AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಜೀರ್ಣೋದ್ಧಾರವಾಗದೇ ಅನಾಥ ‌ಸ್ಥಿತಿಯಲ್ಲಿದೆ 900 ವರ್ಷ ಪುರಾತನ ಕೊಂಡಜ್ಜಿ ವರದರಾಜಸ್ವಾಮಿ ದೇವಸ್ಥಾನ

ಹಾಸನ ಸಮೀಪದ ಕೊಂಡಜ್ಜಿ ಗ್ರಾಮದ 900 ವರ್ಷಗಳ ಪುರಾತನ ಹೊಯ್ಸಳ ವಂಶದ ವರದರಾಜಸ್ವಾಮಿ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು ಪುನರ್‌ ನಿರ್ಮಾಣಕ್ಕೆ ಕೈ ಹಾಕಿದವರು ಅರ್ಧಕ್ಕೆ ಬಿಟ್ಟಿರುವುದರಿಂದ ದೇವಾಲಯ ಅನಾಥ ಸ್ಥಿತಿಯಲ್ಲಿದೆ. ದಶಕಗಳಿಂದ ದಯನೀಯ ಸ್ಥಿತಿಯಲ್ಲಿದ್ದ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡುವಲ್ಲಿ ಮುಜರಾಯಿ ಇಲಾಖೆ ಮತ್ತು ಸ್ಥಳೀಯ ಅಧಿಕಾರಿಗಳು ವಿಫಲರಾಗಿದ್ದಾರೆ.

ಹಾಸನ: ಜೀರ್ಣೋದ್ಧಾರವಾಗದೇ ಅನಾಥ ‌ಸ್ಥಿತಿಯಲ್ಲಿದೆ 900 ವರ್ಷ ಪುರಾತನ ಕೊಂಡಜ್ಜಿ ವರದರಾಜಸ್ವಾಮಿ ದೇವಸ್ಥಾನ
ಕೊಂಡಜ್ಜಿ ವರದರಾಜಸ್ವಾಮಿ ದೇವಸ್ಥಾನ
ಆಯೇಷಾ ಬಾನು
|

Updated on: Dec 19, 2023 | 10:51 AM

Share

ಹಾಸನ,ಡಿ.19: ಶಿಲ್ಪಕಲೆಗಳ ತವರೂರು ಎಂದೇ ಕರೆಸಿಕೊಳ್ಳುವ ಹಾಸನ (Hassan) ಜಿಲ್ಲೆಯಲ್ಲಿ ರಾಜ್ಯ ಪುರಾತತ್ವ ಇಲಾಖೆ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಹಾಸನ ಸಮೀಪದ ಕೊಂಡಜ್ಜಿ ಗ್ರಾಮದ 900 ವರ್ಷಗಳ ಪುರಾತನ ಹೊಯ್ಸಳ ವಂಶದ ವರದರಾಜಸ್ವಾಮಿ ದೇವಸ್ಥಾನ (Varadaraja Swami Temple) ಹಾಳಾಗುತ್ತಿದ್ದು ಜೀರ್ಣೋದ್ಧಾರದ ಅವಶ್ಯಕತೆ ಇದೆ. ದಶಕಗಳಿಂದ ದಯನೀಯ ಸ್ಥಿತಿಯಲ್ಲಿದ್ದ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡುವಲ್ಲಿ ಮುಜರಾಯಿ ಇಲಾಖೆ ಮತ್ತು ಸ್ಥಳೀಯ ಅಧಿಕಾರಿಗಳು ವಿಫಲರಾಗಿದ್ದಾರೆ.

ಬೇಲೂರು ದೇವಾಲಯದಲ್ಲಿರಬೇಕಾಗಿದ್ದ ಶ್ರೀ ವರದ ರಾಜಸ್ವಾಮಿಯ ಅದ್ಭುತ ಶಿಲ್ಪಕಲಾ ವೈಭವದ ಮೂರ್ತಿಯು ಕೊಂಡಜ್ಜಿ ದೇವಾಲಯದಲ್ಲಿದೆ. ಪರೂಪದ ಕಪ್ಪು ಕಲ್ಲಿನಿಂದ ಕೆತ್ತಿದ 17 ಅಡಿ ಎತ್ತರದ ಮತ್ತು ಏಕಶಿಲೆಯ ವಿಗ್ರಹಕ್ಕೆ ಹೆಸರುವಾಸಿಯಾದ ಈ ದೇವಾಲಯವು ರಾಜ್ಯದಾದ್ಯಂತ ಅನೇಕ ಭಕ್ತರನ್ನು ಹಾಗೂ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಗರುಡ ವಾಹನ, ಪದ್ಮಾಸನದ ಮೇಲೆ ಶಂಕ, ಚಕ್ರ ಗದಾಧಾರಿ ಕೃಷ್ಣ ಶಿಲೆಯ ವರದರಾಜಸ್ವಾಮಿ ಮೂರ್ತಿಯಿಂದ ಈ ದೇವಸ್ಥಾನ ಹೆಚ್ಚಿನ ಖ್ಯಾತಿ ಪಡೆದಿದೆ. ಆದರೆ ಮುಜರಾಯಿ ಇಲಾಖೆಗೆ ಸೇರಿದ ಈ ದೇವಾಲಯದ ಪುನರ್‌ ನಿರ್ಮಾಣಕ್ಕೆ ಕೈ ಹಾಕಿದವರು ಅರ್ಧಕ್ಕೆ ಬಿಟ್ಟಿರುವುದರಿಂದ ದೇವಾಲಯ ಅನಾಥ ಸ್ಥಿತಿಯಲ್ಲಿದೆ.

ಚುನಾಯಿತ ಪ್ರತಿನಿಧಿಗಳ ಭರವಸೆ ಮೇರೆಗೆ ಜೀರ್ಣೋದ್ಧಾರದ ನೆಪದಲ್ಲಿ ಈ ಹಳೆಯ ದೇವಸ್ಥಾನವನ್ನು ಕೆಡವಲಾಗಿತು. ದುರದೃಷ್ಟವಶಾತ್, ಅಂದಿನಿಂದ ದೇವಾಲಯವು ಸಂಪೂರ್ಣವಾಗಿ ನಿರ್ಲಕ್ಷಿಸಲ್ಪಟ್ಟಿದೆ. ಈವರೆಗೆ 25 ಲಕ್ಷ ರೂಪಾಯಿ ವೆಚ್ಚ ಮಾಡಿ ನವೀಕರಣ ಮಾಡಿದ್ದರೂ ಪ್ರವಾಸಿಗರಿಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ಇಲಾಖೆ ವಿಫಲವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿಂದೆ ನೀಡಿದ ಭರವಸೆಯಂತೆ ನಿಗದಿತ ಸಮಯಕ್ಕೆ ದೇಗುಲವನ್ನು ಪೂರ್ಣಗೊಳಿಸದ ಜನ ಪ್ರತಿನಿಧಿಗಳಿಗೆ ಪ್ರವಾಸಿಗರು ಹಿಡಿಶಾಪ ಹಾಕುತ್ತಿದ್ದಾರೆ. ಮುಂದಿನ ಪೀಳಿಗೆಗೆ ದೇವಾಲಯವನ್ನು ಸಂರಕ್ಷಿಸಿ ಸಂರಕ್ಷಿಸಬೇಕೆಂದು ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ ಕರ್ನಾಟಕದ ಹೊಯ್ಸಳ ದೇವಾಲಯಗಳು, ಮೋದಿ ಸಂತಸ

ಪುರಾಣಗಳ ಪ್ರಕಾರ, ಬೇಲೂರಿನ ಚನ್ನಕೇಶವ ದೇವಾಲಯದ ನಿರ್ಮಾಣದ ಸಮಯದಲ್ಲಿ ವರದರಾಜಸ್ವಾಮಿ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕಾಗಿತ್ತು. ವರದರಾಜಸ್ವಾಮಿ ವಿಗ್ರಹದ ಎತ್ತರದ ಕಾರಣದಿಂದಾಗಿ ಹೊಯ್ಸಳ ರಾಜರು ಮತ್ತು ಶಿಲ್ಪಿಗಳು ಬೇಲೂರು ದೇವಸ್ಥಾನದಲ್ಲಿ ಈ ಮೂರ್ತಿ ಸ್ಥಾಪಿಸಲು ನಿರಾಕರಿಸಿದ್ದರು. ಅಂತಿಮವಾಗಿ, ಆಗಿನ ಹೊಯ್ಸಳ ರಾಜನು ಕೊಂಡಜ್ಜಿ ಗ್ರಾಮದಲ್ಲಿ ವಿಗ್ರಹವನ್ನು ಸ್ಥಾಪಿಸಲು ನಿರ್ಧರಿಸಿದನು.

ದೇವಾಲಯವನ್ನು ಅಧಿಕಾರಿಗಳು ನಿರ್ಲಕ್ಷಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಇತಿಹಾಸಕಾರ ಮತ್ತು ನಿವೃತ್ತ ಸರ್ಕಾರಿ ಅಧಿಕಾರಿ ರಂಗನಾಥ್, ಅಪರೂಪದ ಕಲ್ಲಿನಿಂದ ಕೆತ್ತಲಾದ ಅತ್ಯಂತ ಅಪರೂಪದ ಎತ್ತರದ ವಿಗ್ರಹವನ್ನು ರಕ್ಷಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಹಾಸನಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?