AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಕೊಡಲಿಲ್ಲವೆಂದು ಎರಡೂ ಕಾಲು ಮುರಿದ್ರು; ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ?

ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್‌ ಒಬ್ಬರು ಹಾಸನದ ವ್ಯಕ್ತಿಯೋರ್ವನ ಮೇಲೆ ಕಬ್ಬಿಣದ ರಾಡ್​ನಿಂದ ಥಳಿಸಿದ ಆರೋಪ ಕೇಳಿಬಂದಿದೆ. ಹಲ್ಲೆಗೊಳಗಾದ ವ್ಯಕ್ತಿಯ ಎರಡೂ ಕಾಲುಗಳು ಮುರಿದಿದ್ದು, ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದಶಕದ ಹಿಂದೆ ನೀಡಿದ ಹಣ ವಾಪಸ್ ಕೊಟ್ಟಿಲ್ಲವೆಂಬ ಕಾರಣಕ್ಕೆ ಹಲ್ಲೆ ನಡೆದಿರುವುದಾಗಿ ಸಂತ್ರಸ್ತರು ಹೇಳಿದ್ದಾರೆ.

ಹಣ ಕೊಡಲಿಲ್ಲವೆಂದು ಎರಡೂ ಕಾಲು ಮುರಿದ್ರು; ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ?
ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ?
ಮಂಜುನಾಥ ಕೆಬಿ
| Edited By: |

Updated on:Jan 07, 2026 | 2:26 PM

Share

ಹಾಸನ, ಜನವರಿ 07: ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಮಾರಣಾಂತಿಕ ಹಲ್ಲೆ ಆರೋಪದ ಕೇಳಿ ಬಂದಿದೆ. ಹಾಸನ ತಾಲ್ಲೂಕಿನ ಕಾರ್ಲೆಕೊಪ್ಪಲು ಗ್ರಾಮದ ಶಶಿಧರ್ ಎಂಬವರ ಮೇಲೆ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

‘ಕಬ್ಬಿಣದ ರಾಡ್‌ನಿಂದ ಹಲ್ಲೆ’

ನಿನ್ನೆ ಸಂಜೆ ಹಾಸನ ಜಿಲ್ಲೆಯ ಗೊರೂರು ಸಮೀಪದ ಉಳುವಾರೆ ಗ್ರಾಮದ ಬಳಿ ಇನ್ನೊವಾ ಕಾರಿನಲ್ಲಿ ಬಂದ ಶಿವಕುಮಾರ್ ಹಾಗೂ ಅವರೊಂದಿಗೆ ಇದ್ದ ಇಬ್ಬರು ತನ್ನನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಶಶಿಧರ್ ಆರೋಪಿಸಿದ್ದಾರೆ. ಹಲ್ಲೆಯ ವೇಳೆ ಇಬ್ಬರು ತನ್ನನ್ನು ಹಿಡಿದುಕೊಂಡಿದ್ದು, ಶಿವಕುಮಾರ್ ಕಬ್ಬಿಣದ ರಾಡ್‌ನಿಂದ ನಿರಂತರವಾಗಿ ದಾಳಿ ಮಾಡಿದ್ದಾರೆ ಎಂದು ಶಶಿಧರ್ ಹೇಳಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಶಶಿಧರರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎರಡು ಕಾಲುಗಳು ಮುರಿದಿದ್ದು, ಹದಿನೈದು ಹೊಲಿಗೆ ಹಾಕಲಾಗಿದೆ. ಅಲ್ಲದೇ ಬಲ ಕಣ್ಣಿಗೆ ಗಂಭೀರ ಗಾಯವಾಗಿದೆ ಎಂದು  ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಹಣದ ವಿಚಾರಕ್ಕೆ ಕಲಹ

ಹತ್ತು ವರ್ಷಗಳ ಹಿಂದೆ ಶಿವಕುಮಾರ್ ಹಾಸನದಲ್ಲೇ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ವೇಳೆ ತಮ್ಮ ನಡುವೆ ಹಣಕಾಸಿನ ವ್ಯವಹಾರ ನಡೆದಿತ್ತು ಎಂದು ಶಶಿಧರ್ ಹೇಳಿದ್ದಾರೆ. ತನ್ನ ಹೆಸರಿನಲ್ಲಿ ಆಸ್ತಿ ಮಾಡಿಕೊಳ್ಳಲು ಶಿವಕುಮಾರ್ ಐವತ್ತು ಲಕ್ಷ ರೂಪಾಯಿ ನೀಡಿದ್ದು, ಅದರಲ್ಲಿ ಇಪ್ಪತ್ತು ಲಕ್ಷವನ್ನು ವಾಪಸ್ ಕೊಟ್ಟಿದ್ದೇನೆ. ಉಳಿದ ಮೂವತ್ತು ಲಕ್ಷ ಹಣಕ್ಕಾಗಿ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು. ಹಣ ನೀಡದ ಕಾರಣಕ್ಕೆ ಈ ರೀತಿ ಹಲ್ಲೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:25 pm, Wed, 7 January 26

Follow Us
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ