AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮುಂದುವರೆದ ಹೃದಯಾಘಾತ ಸರಣಿ ಸಾವು: ಮತ್ತೋರ್ವ ಬಲಿ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮುಂದುವರೆದಿದೆ. ಇಂದು ಹೃದಯಾಘಾತದಿಂದ ಮತ್ತೋರ್ವ ವ್ಯಕ್ತಿಯ ಸಾವು ಸಂಭವಿಸಿದೆ. 37 ವರ್ಷದ ಆಟೋ ಚಾಲಕನಿಗೆ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಇದೇ ರೀತಿಯ 16 ಸಾವುಗಳು ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ಹಾಸನದಲ್ಲಿ ಮುಂದುವರೆದ ಹೃದಯಾಘಾತ ಸರಣಿ ಸಾವು: ಮತ್ತೋರ್ವ ಬಲಿ
ಗೋವಿಂದ
ಮಂಜುನಾಥ ಕೆಬಿ
| Edited By: |

Updated on:Jun 28, 2025 | 11:24 AM

Share

ಹಾಸನ, ಜೂನ್​ 28: ಜಿಲ್ಲೆಯಲ್ಲಿ ಹೃದಯಾಘಾತದ (heart attack) ಸರಣಿ ಮುಂದುವರಿದಿದೆ. ಇಂದು ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ (death). ಅಲ್ಲಿಗೆ ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ(37) ಮೃತ ವ್ಯಕ್ತಿ. ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಊಹಿಸೋಕೂ ಆಗ್ತಿಲ್ಲ, ಅರಗಿಸಿಕೊಳ್ಳೂಕೂ ಆಗುತ್ತಿಲ್ಲ. ಬಾಳಿ ಬದುಕ ಬೇಕಾದವರೇ ಅರ್ಧಕ್ಕೇ ಜೀವನದ ಆಟ ಮುಗಿಸುತ್ತಿದ್ದಾರೆ. ಅದರಲ್ಲೂ ಜಿಲ್ಲೆಯಲ್ಲಿ ಹೃದಯಾಘಾತ ಇನ್ನಿಲ್ಲದಂತೆ ಕಾಡುತ್ತಿದೆ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಯಾರನ್ನೂ ಬಿಡುತ್ತಿಲ್ಲ. ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಈವರೆಗೆ ಹೃದಯಾಘಾತಕ್ಕೆ ಮೃತಪಟ್ಟವರು

ಮೇ 20 ರಂದು ಅರಕಲಗೂಡು ತಾಲೂಕಿನ ಅಭಿಷೇಕ್ ಬೆಂಗಳೂರಿನಲ್ಲಿ ಉಸಿರು ನಿಲ್ಲಿಸಿದ್ರೆ, ಅದೇ ದಿನ ಹೊಳೆನರಸೀಪುರದ 20 ವರ್ಷದ ವಿದ್ಯಾರ್ಥಿನಿ ಸಂದ್ಯಾ ಬಲಿ ಆಗಿದ್ದರು. ಮೇ 28 ರಂದು ಕವನ ಉಸಿರು ನಿಲ್ಲಿಸಿದ್ದರು.

ಇದನ್ನೂ ಓದಿ
Image
ಹೃದಯಾಘಾತ: ಸರ್ಕಾರ ನೇಮಿಸಿದ ಸಮಿತಿ ವರದಿಯಲ್ಲಿ ಆತಂಕಕಾರಿ ಅಂಶ ಬಯಲು
Image
ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಸಂಶೋಧನಾ ವರದಿಯಲ್ಲಿ ಆಘಾತಕಾರಿ ಅಂಶ
Image
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
Image
ಹಾಸನ: ಹೃದಯಾಘಾತದಿಂದ ಮತ್ತಿಬ್ಬರು ಸಾವು, ಒಂದೇ ತಿಂಗಳಲ್ಲಿ 12 ಜನ ಬಲಿ

ಇದನ್ನೂ ಓದಿ: 24 ಗಂಟೆಗಳಲ್ಲಿ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿ: ಒಂದೇ ತಿಂಗಳಲ್ಲಿ 14 ಜನ ಸಾವು

ಇನ್ನು ಜೂನ್‌ 11 ರಂದು ನಿಶಾಂತ್, ಜೂನ್‌ 12 ರಂದು ನಾಗಪ್ಪ, ಅದೇ ದಿನ ನೀಲಕಂಠಪ್ಪ ಕೂಡ ಸಾವಿನ ಮನೆ ಸೇರಿದ್ದರು. ಜೂನ್‌ 13 ರಂದು ದೇವರಾಜ್, ಅಂದೇ ಸತೀಶ್ ಅನ್ನೋರು ಜೀವ ಬಿಟ್ಟಿದ್ದರು. ಜೂನ್‌ 14 ರಂದು ಕಾಂತರಾಜು ಬಲಿ ಆಗಿದ್ದರು. ಜೂನ್‌ 18 ರಂದು ನವೀನ್, ತೀರ್ಥಪ್ಪ ಸಾವನ್ನಪ್ಪಿದ್ದರು. ಜೂನ್‌ 21 ರಂದು ನಿಶಾದ್ ಅಹ್ಮದ್ ಮತ್ತು ಚೇತನ್ ಹೃದಯಾಘಾತದಿಂದ ಉಸಿರು ಚೆಲ್ಲಿದ್ದರು.

ಇದನ್ನೂ ಓದಿ: ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಸ್ಫೋಟಕ ಕಾರಣ ಬಿಚ್ಚಿಟ್ಟ ಡಿಹೆಚ್​ಓ

ಜೂ.25 ರಂದು ಯೋಗೇಶ್.ಎಂ.ಕೆ, ಮಂಜುನಾಥ್, ಜೂ.26 ರಂದು 22 ವರ್ಷದ ಸುಪ್ರೀತಾ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸಾವನ್ನಪ್ಪಿದ್ದಾರೆ. ಜೂ.28 ಗೋವಿಂದ (37) ಮೃತಪಟ್ಟಿದ್ದಾರೆ. ಎದೆ ನೋವನ್ನ ನಿರ್ಲಕ್ಷಿಸದೇ ಪರೀಕ್ಷಿಸಿ ಕೊಂಡರೆ ಸಾವುಗಳನ್ನ ತಡೆಯಬಹುದು ಎಂದು ಹೃದಯ ತಜ್ಞ ಆಶ್ರಿತ್ ಶ್ರೀದರ್ ಸಲಹೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:05 am, Sat, 28 June 25

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್