AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜೆಡಿಎಸ್ ಮೈತ್ರಿ ಲೋಕಸಭಾ ಚುನಾವಣೆಗೆ ಸೀಮಿತವಲ್ಲ, ಶಾಶ್ವತ: ಬಿವೈ ವಿಜಯೇಂದ್ರ

ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಲೋಕಸಭೆ ಚುನಾವಣೆಯ ನಂಗತರವೂ ಮುಂದುವರಿಯುವುದು ದೃಢಪಟ್ಟಿದೆ. ಈ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರು ಈಗಾಗಲೇ ಘೋಷಣೆ ಮಾಡಿದ್ದರು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಮೈತ್ರಿ ಮುಂದುವರಿಯಲಿದೆ ಎಂದಿದ್ದಾರೆ.

ಬಿಜೆಪಿ ಜೆಡಿಎಸ್ ಮೈತ್ರಿ ಲೋಕಸಭಾ ಚುನಾವಣೆಗೆ ಸೀಮಿತವಲ್ಲ, ಶಾಶ್ವತ: ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ
ಮಂಜುನಾಥ ಕೆಬಿ
| Edited By: |

Updated on: Apr 04, 2024 | 12:59 PM

Share

ಹಾಸನ, ಏಪ್ರಿಲ್ 4: ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ (BJP JDS Alliance) ಶಾಶ್ವತವಾದದ್ದು. ಲೋಕಸಭಾ ಚುನಾವಣೆಗೆ (Lok Sabha Elections) ಮಾತ್ರ ಸೀಮಿತವಾಗಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದರು. ಹಾಸನದಲ್ಲಿ ಮೈತ್ರಿ ಅಭ್ಯರ್ಥಿ, ಜೆಡಿಎಸ್​​ ಸಂಸದ ಪ್ರಜ್ವಲ್ ರೇವಣ್ಣ ನಾಮಪತ್ರ (Prajwal Revanna Nomination) ಸಲ್ಲಿಕೆ ವೇಳೆ ಹಾಜರಿದ್ದು ಅವರು ಮಾತನಾಡಿದರು. ರೈತ, ದಲಿತ ವಿರೋಧಿ ಕಾಂಗ್ರೆಸ್​ ಪಕ್ಷವನ್ನು ದೇಶದಿಂದ ಕಿತ್ತೊಗೆಯಬೇಕು. ಆ ನಿಟ್ಟಿನಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ನಮ್ಮೆಲ್ಲರ ಹಿರಿಯರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಆಶೀರ್ವಾದ ಮಾಡಿರಲಿಲ್ಲ. ಈ ಚುನಾವಣೆಯಲ್ಲಿ ದೇವೇಗೌಡರ ಆಶೀರ್ವಾದ ನಮ್ಮ ಮೇಲಿದೆ ಎಂದು ವಿಜಯೇಂದ್ರ ಹೇಳಿದರು.

ಪ್ರಧಾನಿ ಮೋದಿ ಅವರಿಗಾಗಿ ಹೆಚ್​ಡಿ ದೇವೇಗೌಡರು ಮೈತ್ರಿ ಮಾಡಿಕೊಂಡಿದ್ದಾರೆ. ದೇವೇಗೌಡರು ಖುದ್ದು ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಹಾಸನ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ನಾವು ಕೆಲಸ ಮಾಡಬೇಕು ಎಂದು ವಿಜಯೇಂದ್ರ ಹೇಳಿದರು.

ಜೆಡಿಎಸ್​ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಮೊಮ್ಮಗ ಪ್ರಜ್ವಲ್ ನಾಮಪತ್ರ ಸಲ್ಲಿಕೆ ವೇಳೆ ದೇವೇಗೌಡರು ಹಾಜರಿದ್ದರು. ಉಳಿದಂತೆ ಬಿವೈ ವಿಜಯೇಂದ್ರ, ಹೆಚ್.ಡಿ.ರೇವಣ್ಣ, ಡಿ.ವಿ.ಸದಾನಂದ ಗೌಡ ಹಾಜರಿದ್ದರು.

ನಾಮಪತ್ರ ಸಲ್ಲಿಕೆ ಬಳಿಕ ದೇವೇಗೌಡರ ನೇತೃತ್ವದಲ್ಲಿ ರೋಡ್​ಶೋ ನಡೆಯಿತು. ಹಾಸನದಲ್ಲಿ ಮೊಮ್ಮಗ ಪ್ರಜ್ವಲ್ ಪರ ದೇವೇಗೌಡ ರೋಡ್​ಶೋ ನಡೆಸಿ ಮತಯಾಚನೆ ಮಾಡಿದರು.

ಮೈತ್ರಿ ತಾತ್ಕಾಲಿಕವಲ್ಲ ಎಂದಿದ್ದ ಕುಮಾರಸ್ವಾಮಿ, ದೇವೇಗೌಡ

ಈ ಮೈತ್ರಿ ತಾತ್ಕಾಲಿಕವಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಲೋಕಸಭೆ ಚುನಾವಣೆ ನಂತರವೂ ಮುಂದುವರಿಯಲಿದೆ. ಮೈತ್ರಿ ನಾಯಕರು ಭದ್ರ ಬುನಾದಿ ಹಾಕಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಅಸಾಧ್ಯ ಎಂದು ಇತ್ತೀಚೆಗೆ ಕುಮಾರಸ್ವಾಮಿ ಸಹ ಹೇಳಿದ್ದರು. ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ ಮಾರ್ಚ್​ 30ರಂದು ಘೋಷಣೆ ಮಾಡಿದ್ದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ ನಂತರವೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ: ದೇವೇಗೌಡ ಅಧಿಕೃತ ಘೋಷಣೆ

ತುಮಕೂರಿನಲ್ಲಿ ನಡೆದಿದ್ದ ಜಿಲ್ಲಾ ಮಟ್ಟದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ದೇವೇಗೌಡರು, ಚುನಾವಣೆ ಮುಗಿದ ಮೇಲೆಯೂ ಬಿಜೆಪಿ ಜೆಡಿಎಸ್ ಸಂಬಂಧ ಮುಂದುವರೆಯುತ್ತದೆ. ಈ ಸಂಬಂಧ ಕಾಪಾಡಿಕೊಂಡು‌ ಹೋಗುತ್ತೇವೆ. ನಮ್ಮ ಬಾಂಧವ್ಯ ತಾತ್ಕಾಲಿಕವಲ್ಲ. ಈ ಬಾಂಧವ್ಯವನ್ನ ಮುಂದುವರೆಸಿಕೊಂಡು ಹೋಗುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ