AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ

ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಆನೆಮಹಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಉಂಟಾಗಿದೆ. ತಡೆಗೋಡೆ ನಿರ್ಮಾಣ ಮಾಡದೆ ರಸ್ತೆ ಅಗಲೀಕರಣ ಮಾಡಿರುವುದರಿಂದ ಮಣ್ಣು ಕುಸಿದಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Hassan News: ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ
ಭೂಕುಸಿತ
ಮಂಜುನಾಥ ಕೆಬಿ
| Edited By: |

Updated on: Jul 22, 2023 | 4:14 PM

Share

ಹಾಸನ, ಜುಲೈ 22: ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಸಕಲೇಶಪುರ ತಾಲೂಕಿನ ಆನೆಮಹಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ (Shiradi Ghat) ರಸ್ತೆಯಲ್ಲಿ ಭೂಕುಸಿತ ಉಂಟಾಗಿದೆ. ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ತಾಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದೆ. ತಡೆಗೋಡೆ ನಿರ್ಮಾಣ ಮಾಡದೆ ರಸ್ತೆ ಅಗಲೀಕರಣ ಮಾಡಿರುವುದರಿಂದ ಮಣ್ಣು ಕುಸಿದಿದೆ. ಪ್ರತಿನಿತ್ಯ ಶಿರಾಡಿಘಾಟ್​ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತವೆ. ಅವೈಜ್ಞಾನಿಕ ಕಾಮಗಾರಿಯಿಂದ ಸವಾರರಿಗೆ ತೊಂದರೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದ್ದು, ದುರಂತ ಸಂಭವಿಸುವುದಕ್ಕೂ ಮುನ್ನ ಸುರಕ್ಷತಾ ಕ್ರಮಕೈಗೊಳ್ಳುವಂತೆ ವಾಹನ ಸವಾರರು ಆಗ್ರಹಿಸಿದ್ದಾರೆ.

ಧಾರಾಕಾರ ಮಳೆ: ಪ್ರವಾಹ ಮಟ್ಟ ಮೀರಿ ಹರಿಯುತ್ತಿವೆ ನದಿಗಳು

ಚಿಕ್ಕಮಗಳೂರಿನಲ್ಲಿ ಕೂಡ ಧಾರಾಕಾರ ಮಳೆಯಿಂದ ನದಿಗಳು ಪ್ರವಾಹದ ಮಟ್ಟ ಮೀರಿವೆ. ತುಂಗಾ ಭದ್ರಾ, ಹೇಮಾವತಿ ನದಿಗಳ ಒಳ ಹರಿವಿನಲ್ಲಿ ಹೆಚ್ಚಳವಾಗಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಗೆ ಕೆಲವೇ ಅಡಿ ಬಾಕಿಯಿದೆ. ಧಾರಾಕಾರ ಮಳೆ ಮುಂದುವರೆದರೆ ಮೊದಲು ಕಳಸ‌ದಿಂದ ಹೊರನಾಡಿಗೆ ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಲಿದೆ. ಕುದುರೆಮುಖ, ಕಳಸ ಭಾಗಗಳಲ್ಲಿಯೂ ಸಹ ಮಳೆ ಸುರಿಯುತ್ತಿದೆ.

ಇದನ್ನೂ ಓದಿ: Chikmagalur News: ಅರಣ್ಯದಲ್ಲಿ ಬೆಟ್ಟದ ಮೇಲೆ ಮನೆ ಕಟ್ಟಿಕೊಂಡು ವಾಸವಾಗಿರುವ ಕುಟುಂಬ 5 ದಶಕಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತ!

ಮಳೆಗೆ ಹಲವೆಡೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು

ಕೊಡಗು ಜಿಲ್ಲೆಯಾದ್ಯಂತ ವರುಣಾರ್ಭಟ ಮುಂದುವರೆದ ಪರಿಣಾಮ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಮಡಿಕೇರಿ-ಮಾಂದಲಪಟ್ಟಿ ರಸ್ತೆ ಸಂಪರ್ಕ ಕಡಿತವಾಗಿದ್ದು, ಮಾಂದಲಪಟ್ಟಿಗೆ ತೆರಳಲಾಗದೆ ಪ್ರವಾಸಿಗರು ಪರದಾದುವಂತಾಗಿದೆ. ರಸ್ತೆಗೆ ಬಿದ್ದ ಮರಗಳನ್ನು ಅರಣ್ಯ ಇಲಾಖೆ, ಸೆಸ್ಕ್ ಸಿಬ್ಬಂದಿ ತೆರವುಗೊಳಿಸಿದ್ದಾರೆ.

ವರದಾ ನದಿ ನೀರಿನ ಮಟ್ಟ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿಯೂ ಮಳೆ ಅಬ್ಬರ ಜೋರಾಗಿದ್ದು, ವರದಾ ನದಿ ನೀರಿನ ಮಟ್ಟ ಗಂಟೆಗೆ ಎರಡು ಅಡಿ ಹೆಚ್ಚಳವಾಗಿದೆ. ಹಾಗಾಗಿ ಹಾವೇರಿ ನಗರ ಮತ್ತು ಕಳಸೂರು ಗ್ರಾಮದ ಮಧ್ಯ ಸಂಪರ್ಕ ಕಟ್ ಆಗಿದೆ. ಸವಣೂರು, ಲಕ್ಷ್ಮಶ್ವರ ಹಾಗೂ ಗದಗದಿಂದ ಹಾವೇರಿಗೆ ಬರಲು ಇದ್ದ ಶಾರ್ಟ್ ಕಟ್ ರಸ್ತೆ ಸದ್ಯ ಬಂದ ಆಗಿದೆ.

ಇದನ್ನೂ ಓದಿ: ಕೃಷ್ಣಾ, ವೇದಗಂಗಾ, ದೂಧ್‌ಗಂಗಾ, ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳ ಬೆಳಗಾವಿ ಜಿಲ್ಲೆಯ 14 ಸೇತುವೆಗಳು ಮುಳುಗಡೆ

ನದಿ ದಡದಲ್ಲಿ ಚಿಕ್ಕ ಮಕ್ಕಳಿಂದ ಹುಚ್ಚಾಟ

ನದಿ ದಡದ ಗ್ರಾಮಗಳಲ್ಲಿ ಜಿಲ್ಲಾಡಳಿತದಿಂದ ಜಾಗೃತಿ ಮೂಡಿಸದ ಹಿನ್ನೆಲೆ ನದಿ ತುಂಬಿ ಹರಿಯುತ್ತಿದ್ದರು ನದಿ ದಾಟಲು ಜನ ಹುಚ್ಚು ಸಾಹಸ ಮಾಡುತ್ತಿದ್ದಾರೆ. ನದಿ ದಡದ ಗ್ರಾಮಗಳು ಪ್ರವಾಹದ ಭೀತಿ ಎದುರಿಸುತ್ತಿವೆ. ಇನ್ನೊಂದು ನಾಲ್ಕು ದಿನ ಹೀಗೆ ಮಳೆ ಬಂದರೆ ಕೊಳುರು ಗ್ರಾಮ ಸಂಪೂರ್ಣ ಜಲಾವೃತ ಆಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?