AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಕೈ ಬಲಪಡಿಸುವ ಕೆಲಸ ನಾವು ಮಾಡಬೇಕು: ಹಾಸನದಲ್ಲಿ ಹೆಚ್​ಡಿ ದೇವೇಗೌಡ ಕರೆ

ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿಸಲು ಶ್ರಮಿಸುವಂತೆ ಹಾಸನದ ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ನಡೆದ ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಕರೆ ನೀಡಿದರು.

ಪ್ರಧಾನಿ ಮೋದಿ ಕೈ ಬಲಪಡಿಸುವ ಕೆಲಸ ನಾವು ಮಾಡಬೇಕು: ಹಾಸನದಲ್ಲಿ ಹೆಚ್​ಡಿ ದೇವೇಗೌಡ ಕರೆ
ಹೆಚ್​ಡಿ ದೇವೇಗೌಡ
ಮಂಜುನಾಥ ಕೆಬಿ
| Edited By: |

Updated on:Dec 01, 2023 | 3:53 PM

Share

ಹಾಸನ, ಡಿಸೆಂಬರ್ 1: ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ನಾವು ಬಿಜೆಪಿಯನ್ನು ಎದುರಿಸಿದ್ದೆವು. ಆದರೆ ಈಗ ಅದನ್ನೆಲ್ಲ ಮರೆಯಬೇಕು. ಈಗಿನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕೈಯನ್ನು ನಾವು ಬಲಪಡಿಸಬೇಕಿದೆ ಎಂದು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಕರೆ ನೀಡಿದರು. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಜೊತೆ ಒಗ್ಗಟ್ಟಾಗಿ ಕೆಲಸ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸೋಣ. ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ ಎಂದರು.

ಪಂಚ ರಾಜ್ಯಗಳ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದೆ. ಒಂದೆರಡು ಕಡೆ ಕಾಂಗ್ರೆಸ್, ಒಂದೆರಡು ಕಡೆ ಬಿಜೆಪಿ ಎಂದು ಸಮೀಕ್ಷೆ ಫಲಿತಾಂಶ ತಿಳಿಸಿದೆ. ವಿಧಾನಸಭಾ ಚುನಾವಣೆ ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ. ಇದು ನನ್ನ ರಾಜಕೀಯ ಅನುಭವದಲ್ಲಿ ಹೇಳುತ್ತಿದ್ದೇನೆ ಎಂದು ದೇವೇಗೌಡ ಹೇಳಿದರು.

ಕೊನೆ ಕ್ಷಣದಲ್ಲಿ ಗ್ಯಾರಂಟಿ ಯೋಜನೆ ಕಾಂಗ್ರೆಸ್ ಅಧಿಕಾರ ಹಿಡಿಯಿತು. ಈಗ ದೇಶದ ಎಲ್ಲಾ ಕಡೆಯೂ ಗ್ಯಾರಂಟಿ ಶುರುವಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ನಾನು ಈಗ ಹೆಚ್ಚು ಮಾತನಾಡುವುದಿಲ್ಲ. ನನಗೆ ರಾಜ್ಯಸಭೆ ಸದಸ್ಯನಾಗಿ ಇನ್ನೂ ಎರಡೂವರೆ ವರ್ಷ ಅವಕಾಶವಿದೆ. ಮಂಡಿ ನೋವು ಬಿಟ್ಟರೆ ಎಲ್ಲಾ ಕಡೆ ಕೆಲಸ ಮಾಡುವ ಸಾಮರ್ಥ್ಯವಿದೆ. ಲೋಕಸಭೆ ಚುನಾವಣಾ ಸಂದರ್ಭ ಹೆಚ್​ಡಿ ಕುಮಾರಸ್ವಾಮಿ ‌ಕೂಡ ಬರುತ್ತಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರನ್ನ ಭೇಟಿಯಾದ ಆರ್ ಅಶೋಕ್ ಏನಂದ್ರು ಗೊತ್ತಾ?

ಮುಂದಿನ ಲೋಕಸಭೆಯಲ್ಲಿ ನಮಗೆ ಎಷ್ಟು ಸೀಟು ಹಂಚಿಕೆಯಾಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಪ್ರಧಾನಿ, ಬಿಜೆಪಿ ಅಧ್ಯಕ್ಷಕರು, ಹೆಚ್​ಡಿಕೆ ತೀರ್ಮಾನ ಮಾಡಲಿದ್ದಾರೆ ಎಂದು ದೇವೇಗೌಡರು ಹೇಳಿದ್ದಾರೆ.

ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಚುನಾಯಿತ ಜನಪ್ರತಿನಿಧಿಗಳು ದೇವೇಗೌಡರ ಸಭೆಯಲ್ಲಿ ಭಾಗಿಯಾಗಿದ್ದರು. ಲೋಕಸಭಾ ಚುನಾವಣೆ ಸಂಬಂಧ ಸಲಹೆ ಪಡೆಯಲು ದೇವೇಗೌಡ ಅವರು ಈ ಸಭೆ ನಡೆಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ, ಶಾಸಕರಾದ ಹೆಚ್ ಡಿ ರೇವಣ್ಣ, ಸಿ.ಎನ್.ಬಾಲಕೃಷ್ಣ, ಸ್ವರೂಪ್, ಸೂರಜ್ ರೇವಣ್ಣ ಉಪಸ್ಥಿತರಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:49 pm, Fri, 1 December 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ