ದಯಾಮರಣ ಕೋರಿ ಹಾಸನದ 300ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಂದ ರಾಷ್ಟ್ರಪತಿ, ಸಿಎಂಗೆ ಪತ್ರ

ರಾಜ್ಯ ಸರ್ಕಾರದ ಇಬ್ಬಂದಿ ನೀತಿಗೆ ಹಾಸನದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸೋಮವಾರದಿಂದ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಅತಿಥಿ ಉಪನ್ಯಾಸಕರು ಎಚ್ಚರಿಕೆ ನೀಡಿದ್ದಾರೆ.

ದಯಾಮರಣ ಕೋರಿ ಹಾಸನದ 300ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಂದ ರಾಷ್ಟ್ರಪತಿ, ಸಿಎಂಗೆ ಪತ್ರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
| Updated By: ಸುಷ್ಮಾ ಚಕ್ರೆ

Updated on: Jan 22, 2022 | 6:51 PM

ಹಾಸನ: ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಇಲಾಖೆ ಜ. 14ರಂದು ಹೊರಡಿಸಿರುವ ಅವೈಜ್ಞಾನಿಕ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿ ಹಲವು ದಿನಗಳಿಂದ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ದಯಾಮರಣ ಕೋರಿ ಹಾಸನದ 300ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಕೆಲವು ದಿನಗಳಿಂದ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು ಅಂಚೆ ಕಚೇರಿಗೆ ಪತ್ರ ಪೋಸ್ಟ್ ಮಾಡಿದ್ದಾರೆ. ರಾಜ್ಯ ಸರ್ಕಾರದ ಇಬ್ಬಂದಿ ನೀತಿಗೆ ಹಾಸನದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸೋಮವಾರದಿಂದ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಅತಿಥಿ ಉಪನ್ಯಾಸಕರು ಎಚ್ಚರಿಕೆ ನೀಡಿದ್ದಾರೆ.

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಸರ್ಕಾರ ಪರಿಗಣಿಸಿದ್ದು, ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಈ ಹಿಂದೆ ಮನವಿ ಮಾಡಿಕೊಂಡಿದ್ದರು. ಸರ್ಕಾರ ಅತಿಥಿ ಉಪನ್ಯಾಸಕರ ಆಗ್ರಹಗಳನ್ನು ಪರಿಗಣಿಸಿದ್ದು, ಕ್ರಮಗಳನ್ನು ಕೈಗೊಂಡಿದೆ. ಇದರಲ್ಲಿ ಉಪನ್ಯಾಸಕರ ಗೌರವಧನದಲ್ಲಿ ಶೇ. 100ರಷ್ಟು ಹೆಚ್ಚಳವೂ ಸೇರಿದೆ. ಅರ್ಹ ಅತಿಥಿ ಉಪನ್ಯಾಸಕರ ಸಂಬಳ 2ರಿಂದ 3 ಪಟ್ಟು ಹೆಚ್ಚಳ ಮಾಡಲಾಗಿದೆ. 11ರಿಂದ ರೂ.13 ಸಾವಿರ ಸಂಬಳ ಪಡೆಯುತ್ತಿದ್ದ ಅತಿಥಿ ಉಪನ್ಯಾಸಕರು ಇನ್ನು ಮುಂದೆ ರೂ. 32 ಸಾವಿರದವರೆಗೆ ವೇತನ ಪಡೆಯಲಿದ್ದಾರೆ. ಆದರೂ ಪ್ರತಿಭಟನೆ ನಡೆಸಿದರೆ ಹೇಗೆ? ಎಂದು ಸಚಿವರು ಪ್ರಶ್ನಿಸಿದ್ದರು.

ನೇರ ನೇಮಕಾತಿಯಾದ ಉಪನ್ಯಾಸಕರಿಗೆ ಮಾತ್ರ ಸೇವಾ ಭದ್ರತೆ ಇರಲಿದೆ. 8 ಗಂಟೆ ಮಾತ್ರ ಪಾಠ ಮಾಡುತ್ತಿದ್ದ ಉಪನ್ಯಾಸಕರಿಗೆ ಇನ್ನಷ್ಟು ಪಾಠಕ್ಕೆ ಅವಕಾಶ ಮಾಡಿಕೊಡುತ್ತಿದ್ದೇವೆ. 13 ಸಾವಿರ ಅತಿಥಿ ಉಪನ್ಯಾಸಕರಲ್ಲಿ ಕೇವಲ ನಾಲ್ಕೂವರೆ ಸಾವಿರ ಮಂದಿ ಮಾತ್ರ ಯುಜಿಸಿ ಪ್ರಕಾರ ಅರ್ಹತೆ ಹೊಂದಿದ್ದಾರೆ. 9 ಸಾವಿರ ಮಂದಿ ಅರ್ಹತೆ ಇರುವವರು ಮತ್ತು 5 ಸಾವಿರ ಮಂದಿ ಅರ್ಹತೆ ಇಲ್ಲವಾದರು ಕೂಡ ನೇಮಕ ಆಗಲಿದ್ದಾರೆಂದು ಸಚಿವ ಅಶ್ವಥ್ ನಾರಾಯಣ ಹೇಳಿದ್ದರು.

ಇದನ್ನೂ ಓದಿ: ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನಿಸಿದ ಸರ್ಕಾರ; ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ

ಶೀಘ್ರ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಸಾಧ್ಯತೆ: ಸಚಿವರ ಜೊತೆ ಸಂಘದ ಪದಾಧಿಕಾರಿಗಳ ಸಭೆ

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ