ಹಾಸನ: ಸ್ವಲ್ಪ ದಿನಗಳಲ್ಲಿ ಸತ್ಯ ಹೊರ ಬರುತ್ತೆ- ದೇವರಾಜೇಗೌಡ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 17, 2024 | 2:52 PM

ಅತ್ಯಾಚಾರ ಆರೋಪ ಕೇಸ್​ನಲ್ಲಿ ವಕೀಲ ದೇವರಾಜೇಗೌಡ(Devaraje Gowda)ರನ್ನು ಚಿತ್ರದುರ್ಗದ ಹಿರಿಯೂರು ಬಳಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಮೇ 11ರಂದು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಎಂಎಫ್​ಸಿ ಕೋರ್ಟ್​ ಆದೇಶಿಸಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ‘ಸ್ವಲ್ಪ ದಿನಗಳಲ್ಲಿ ಸತ್ಯ ಹೊರ ಬರುತ್ತದೆ ಎಂದು ಹೊಸ ಬಾಂಬ್​ ಸಿಡಿಸಿದ್ದಾರೆ.

ಹಾಸನ: ಸ್ವಲ್ಪ ದಿನಗಳಲ್ಲಿ ಸತ್ಯ ಹೊರ ಬರುತ್ತೆ- ದೇವರಾಜೇಗೌಡ
ದೇವರಾಜೇಗೌಡ
Follow us on

ಹಾಸನ, ಮೇ.17: ಅತ್ಯಾಚಾರ ಆರೋಪ ಕೇಸ್​ನಲ್ಲಿ ವಕೀಲ ದೇವರಾಜೇಗೌಡ(Devaraje Gowda) ಬಂಧನವಾಗಿದ್ದು, ಪೊಲೀಸ್ ಕಸ್ಟಡಿ ಮುಗಿಸಿ ಹಾಸನ(Hassan) ಜಿಲ್ಲಾ ಕಾರಾಗೃಹಕ್ಕೆ ದೇವರಾಜೇಗೌಡರನ್ನ ಹಸ್ತಾಂತರ ಮಾಡಲಾಯಿತು. ಈ ವೇಳೆ ಮಾತನಾಡಿದ ಅವರು, ‘ಸ್ವಲ್ಪ ದಿನಗಳಲ್ಲಿ ಸತ್ಯ ಹೊರ ಬರುತ್ತದೆ ಎಂದು ಹೊಸ ಬಾಂಬ್​ ಸಿಡಿಸಿದ್ದಾರೆ. ‘ನಾನು ಸತ್ಯ, ಧರ್ಮದ ಪರ ಹೋರಾಟ ಮಾಡುವ ನಾಯಕ. ಯಾವ ಷಡ್ಯಂತ್ರ ಇದ್ದರೂ ಏನು ಮಾಡಲು ಆಗಲ್ಲ. ಎಲ್ಲರೂ ಕಾನೂನಿನ ಮುಂದೆ ತಲೆಬಾಗಲೇಬೇಕು. ಕಾನೂನಿದೆ, ಸತ್ಯಕ್ಕೆ ಜಯವಿದೆ ತಲೆಕೆಡಿಸಿಕೊಳ್ಳಬೇಡಿ ಎಂದಿದ್ದಾರೆ.

ಘಟನೆ ವಿವರ

ಇನ್ನು ವಕೀಲ ದೇವರಾಜೇಗೌಡರನ್ನ ಚಿತ್ರದುರ್ಗದ ಹಿರಿಯೂರು ಬಳಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ವಿಚಾರಣೆ ನಡೆಸಿ ಮೇ 11ರಂದು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಎಂಎಫ್​ಸಿ ಕೋರ್ಟ್​ ಆದೇಶಿಸಿತ್ತು. ನಂತರ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ 4 ದಿನ ಕಸ್ಟಡಿಗೆ ಅನುಮತಿ ಪಡೆದಿದ್ದರು. ಸೋಮವಾರದಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ದೇವರಾಜೇಗೌಡರ ವಿಚಾರಣೆ ಮುಕ್ತಾಯ ಹಿನ್ನೆಲೆ ಇಂದು(ಮೇ.17) ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಇನ್ನು ಮೇ 24ರವರೆಗೂ JMFC ಕೋರ್ಟ್​​ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಇಂದು ದೇವರಾಜೇಗೌಡ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ.

ಇದನ್ನೂ ಓದಿ:ಹೆಚ್ಚಿನ ವಿಚಾರಣೆಗಾಗಿ ವಕೀಲ ದೇವರಾಜೇಗೌಡನನ್ನು ವಶಕ್ಕೆ ಪಡೆದ ಹೊಳೆನರಸೀಪುರ ಪೊಲಿಸರು

ಪ್ರಜ್ವಲ್​ ರೇವಣ್ಣ ಪ್ರಕರಣದ ನಡುವೆಯೇ ವಕೀಲ ದೇವರಾಜೇಗೌಡ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಏಪ್ರಿಲ್ 1 ರಂದು ಸಂತ್ರಸ್ತೆ ಮಹಿಳೆಯೊಬ್ಬರು ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೇ ದೂರಿನ ಆಧಾರದ ಮೇಲೆ ಪೊಲೀಸರು ದೇವರಾಜೇಗೌಡರ ಬೆನ್ನು ಬಿದ್ದಿದ್ದರು. ಬಳಿಕ ದೇವರಾಜೇಗೌಡರ ಮೊಬೈಲ್​ ಟ್ರ್ಯಾಪ್​ ಮಾಡಿ ಪೊಲೀಸರು ಬಂಧಿಸಲು ಮುಂದಾಗಿದ್ದರು. ಆದರೆ ವಕೀಲ ದೇವರಾಜೇಗೌಡ ತಾವಾಗಿಯೇ ಪೊಲೀಸರಿಗೆ ಸಿಕ್ಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Fri, 17 May 24