AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan police: ತಾನು ಹತ್ಯೆ ಮಾಡಿ, ಕುಡುಕನ ತಲೆಗೆ ಕಟ್ಟಲು ಯತ್ನಿಸಿದ್ದ ಖದೀಮ ಅರೆಸ್ಟ್; ಪೊಲೀಸರಿಗೆ ಶಹಬ್ಬಾಸ್ ಎಂದ ಹಾಸನ ಜನ

ರತ್ಮಮ್ಮನ ಒಡವೆ ಆಸೆಗಾಗಿ ಆಕೆಯನ್ನು ಉಸಿರುಗಟ್ಟಿಸಿ ಕೊಂದು ಮೃತದೇಹವನ್ನು ಜೊಳದ ಹೊಲದಲ್ಲಿ ಎಸೆದಿದ್ದ ಹಂತಕ ಮಧುರಾಜ್! ಬಳಿಕ, ಹಂತಕ ತಾನು ದೋಚಿದ್ದ ಚಿನ್ನವನ್ನು ಅಡವಿಟ್ಟು, ಈ ಹಿಂದೆ ತಾನು ಅಡ ಇಟ್ಟಿದ್ದ ಒಡವೆಯನ್ನು ಬಿಡಿಸಿಕೊಂಡಿದ್ದ!

Hassan police: ತಾನು ಹತ್ಯೆ ಮಾಡಿ, ಕುಡುಕನ ತಲೆಗೆ ಕಟ್ಟಲು ಯತ್ನಿಸಿದ್ದ ಖದೀಮ ಅರೆಸ್ಟ್; ಪೊಲೀಸರಿಗೆ ಶಹಬ್ಬಾಸ್ ಎಂದ ಹಾಸನ ಜನ
ಚಿನ್ನಾಭರಣಕ್ಕಾಗಿ ಯೋಧನ ತಾಯಿಯ ಹತ್ಯೆ ಮಾಡಿ, ಕುಡುಕನ ತಲೆಗೆ ಕಟ್ಟಲು ಯತ್ನಿಸಿದ್ದ ಖದೀಮ ಅರೆಸ್ಟ್; ಪೊಲೀಸರಿಗೆ ಶಹಬ್ಬಾಸ್ ಎಂದ ಹಾಸನ ಜನ
TV9 Web
| Updated By: ಸಾಧು ಶ್ರೀನಾಥ್​|

Updated on: Sep 22, 2022 | 4:33 PM

Share

ಹಾಸನ: ಎರಡು ತಿಂಗಳ ಹಿಂದೆ ಸೈನಿಕನ ತಾಯಿ ನಿಗೂಢ ರೀತಿಯಲ್ಲಿ ಕಾಣೆಯಾಗಿ (ಜುಲೈ 20 ರಿಂದ), 52 ದಿನಗಳ ಬಳಿಕ ಅಸ್ತಿ ಪಂಜರವಾಗಿ (ಸೆಪ್ಟೆಂಬರ್ 12 ರಂದು) ಪತ್ತೆಯಾಗಿದ್ದರು. ತಾಯಿಯನ್ನು ಕೊಲೆ ಮಾಡಲಾಗಿದೆ ಎಂದು ಮಹೇಶ್ ಎಂಬುವವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ದನ ಮೇಯಿಸಲು ಜಮೀನಿನ ಬಳಿ ಹೋಗಿದ್ದ ಮಹಿಳೆ ರತ್ನಮ್ಮ ಅವರನ್ನು ಚಿನ್ನಾಭರಣಕ್ಕಾಗಿ ಕೊಲೆ ಮಾಡಲಾಗಿದೆ ಎನ್ನೋದು ಮನೆಯವರ ಆರೋಪವಾಗಿತ್ತು.

ಜನರ ಆರೋಪದ ನಡುವೆ ಒತ್ತಡಕ್ಕೆ ಸಿಲುಕಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರೂ ಸಹ ಸಾವಿನ ರಹಸ್ಯ ಮಾತ್ರ ಬಯಲಾಗಿರಲಿಲ್ಲ. ಹೇಗಾದರೂ ಸರಿ ಪ್ರಕರಣ ಬೇಧಿಸಲೇ ಬೇಕೆಂದು ಛಲಬಿಡದೆ ಪೊಲೀಸರು ತನಿಖೆ ಮುಂದುವರೆಸಿದ್ದರು. ಆರೋಪಿಯ ಸುಳ್ಳು ಪತ್ತೆ ಪರೀಕ್ಷೆಗಾಗಿ ನ್ಯಾಯಾಲಯದಿಂದ ಅನುಮತಿ ಪಡೆದು ಪರೀಕ್ಷೆಯ ತಯಾರಿಯಲ್ಲಿದ್ದರು.

ಈ ನಡುವೆ ಊರಿನಲ್ಲೇ ಇದ್ದ ಮತ್ತೊಬ್ಬನ ಮೇಲೆ ಅನುಮಾನಗೊಂಡು ಆತನ ವಿಚಾರಣೆ ಮಾಡಿದಾಗ ಬಯಲಾಗಿತ್ತು ಕೊಲೆ ಕೇಸ್! ರತ್ಮಮ್ಮನ ಒಡವೆ ಆಸೆಗಾಗಿ ಆಕೆಯನ್ನು ಉಸಿರುಗಟ್ಟಿಸಿ ಕೊಂದು ಮೃತದೇಹವನ್ನು ಜೊಳದ ಹೊಲದಲ್ಲಿ ಎಸೆದಿದ್ದ ಹಂತಕ ಮಧುರಾಜ್! ಬಳಿಕ, ಹಂತಕ ತಾನು ದೋಚಿದ್ದ ಚಿನ್ನವನ್ನು ಅಡವಿಟ್ಟು, ಈ ಹಿಂದೆ ತಾನು ಅಡ ಇಟ್ಟಿದ್ದ ಒಡವೆಯನ್ನು ಬಿಡಿಸಿಕೊಂಡಿದ್ದ!

ಆತನ ಮೊಬೈಲ್ ಪರಿಶೀಲನೆ ಮಾಡಿದಾಗ ಸಿಕ್ಕ ಅದೊಂದು ಮೆಸೇಜ್ ಹಿಂದೆ ಬಿದ್ದ ಪೊಲೀಸರಿಗೆ ರತ್ನಮ್ಮಗೆ ಸೇರಿದ ಒಡವೆ, ಜೊತೆಗೆ ಕೊಲೆಯ ಹಂತಕ‌ ಕೂಡ ಸಿಕ್ಕಿ ಬಿದ್ದಿದ್ದ. ತಾನು ಕೊಂದು ಕೊಲೆಯನ್ನು ಕುಡಿತದ ಚಟಕ್ಕೆ ದಾಸನಾಗಿದ್ದ ಮಹೇಶ್ ವಿರುದ್ಧ ಕಟ್ಟಲು ತಂತ್ರ ಹೆಣೆದಿದ್ದ. ಆರೋಪಿ ಎನಿಸಿಕೊಂಡಿದ್ದ ಮಹೇಶನ ವಿರುದ್ಧ ವದಂತಿ ಹರಡಿದ್ದ. ಇದನ್ನೇ ನಂಬಿದ ರತ್ನಮ್ಮ ಮನೆಯವರು ಕೂಡ ಮಹೇಶ್ ಮೇಲೆಯೇ ಆರೋಪ ಮಾಡುತ್ತಿದ್ದರು. ಆದರೆ ನಿಜವಾಗಿಯೂ ಹತ್ಯೆ ಮಾಡಿದ್ದ ಎನ್ನಲಾದ ಮಧುರಾಜ್ ಮಾತ್ರ ಊರಿನಲ್ಲೇ ಇದ್ದು ಏನೂ ಗೊತ್ತಿಲ್ಲದವನಂತೆ ನಾಟಕ ಆಡಿದ್ದ. ಆದರೆ ಪೊಲೀಸರ ಚಾಣಾಕ್ಷತನದಿಂದ ಕಗ್ಗಂಟಾಗಿದ್ದ ಕೊಲೆ ಕೇಸ್ ಇದೀಗ ಬಟಾಬಯಲಾಗಿದೆ. ಸೈನಿಕನ ತಾಯಿಯ ಸಾವಿನ ಸತ್ಯ ಹೊರ ಬಿದ್ದಿದೆ. ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಸುರೇಶ್ ನೇತೃತ್ವದಲ್ಲಿ ತನಿಖಾ ತಂಡ ಕೊಲೆ ಕೇಸ್ ಬಯಲು ಮಾಡಿತ್ತು. ಎರಡು ತಿಂಗಳ ಬಳಿಕ ಕೊಲೆ ಕೇಸ್ ನ ರಹಸ್ಯ ಬೇಧಿಸಿದ ಪೊಲೀಸರ ಕಾರ್ಯವೈಖರಿಗೆ ಎಲ್ಲ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?