AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಬಿ ದಾಳಿ ತಪ್ಪಿಸುತ್ತೇವೆಂದು ರಾಜ್ಯಾದ್ಯಂತ ಅಧಿಕಾರಿಗಳ ಬಳಿ ಹಣಕ್ಕೆ ಬೇಡಿಕೆಯಿಡುತ್ತಿದ್ದ ಇಬ್ಬರು ಆರೋಪಿಗಳು ಹಾಸನದಲ್ಲಿ ಬಂಧನ!

ಆರೋಪಿಗಳು ಅಧಿಕಾರಿಗಳಿಗೆ ಕರೆ ಮಾಡಿ ನಿಮ್ಮ ಮೇಲೆ ಎಸಿಬಿ ದಾಳಿ ನಡೆಯುತ್ತದೆ. ಇದನ್ನ ತಪ್ಪಿಸಬೇಕಾದರೆ ತಮ್ಮ ಖಾತೆಗೆ ಹಣ ಹಾಕಿ ಎಂದು ಬೇಡಿಕೆ ಇಡುತ್ತಿದ್ದರು. ಬ್ಲಾಕ್ ಮೇಲ್ ಮಾಡಿ ಹಲವರಿಂದ ಹಣ ವಸೂಲಿ ಮಾಡಿಕೊಂಡಿದ್ದಾರಂತೆ.

ಎಸಿಬಿ ದಾಳಿ ತಪ್ಪಿಸುತ್ತೇವೆಂದು ರಾಜ್ಯಾದ್ಯಂತ ಅಧಿಕಾರಿಗಳ ಬಳಿ ಹಣಕ್ಕೆ ಬೇಡಿಕೆಯಿಡುತ್ತಿದ್ದ ಇಬ್ಬರು ಆರೋಪಿಗಳು ಹಾಸನದಲ್ಲಿ ಬಂಧನ!
ಬಂಧಿತ ಆರೋಪಿಗಳು
TV9 Web
| Updated By: sandhya thejappa|

Updated on:May 28, 2022 | 2:28 PM

Share

ಹಾಸನ: ಎಸಿಬಿ (ACB) ಅಧಿಕಾರಿಗಳ ಸೋಗಿನಲ್ಲಿ ವಂಚಿಸುತ್ತಿದ್ದ ಇಬ್ಬರ ವಂಚಕರನ್ನು ಪೊಲೀಸರು (Police) ಅರೆಸ್ಟ್ ಮಾಡಿದ್ದಾರೆ. ಸಕಲೇಶಪುರ ತಾಲೂಕಿನ ಮುಗುಲಿ ಗ್ರಾಮದ ರಜನಿಕಾಂತ್ ಹಾಗೂ ಬೆಳಗಾವಿ ಜಿಲ್ಲೆಯ ಸದಲಗಾ ಗ್ರಾಮದ ಮುರಿಗೆಪ್ಪಾ ಬಂಧನಕ್ಕೆ ಒಳಗಾಗಿದ್ದಾರೆ. ಆರೋಪಿಗಳು ರಾಜ್ಯಾದ್ಯಂತ ಅನೇಕ ಇಲಾಖೆಗಳ ಅಧಿಕಾರಿಗಳಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದರು. ನಿಮ್ಮ ಮೇಲೆ ಎಸಿಬಿ ದಾಳಿ ಮಾಡಲಾಗುವುದು ಎಂದು ಫೋನ್ ಮಾಡಿ ಬೆದರಿಸಿ ಬ್ಲಾಕ್ ಮೆಲ್ ಮಾಡುತ್ತಿದ್ದರೆಂಬ ಆರೋಪ ಕೇಳಿಬಂದಿದೆ.

ಆರೋಪಿಗಳು ಅಧಿಕಾರಿಗಳಿಗೆ ಕರೆ ಮಾಡಿ ನಿಮ್ಮ ಮೇಲೆ ಎಸಿಬಿ ದಾಳಿ ನಡೆಯುತ್ತದೆ. ಇದನ್ನ ತಪ್ಪಿಸಬೇಕಾದರೆ ತಮ್ಮ ಖಾತೆಗೆ ಹಣ ಹಾಕಿ ಎಂದು ಬೇಡಿಕೆ ಇಡುತ್ತಿದ್ದರು. ಬ್ಲಾಕ್ ಮೇಲ್ ಮಾಡಿ ಹಲವರಿಂದ ಹಣ ವಸೂಲಿ ಮಾಡಿಕೊಂಡಿದ್ದಾರಂತೆ. ಆನ್​ಲೈನ್​ ಮೂಲಕ ತಮ್ಮ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಆರರೋಪಿ ಮುರಿಗೆಪ್ಪಾ ವಿರುದ್ಧ 40ಕ್ಕೂ ಕೇಸ್ ಇದ್ದು, ರಜಿನಿಕಾಂತ್ ಕೂಡ 6 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಇಂದು ಹಾಸನದಲ್ಲಿ ಎಸಿಬಿ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ. ಬಂಧಿತರಿಂದ ಹಲವು ಸಿಮ್ ಕಾರ್ಡ್ ಹಾಗೂ ಮೊಬೈಲ್ಗಳನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Universal Account Number: ನಿಮ್ಮ ಇಪಿಎಫ್ ಖಾತೆಯ ಯುಎಎನ್ ಅನ್ನು ಕಂಡುಹಿಡಿಯುವುದು ಹೇಗೆ

ಇದನ್ನೂ ಓದಿ
Image
ಪಾಶ್ಚಿಮಾತ್ಯ ರಾಷ್ಟ್ರಗಳು ನಮ್ಮ ಜನತೆ ಮತ್ತು ಸಂಸ್ಕೃತಿ ವಿರುದ್ಧ ಯುದ್ಧ ಸಾರಿವೆ: ಸೆರ್ಗೇಯಿ ಲವ್ರೋವ್, ರಷ್ಯಾ ವಿದೇಶಾಂಗ ಸಚಿವ
Image
RR vs RCB Qualifier 2: ಆರ್​ಸಿಬಿ ಸೋಲಿಗೆ ಪ್ರಮುಖ ಕಾರಣವಾಗಿದ್ದು ಈ ಒಬ್ಬ ಬೌಲರ್
Image
NT Rama Rao Birth Anniversary: ಇವರಂಥ ಜನಪ್ರಿಯ ನಟ ಮತ್ತು ಜನಾನುರಾಗಿ ನಾಯಕ ಶತಮಾನಕ್ಕೊಬ್ಬರೇ
Image
RR vs RCB Qualifier 2, IPL 2022: ಆರ್​ಸಿಬಿ ವಿರುದ್ಧ ಅಬ್ಬರದ ಶತಕ ಸಿಡಿಸಿ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್!

ಏಪ್ರಿಲ್ 29ಕ್ಕೆ ಬಾಗಲಕೋಟೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗೂ ಕರೆ ಮಾಡಿದ್ದರು. ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಯ ಎಇಇ ಈಶ್ವರ ಕುರಬಗಟ್ಟಿ ದೂರು ದಾಖಲಿಸಿದ್ದರು.

ನಕಲಿ ಎಸಿಬಿ ಆರೋಪಿಗಳ ಪತ್ತೆಗೆ ನಾಲ್ಕು ತಂಡ ರಚನೆ: ಗದಗ ಎಸಿಬಿ ಡಿವೈಎಸ್‌ಪಿ ಎಮ್ ವಿ ಮಲ್ಲಾಪುರ ಹೆಸರಲ್ಲಿ ಫೋನ್ ಮಾಡಿ ಗದಗ ಜಿಲ್ಲೆಯ ರೋಣ ತಹಶೀಲ್ದಾರ್ ಸೇರಿದಂತೆ ಅನೇಕರಿಗೆ ಹಣದ ಬೇಡಿಕೆ ಇಟ್ಟಿದ್ದರು. ಬಾಗಲಕೋಟೆ ಎಸ್‌ಪಿ ಲೋಕೇಶ್ ಜಗಲಾಸರ್, ಹಾಸನ ಎಸ್‌ಪಿ ಆರ್.ಶ್ರೀನಿವಾಸ್‌ಗೌಡ, ಬೆಳಗಾವಿ ಎಸಿಬಿ ಉತ್ತರ ವಲಯದ ಪೊಲೀಸ್ ಅಧೀಕ್ಷಕ ಬಿ.ಎಸ್.ನೇಮಗೌಡ, ಮೈಸೂರು ಎಸಿಬಿ ದಕ್ಷಿಣ ವಲಯದ ಪೊಲೀಸ್ ಅಧೀಕ್ಷಕ ಸಜೀತ ವಿ.ಜೆ. ಅವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆ ತಲಾಶ್ ನಡೆಸಿ ಸದ್ಯ ಇಬ್ಬರನ್ನ ಅರೆಸ್ಟ್ ಮಾಡಲಾಗಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:22 am, Sat, 28 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ