AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಆಸ್ತಿ ಕಬಳಿಸಲು ಬದುಕಿದ ವೃದ್ಧೆ ಮರಣ ಪ್ರಮಾಣ ಪತ್ರ ಮಾಡಿಸಿದ ಸಂಬಂಧಿಕರು, ದೂರು ದಾಖಲಿಸಿದ ಮಗ

ಆಸ್ತಿ ಕಬಳಿಸುವ ಉದ್ದೇಶದಿಂದ ಆರೋಪಿಗಳು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮುದಿಗೆರೆ ಗ್ರಾಮದಲ್ಲಿ ಬೇಲೂರು ತಹಶೀಲ್ದಾರ್ ಕಚೇರಿಯಿಂದಲೇ ಬದುಕಿರುವ ವೃದ್ಧೆಯ ಮರಣ ಪತ್ರ ಪಡೆದಿದ್ದಾರೆ.

ಹಾಸನ: ಆಸ್ತಿ ಕಬಳಿಸಲು ಬದುಕಿದ ವೃದ್ಧೆ ಮರಣ ಪ್ರಮಾಣ ಪತ್ರ ಮಾಡಿಸಿದ ಸಂಬಂಧಿಕರು, ದೂರು ದಾಖಲಿಸಿದ ಮಗ
ವೃದ್ಧೆ ಪಾರ್ವತಮ್ಮ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:May 25, 2023 | 6:38 PM

Share

ಮುಖ್ಯಾಂಶಗಳು

  • ಬದುಕಿರುವ ವೃದ್ದೆ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ
  • ಪಾರ್ವತಮ್ಮಗೆ ಇರೋ 32 ಗುಂಟೆ ಜಮೀನು ಕಬಳಿಸಲು ಕೃತ್ಯ
  • ಪಾರ್ವತಮ್ಮ ಪುತ್ರ ಮಲ್ಲೇಶ್ ರಿಂದ ಬೇಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಹಾಸನ: ಆಸ್ತಿ(Property) ಕಬಳಿಸುವ ಉದ್ದೇಶದಿಂದ ಬದುಕಿರುವ ವೃದ್ದೆ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ(Death Certificate) ಮಾಡಿಸಿರುವ ಆರೋಪ ಕೇಳಿಬಂದಿದೆ. ಆಸ್ತಿ ಕಬಳಿಸುವ ಉದ್ದೇಶದಿಂದ ಆರೋಪಿಗಳು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮುದಿಗೆರೆ ಗ್ರಾಮದಲ್ಲಿ ಬೇಲೂರು ತಹಶೀಲ್ದಾರ್ ಕಚೇರಿಯಿಂದಲೇ ಬದುಕಿರುವ ವೃದ್ಧೆಯ ಮರಣ ಪತ್ರ ಪಡೆದಿದ್ದಾರೆ.

ಮುದಿಗೆರೆ ಗ್ರಾಮದ ದಿವಂಗತ ಹುಲೀಗೌಡ ಎಂಬುವವರ ಪತ್ನಿ ಪಾರ್ವತಮ್ಮಗೆ ಸೇರಿದ 32 ಗುಂಟೆ ಜಮೀನು ಪಡೆದುಕೊಳ್ಳಲೆಂದು ಸುಳ್ಳು ದಾಖಲೆಯನ್ನು ಸೃಷ್ಟಿಮಾಡಿ ವೃದ್ಧೆಯ ಸಂಬಂಧಿಕರ ಪುತ್ರರಾದ ಸೋಮಶೇಖರ್ ಮತ್ತು ದಿನೇಶ್ ವೃದ್ದೆ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 2020 ಏಪ್ರಿಲ್ 10 ಪಾರ್ವತಮ್ಮ ಮೃತಪಟ್ಟಿದ್ದಾರೆ ಎಂದು ಏಪ್ರಿಲ್ 20 ರಂದು ನೋಂದಣಿ ಮಾಡಿಸಿದ್ದಾರೆ. ನಂತರ ಅಕ್ಟೋಬರ್ 14 ರಂದು ಪಾರ್ವತಮ್ಮ ಹೆಸರಿಲ್ಲಿ ಬೇಲೂರು ತಹಸಿಲ್ದಾರ್ ಕಚೇರಿಯಿಂದಲೇ ಮರಣ ದೃಢೀಕರಣ ಪತ್ರವನ್ನು ಪಡೆದು ಜೀವನಾಂಶಕ್ಕೆಂದು ಇಟ್ಟುಕೊಂಡಿದ್ದ 32 ಗುಂಟೆ ಜಮೀನನ್ನು ತನ್ನದಾಗಿಸಿಕೊಳ್ಳಲು ಮುಂದಾಗಿದ್ದಾರೆ.

ಇದನ್ನೂ ಓದಿ: ದಯಾಮರಣ ಕೋರಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಆಟೋ ಚಾಲಕ ಪತ್ರ, ಕಾರಣ ಏನು?

ಇನ್ನು ಮಕ್ಕಳಿಗೆ ಆಸ್ತಿ ಹಂಚಿ ತಮ್ಮ ಜೀವನಾಂಶಕ್ಕೆ 32 ಗುಂಟೆ ಜಮೀನನ್ನ ಇಟ್ಕೊಂಡಿದ್ದ ಪಾರ್ವತಮ್ಮ ಬೇರೆ ಗ್ರಾಮದಲ್ಲಿ ಬೇಕರಿ ವ್ಯಾಪಾರ ಮಾಡಿಕೊಂಡಿದ್ದರು, ಕಳೆದ ಹತ್ತು ದಿನಗಳ ಹಿಂದೆಯಷ್ಟೇ ಫೇಕ್ ಸರ್ಟಿಫಿಕೇಟ್ ಮಾಡಿಕೊಂಡಿರುವ ಬಗ್ಗೆ ಪಾರ್ವತಮ್ಮ ಕುಟುಂಬದವರಿಗೆ ತಿಳಿದು ಬಂದಿದ್ದು, ನಂತರ ಬೇಲೂರು ತಹಸಿಲ್ದಾರ್ ಕಚೇರಿಗೆ ಬಂದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ವತಮ್ಮ ಅವರ ಪುತ್ರ ಮಲ್ಲೇಶ್ ಬೇಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ನಾವು ಕುಟುಂಬ ಸಮೇತ ವ್ಯವಹಾರದ ಸಲುವಾಗಿ ಹೊರ ಜಿಲ್ಲೆಯಲ್ಲಿ ನೆಲೆಸಿದ್ದೇವೆ, ವಾರದ ಹಿಂದೆ ಊರಿಗೆ ಬಂದಾಗ ನಮ್ಮ ತಾಯಿ ಹೆಸರಿನ ಭೂಮಿಯ ಖಾತೆ ಬದಲಾವಣೆಗೆ ಅರ್ಜಿ ಬಂದಿರೊ ಬಗ್ಗೆ ಮಾಹಿತಿ ತಿಳಿದು ತಾಲ್ಲೂಕು ಕಛೇರಿಗೆ ಹೋಗಿ ವಿಚಾರಿಸಿದಾಗ ಸತ್ಯ ಬಯಲಾಗಿದೆ, ನಮ್ಮ ಭೂಮಿಯನ್ನ ಲಪಟಾಯಿಸಲು ನಮ್ಮ ತಾಯಿಯನ್ನು ಅವರ ತಾಯಿ ಎಂದು ದೃಡೀಕರಿಸಿ ಮರಣ ಪ್ರಮಾಣಪತ್ರ ಮಾಡಿಸಿದ್ದಾರೆ ಈ ಬಗ್ಗೆ ಸೂಕ್ತ ಕ್ರಮ ಆಗಲಿ ಎಂದು ದೂರುದಾರ ಪಾರ್ವತಮ್ಮ ಪುತ್ರ ಮಲ್ಲೇಶ ಮನವಿ ಮಾಡಿದ್ದಾರೆ.

ಹಾಸನ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:56 pm, Thu, 25 May 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ