇವಿಡ್ ಎಂಬಾತನ ಮನೆಯಲ್ಲಿ ಮಹಿಳೆಯನ್ನು ಪೊಲೀಸರು ಪತ್ತೆ ಮಾಡಿದ್ದು, ಬೇಲೂರು ಪೊಲೀಸರಿಗೆ ಸ್ಥಳೀಯ ಪೊಲೀಸರು ಕೂಡ ಈ ವೇಳೆ ಸಾಥ್​ ನೀಡಿದ್ದಾರೆ.  ಡೇವಿಡ್​​ ಮನೆಯಲ್ಲಿಯೇ ಪ್ರಿಯಾಂಕಾ ಎರಡು ದಿನಗಳಿಂದ ವಾಸವಿದ್ದರು ಎನ್ನಲಾಗಿದ್ದು, ಅನೈತಿಕ ಸಂಬಂಧ ಶಂಕೆ ವ್ಯಕ್ತವಾಗಿದೆ.

ಪತಿ ಸ್ನೇಹಿತನ ಮನೆಯಲ್ಲಿದ್ದ ಪ್ರಿಯಾಂಕಾ

ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತೆ ಸೀನ್ ಕ್ರಿಯೇಟ್​​ ಮಾಡಿ ಪ್ರೀಯಾಂಕಾ ನಾಪತ್ತೆಯಾಗಿದ್ದ ಹಿನ್ನೆಲೆ ಪ್ರಕರಣ ಬೇಲೂರು ಪೊಲೀಸರಿಗೆ ತಲೆನೋವು ತಂದಿತ್ತು. ಆದರೆ ಪೊಲೀಸರ ಸತತ ಪ್ರಯತ್ನದಿಂದ ಪತಿಯ ಸ್ನೇಹಿತನಾಗಿರುವ ಡೇವಿಡ್​​ ಮನೆಯಲ್ಲಿ ಕೊನೆಗೂ ಮಹಿಳೆಯ ಪತ್ತೆಯಾಗಿದೆ. ಕುಣಿಗಲ್ ಪಟ್ಟಣದ ಗೊಟ್ಟಿಕೆರೆಯಲ್ಲಿ ವಾಸವಾಗಿದ್ದ ಡೇವಿಡ್ ಪಟ್ಟಣದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ತನಿಖೆ ವೇಳೆ ಸಿಕ್ಕಿದೆ.

ಇದನ್ನೂ ಓದಿ: ಮದುವೆಗೆಂದು ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ; ಬೇಲೂರಿನ ಕಲ್ಕೆರೆ ಸಮೀಪ ಒಳ ಉಡುಪು, ಚಪ್ಪಲಿ, ಬ್ಯಾಗ್ ಪತ್ತೆ

ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕಾ ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆಂದು ಬಂದಿದ್ದು, ಬಳಿಕ ಕಾಣೆಯಾಗಿದ್ದಳು. ಫೆಬ್ರವರಿ 12ರ ರಾತ್ರಿ 8 ಗಂಟೆ ಸುಮಾರಿಗೆ ಹಾಸನ ಜಿಲ್ಲೆಯ ಬೇಲೂರು ಬಸ್ ನಿಲ್ದಾಣದ ಬಳಿಯಿಂದ ಈಕೆ ನಿಗೂಢವಾಗಿ ನಾಪತ್ತೆಯಾಗಿದ್ದಳು. ಘಟನೆಗೂ ಮುನ್ನ ಸಂಜೆ 7.30ರ ಸುಮಾರಿಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕಾ, ‘ಯಾರೋ ಒಬ್ಬರ ಜೊತೆಯಲ್ಲಿ ಸಿಕ್ಕಿದ್ದೇನೆ’ ಎಂದು ಹೇಳಿ ಫೋನ್ ಕಟ್ ಮಾಡಿದ್ದಳು. ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬೇಲೂರು ತಾಲೂಕಿನ ಕಲ್ಕೆರೆ ಸಮೀಪ ಮಹಿಳೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿದ್ದು, ಪ್ರಕರಣದ ಬಗ್ಗೆ ಮತ್ತಷ್ಟು ಸಂಶಯ ಮೂಡುವಂತೆ ಮಾಡಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:15 pm, Sat, 14 February 26

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು