Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಜಿಲ್ಲೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವ; ಜನರಲ್ಲಿ ಹೆಚ್ಚಿದ ಆತಂಕ

Hassan: ಜನರು ನೀಡಿದ ಮಾಹಿತಿ ಮೇಲೆ‌ ಸ್ಥಳಕ್ಕೆ‌ ಹಳೆಬೀಡು ಪೊಲೀಸರು ಭೇಟಿ ನೀಡಿದ್ದಾರೆ. ಸಂಜೆ 6.10 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಈ ಅನುಭವದಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.

ಹಾಸನ: ಜಿಲ್ಲೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವ; ಜನರಲ್ಲಿ ಹೆಚ್ಚಿದ ಆತಂಕ
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on:Sep 17, 2021 | 6:43 PM

ಹಾಸನ: ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿ ಕಂಪನದಿಂದ ಜನರಲ್ಲಿ ಆತಂಕ ಹೆಚ್ಚಿದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೆಬೀಡು ಭಾಗದಲ್ಲಿ ಘಟನೆ ನಡೆದಿದೆ. ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಕಂಪನ ಅನುಭವಕ್ಕೆ ಬಂದಿದೆ. ಭೂಮಿ ಕಂಪನದಿಂದ ಜನರು ಮನೆಯ ಹೊರಗೆ ಓಡಿ ಬಂದಿದ್ದಾರೆ. ಜನರು ನೀಡಿದ ಮಾಹಿತಿ ಮೇಲೆ‌ ಸ್ಥಳಕ್ಕೆ‌ ಹಳೆಬೀಡು ಪೊಲೀಸರು ಭೇಟಿ ನೀಡಿದ್ದಾರೆ. ಸಂಜೆ 6.10 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಈ ಅನುಭವದಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.

ಇದಕ್ಕೂ ಮೊದಲು ರಾಜ್ಯದ ಕೆಲವು ಕಡೆಗಳಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಭಾರೀ ಸದ್ದಿನೊಂದಿಗೆ ಗದಗ ಹಾಗೂ ವಿಜಯಪುರದ ಕೆಲವೆಡೆ ಭೂಮಿ ಕಂಪಿಸಿದ ಅನುಭವ ಆಗಿತ್ತು. ಭೂಮಿ ನಡುಗಿದ ಅನುಭವಕ್ಕೆ ಜನರು ಬೆಚ್ಚಿಬಿದ್ದಿದ್ದರು.

ವಿಜಯಪುರ ಜಿಲ್ಲೆಯಲ್ಲಿ ಸೆಪ್ಟೆಂಬರ್ 11 ರಂದು ಮತ್ತೆ ಭೂಕಂಪನದ ಅನುಭವವಾಗಿತ್ತು. ಅದರಿಂದ ಜನ ಆತಂಕಕ್ಕೆ ಒಳಗಾಗಿದ್ದರು. ಮುಂಜಾನೆ 8.18ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಊರಿನವರು ಹೇಳಿದ್ದರು. ಒಂದೇ ವಾರದಲ್ಲಿ ಎರಡು ಬಾರಿ ಈ ಅನುಭವ ಆಗಿರುವುದು ಸಹಜವಾಗಿ ಭಯಕ್ಕೆ ಕಾರಣವಾಗಿತ್ತು. ಸೆಪ್ಟೆಂಬರ್​ 4ನೇ ತಾರೀಖಿನಂದು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪವಾಗಿತ್ತು. ಅಂದು ರಿಕ್ಟರ್ ಮಾಪನದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿತ್ತು. ಬಳಿಕ ಸರಿಯಾಗಿ ಒಂದು ವಾರದ ಅಂತರದಲ್ಲಿ ಮತ್ತೆ ಭೂಮಿ ನಡುಗಿದ ಅನುಭವ ಆಗಿತ್ತು.

ಒಂದು ವಾರದ ಹಿಂದೆ ಭೂಕಂಪ ಆಗಿರುವ ಬಗ್ಗೆ ಹಾಗೂ ಅದರ ತೀವ್ರತೆ ಬಗ್ಗೆ ಜಿಲ್ಲಾಡಳಿತ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದೀಗ ಮತ್ತೆ ಹಾಸನದಲ್ಲಿ ಇಂತಹ ಅನುಭವ ಆಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭಿಸಬೇಕಿದೆ.

ಇದನ್ನೂ ಓದಿ: ಗದಗ: ಭಾರಿ ಶಬ್ದದ ಜೊತೆಗೆ ಭೂಮಿ ನಡುಗಿದ ಅನುಭವ! ಬೆಚ್ಚಿಬಿದ್ದ ಗ್ರಾಮಸ್ಥರು

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ನಡುಗಿದ ಭೂಮಿ; ಒಂದು ವಾರದಲ್ಲಿ ಎರಡನೇ ಬಾರಿಗೆ ಭೂಕಂಪನದ ಅನುಭವ

Published On - 6:38 pm, Fri, 17 September 21

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ