AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಕೌಟುಂಬಿಕ ಕಲಹದಿಂದ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು

ಗಂಡ-ಹೆಂಡತಿ ನಡುವೆ ಉಂಟಾದ ಜಗಳದಿಂದಾಗಿ 5 ವರ್ಷದ ಮಗುವನ್ನು ತಾಯಿಯಿಂದ ದೂರ ಮಾಡಲಾಗಿದೆ. ತಂದೆಯೇ ಮಗುವನ್ನು ಕದ್ದು ಬಚ್ಚಿಟ್ಟು ವಿದೇಶಕ್ಕೆ ತೆರಳಿದ್ದಾನೆ. ಸದ್ಯ ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ.

Hassan News: ಕೌಟುಂಬಿಕ ಕಲಹದಿಂದ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ರಿಜ್ವಾನ್ ಮನೆ ಮೇಲೆ ದಾಳಿ ಮಾಡಿ ಮಗು ರಕ್ಷಿಸಿದ ಪೊಲೀಸರು
ಮಂಜುನಾಥ ಕೆಬಿ
| Edited By: ಆಯೇಷಾ ಬಾನು|

Updated on: Jul 18, 2023 | 11:47 AM

Share

ಹಾಸನ: ಕೌಟುಂಬಿಕ ಕಲಹದಿಂದಾಗಿ ತಾಯಿಯಿಂದ ದೂರವಾಗಿದ್ದ ಮಗುವನ್ನು ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ತಾಯಿ ಮಗುವನ್ನು ಒಂದುಗೋಡಿಸಿದ್ದಾರೆ. ಹಾಸನ ನಗರದ ಪೆನ್‌ಷನ್‌ಮೊಹಲ್ಲಾದಲ್ಲಿ ವಾಸವಾಗಿದ್ದ ಕುಟುಂಬವೊಂದರಲ್ಲಿ ಕೌಟುಂಬಿಕ ಕಲಹದಿಂದಾಗಿ ಗಂಡ-ಹೆಂಡತಿ ನಡುವೆ ಜಗಳವಾಗಿ ಗಂಡ ತನ್ನ ಮಗುವನ್ನು ತಾಯಿಯಿಂದ ದೂರ ಮಾಡಿದ್ದ. ಈ ವಿಚಾರ ಇಳಿದ ಬಳಿಕ ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಇಲಾಖೆ ತಂದೆಯಿಂದ ಮಗುವನ್ನು ತಾಯಿಗೆ ಮಡಿಲಿಗೆ ಹಾಕಿದ್ದಾರೆ.

2016 ರಲ್ಲಿ ನಜ್ನೀನ್ ಜೊತೆ ರಿಜ್ವಾನ್ ಅಹಮದ್​ಗೆ ಮದುವೆಯಾಯಿತು. ಮದುವೆಯಾದ ಹೊಸದರಲ್ಲಿ ಎಲ್ಲವೂ ಚನ್ನಾಗೇ ಇತ್ತು. ರಿಜ್ವಾನ್ ತನ್ನ ಪತ್ನಿ-ಮಗುನೊಂದಿಗೆ ಎರಡು ವರ್ಷ ದುಬೈನಲ್ಲಿದ್ದ. ನಂತರ ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ದಂಪತಿ ದುಬೈನಿಂದ ವಾಪಾಸ್ ಬಂದಿದ್ದರು. ಬಳಿಕ ರಿಜ್ವಾನ್ ತನ್ನ ಹೆಂಡತಿ ಹಾಗೂ ಐದು ವರ್ಷದ ಪುಟ್ಟ ಮಗಳು ಆಯೇಷಾಳನ್ನ ಪತ್ನಿಯ ತಾಯಿಯ ಮನೆಯಲ್ಲಿ ಬಿಟ್ಟು ಹೋಗಿದ್ದ. ಇಷ್ಟೆಲ್ಲ ಆದ ಬಳಿಕ ಪತ್ನಿಗೆ ತಿಳಿಯದಂತೆ ಮಗಳನ್ನು ಕರೆದುಕೊಂಡು ಹೋಗಿ ಬಚ್ಚಿಟ್ಟಿದ್ದ.

ಇದನ್ನೂ ಓದಿ: ಚರಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರು ಸಾವು: ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಿ‌.ದೇವೇಂದ್ರಪ್ಪ

ರಿಜ್ವಾನ್ ಅಹಮ್ಮದ್, ಮಗುವನ್ನು ಸಂಬಂಧಿಕರ ಮನೆಯಲ್ಲಿಟ್ಟು ಪತ್ನಿಗೂ ತಿಳಿಸದೆ ಐದು ತಿಂಗಳ ಹಿಂದೆ ಕೀನ್ಯಾಗೆ ತೆರಳಿದ್ದ. ಮಗು ನಾಪತ್ತೆಯಾಗಿದ್ದರಿಂದ ಕಂಗಾಲಾಗಿದ್ದ ತಾಯಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಡಿವೈಎಸ್‌ಪಿ ಉದಯ್‌ ಭಾಸ್ಕರ್ ಈ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಈ ವೇಳೆ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಹಾಗೂ ಡಿವೈಎಸ್‌ಪಿ ಉದಯ್‌ ಭಾಸ್ಕರ್ ರಿಜ್ವಾನ್ ಮನೆ ಮೇಲೆ ದಾಳಿ ನಡೆಸಿದರು. ಆಗ ತಂದೆ ಮನೆಯಲ್ಲಿಯೇ ಹೆಣ್ಣು ಮಗು ಆಯೇಷಾ ಪತ್ತೆಯಾಗಿದ್ದು ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ.

ಮಗುವನ್ನು ಕರೆದುಕೊಂಡು ಹೋಗುವಾಗ ರಿಜ್ವಾನ್ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕಾಣಿಯಾಗಿದ್ದ ತನ್ನ ಮಗುವನ್ನು ಕಂಡು ತಾಯಿ ನಜ್ನೀನ್ ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದು ಧನ್ಯವಾದ ತಿಳಿಸಿದ್ದಾರೆ. ಸದ್ಯ ಮಗು ಬಾಲಮಂದಿರದಲ್ಲಿದೆ. ತನಿಖೆ ವೇಳೆ ರಿಜ್ವಾನ್ ಎರಡನೇ ಮದುವೆಯಾಗಿರುವುದು ಬಯಲಾಗಿದೆ. ಮೊದಲ ಮದುವೆ ವಿಷಯ ಮುಚ್ಚಿಟ್ಟು ನಜ್ನೀನ್ ಜೊತೆ ಎರಡನೇ ವಿವಾಹವಾಗಿದ್ದಾಗಿ ತಿಳಿದುಬಂದಿದೆ. ಆರೋಪಿ ರಿಜ್ವಾನ್ ಎರಡನೇ ಪತ್ನಿಯನ್ನು ಬಿಟ್ಟು ಮಗವನ್ನು ತನ್ನ ಪೋಷಕರ ಬಳಿ ಬಿಟ್ಟು ಕೀನ್ಯಾಗೆ ತೆರಳಿದ್ದಾನೆ. ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Manjunath KB
Manjunath KB
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ