AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ನರ್ಸಿಂಗ್ ಕಾಲೇಜು ಗಡ್ಡ ವಿವಾದ: ತಪ್ಪು ಮುಚ್ಚಿಕೊಳ್ಳಲು ವಿಷಯ ಬೇರೆ ತರ ತಿರುಚಿದ್ದಾರೆ ಎಂದ ಪ್ರಾಂಶುಪಾಲ

ಪ್ರಾಶುಂಪಾಲರು ಗಡ್ಡ ತೆಗೆದು ಬನ್ನಿ ಎಂದಿದ್ದಕ್ಕೆ ಹೊಳೆನರಸಿಪುರ ನರ್ಸಿಂಗ್​ ಕಾಲೇಜು ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್​ ಮಾತನಾಡಿ, ವಿದ್ಯಾರ್ಥಿಗಳಿಗೆ ಏಕೆ ಸೂಚನೆ ನೀಡಲಾಗಿತ್ತು ಎಂಬುವುದನ್ನು ತಿಳಿಸಿದ್ದಾರೆ.

ಹಾಸನ ನರ್ಸಿಂಗ್ ಕಾಲೇಜು ಗಡ್ಡ ವಿವಾದ: ತಪ್ಪು ಮುಚ್ಚಿಕೊಳ್ಳಲು ವಿಷಯ ಬೇರೆ ತರ ತಿರುಚಿದ್ದಾರೆ ಎಂದ ಪ್ರಾಂಶುಪಾಲ
ಪ್ರಾಂಶುಪಾಲ ಚಂದ್ರಶೇಖರ್​, ಕಾಲೇಜು
ಮಂಜುನಾಥ ಕೆಬಿ
| Edited By: ವಿವೇಕ ಬಿರಾದಾರ|

Updated on: Nov 10, 2024 | 10:23 AM

Share

ಹಾಸನ, ನವೆಂಬರ್​ 10: ಗಡ್ಡ (Beard) ತೆಗೆಯುವಂತೆ ಸೂಚನೆ ನೀಡಿರುವ ವಿಚಾರವಾಗಿ ಹೊಳೆನರಸೀಪುರ ನರ್ಸಿಂಗ್​ ಕಾಲೇಜಿನ (Holenarasipur Nursing College) ಪ್ರಾಂಶುಪಾಲ ಚಂದ್ರಶೇಖರ್ ಮಾತನಾಡಿ, ನರ್ಸಿಂಗ್ ಕೋರ್ಸ್ ಆಗಿರುವುದರಿಂದ ಕ್ಲಿನಕಲ್ ಲ್ಯಾಬ್‌ನಲ್ಲಿ ಗಡ್ಡ ಬಿಟ್ಟುಕೊಂಡು ಭಾಗವಹಿಸಿದರೆ ಸಮಸ್ಯೆಯಾಗುತ್ತದೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯುವಂತೆ ಹೇಳಿದ್ದೇವೆ. ಕೇವಲ‌ ಮುಸ್ಲಿಂ ಯುವಕರಿಗೆ ಮಾತ್ರ ಗಡ್ಡ ತೆಗೆಯುವಂತೆ ಹೇಳಿಲ್ಲ ಎಂದು ಹೇಳಿದರು.

ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಕಾಲೇಜಿನಲ್ಲಿ ಜಮ್ಮು-ಕಾಶ್ಮೀರದ 13 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರು ಕಾಲೇಜಿಗೆ ಸರಿಯಾಗಿ ಬರುತ್ತಿರಲಿಲ್ಲ. ಗಡ್ಡ ಬಿಟ್ಟುಕೊಂಡು, ಕೊಳೆಯಾದ ಬಟ್ಟೆ ತೊಟ್ಟುಕೊಂಡು ಬರುತ್ತಿದ್ದರು. ಶೂ ಬದಲು ಚಪ್ಪಲಿ ಹಾಕಿಕೊಂಡು ವಿಚಿತ್ರವಾಗಿ ಬರುತ್ತಿದ್ದರು ಎಂದು ಹೇಳಿದರು.

ಇದನ್ನೂ ಓದಿ: ಗಡ್ಡ ತೆಗೆಯುವಂತೆ ಕಾಲೇಜು ಆಡಳಿತ ಮಂಡಳಿ ಸೂಚನೆ: ಅಸಮಾಧಾನ ಹೊರ ಹಾಕಿದ ಮುಸ್ಲಿಂ ವಿದ್ಯಾರ್ಥಿಗಳು

ಹೀಗಾಗಿ, ಕ್ಲಿನಿಕಲ್ ಇನ್ಸ್‌ಟ್ರಕ್ಟರ್ ವಿಜಯಕುಮಾರ್​ ಈ 13 ವಿದ್ಯರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಗಡ್ಡ ತೆಗೆದು, ಚಪ್ಪಲಿ ಹಾಕಿಕೊಂಡು ಸರಿಯಾಗಿ ಬನ್ನಿ ಅಂತ ಮೂರು ದಿನ ಸೂಚನೆ ನೀಡಿದರೂ ವಿದ್ಯಾರ್ಥಿಗಳು ಮಾತು ಕೇಳುತ್ತಿರಲಿಲ್ಲ ಎಂದು ತಿಳಿಸಿದರು.

ನಮ್ಮ ಕಾಲೇಜಿನ ನಿಯಮದ ಪ್ರಕಾರ, ಶಿಸ್ತಿಗೆ ಮೊದಲ ಆದ್ಯತೆ ನೀಡಲಾಗಿದೆ. ಕ್ಲಿನಿಕಲ್​ ಲ್ಯಾಬ್​ಗೆ ಎಂಟು ಗಂಟೆಗೆ ಬರುವ ಬದಲು 10-11 ಗಂಟೆಗೆ ಬೇಕಾಬಿಟ್ಟಿ ಬರುತ್ತಿದ್ದರು. ಅಲ್ಲದೇ ವಿದ್ಯಾರ್ಥಿಗಳ ಹಾಜರಾತಿ ಈ ಕಡಿಮೆ ಇದೆ. ಇದೆಲ್ಲವನ್ನು ಪ್ರಶ್ನಿಸಿದಾಗ ಮತ್ತು ಗಡ್ಡ ತೆಗೆಯುವಂತೆ ಹೇಳಿದ್ದಕ್ಕೆ, ತಮ್ಮ ತಪ್ಪು ಮುಚ್ಚಿಕೊಳ್ಳಲು ವಿಷಯವನ್ನು ಬೇರೆ ತರ ತಿರುಚಿದ್ದಾರೆ. ಈ ವಿವಾದವನ್ನು ಸೃಷ್ಟಿಸಿದ್ದಾರೆ ಎಂದರು.

ಇನ್ನು, ಈ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದಂತೆ ಕಾಲೇಜಿಗೆ ಡಿವೈಎಸ್ಪಿ ಶಾಲೂ ಹಾಗು ಇನ್ಸ್ಪೆಕ್ಟರ್ ಪ್ರದೀಪ್ ಕುಮಾರ್ ಭೇಟಿ ನೀಡಿ ಮಾಹಿತಿ ಪಡೆದರು.

ಮುಸ್ಲಿಂ ವಿದ್ಯಾರ್ಥಿಗಳ ಉದ್ಧಟತನ: ಮುತಾಲಿಕ್

ಈ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್ ಮಾತನಾಡಿ, ಇದು ಮುಸ್ಲಿಂ ವಿದ್ಯಾರ್ಥಿಗಳ ಉದ್ಧಟತನವಾಗಿದೆ. ನಿಯಮ ಪಾಲನೆ ಮಾಡದೆ ಇದ್ದರೆ ಸಸ್ಪೆಂಡ್ ಮಾಡಬೇಕು. ನಿಯಮ ಬಿಟ್ಟು ನಡೆದುಕೊಳ್ಳಲು ಇದು ಆಫ್ಘನ್, ಪಾಕಿಸ್ತಾನ ಅಲ್ಲ. ವಿದ್ಯಾರ್ಥಿಗಳು ಕಾಲೇಜಿನ ನಿಯಮದ ಪ್ರಕಾರ ನಡೆದುಕೊಳ್ಳಬೇಕು. ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಬಾರದು ಎಂದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ